ಪರಿಹಾರ ನೀಡದಿದ್ದರೆ ವಿಮೆ ತುಂಬಬೇಡಿ ಎಂದು ನಾನೇ ಹೇಳುವೆ

KannadaprabhaNewsNetwork |  
Published : Apr 26, 2026, 02:15 AM IST
್ಿ | Kannada Prabha

ಸಾರಾಂಶ

ರೈತರಿಗೆ ಸರಿಯಾದ ಪರಿಹಾರ ಸಿಗದಿದ್ದರೆ ವಿಮೆ ಮಾಡದಂತೆ ರೈತರಿಗೆ ನಾವೇ ಹೇಳಬೇಕಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ವಿಮಾ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ, ತುಮಕೂರುರೈತರಿಗೆ ಸರಿಯಾದ ಪರಿಹಾರ ಸಿಗದಿದ್ದರೆ ವಿಮೆ ಮಾಡದಂತೆ ರೈತರಿಗೆ ನಾವೇ ಹೇಳಬೇಕಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ವಿಮಾ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಜಿಲ್ಲಾ ಪಂಚಾಯ್ತಿಯಲ್ಲಿ ಶನಿವಾರ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಅವರು, ವಿಮಾ ಕಂಪನಿ ರೈತರಿಂದ ವಿಮೆ ಮಾಡಿಸಿ ಪರಿಹಾರ ಕೊಡುವಾಗ ನಿಬಂಧನೆಗಳನ್ನು ವಿಧಿಸಿ ಕಡಿಮೆ ಪರಿಹಾರ ನೀಡುವುದು ಸರಿಯಲ್ಲ. ರೈತರಿಗೆ ಸರಿಯಾದ ವಿಮೆ ಸಿಗದಿದ್ದರೆ ಮುಂದಿನ ದಿನಗಳಲ್ಲಿ ನಾವೇ ರೈತರಿಗೆ ವಿಮಾ ಮಾಡದಂತೆ ತಿಳಿಸಬೇಕಾಗುತ್ತದೆ ಎಂದರು. ಅಲ್ಲದೆ ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಮಾ ಕಂಪನಿಗಳ ಸಭೆ ಕರೆದು ಚರ್ಚಿಸಿ ನಿಬಂಧನೆಗಳನ್ನು ಸಡಿಲಗೊಳಿಸಲು ತಿಳಿಸಬೇಕು. ಅಲ್ಲದೆ ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿ. ಮುಂದಿನ ತೀರ್ಮಾನವನ್ನು ರ್ಕಾ ರ ಕೈಗೊಳ್ಳಲಿದೆ ಎಂದರು.ಕೃಷಿ ಇಲಾಖೆ ಮಾಹಿತಿ ಪಡೆಯುವ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಹೋಲಿಸಿದರೆ ಕುಣಿಗಲ್ ತಾಲೂಕಿನಲ್ಲಿ ಮಾತ್ರ ಅತ್ಯಂತ ಕಡಿಮೆ 1453 ರೈತರು ವಿಮೆ ಮಾಡಿಸಿದ್ದಾರೆ. ಕಾರಣ ಏನು ಎಂದು ಪ್ರಶ್ನಿಸಿದರು. ಶಾಸಕ ಎಚ್.ಡಿ.ರಂಗನಾಥ್ ಅವರು ಕೇಂದ್ರ ಸರ್ಕಾರದ ಮೇಲೆ ರೈತರು ವಿಶ್ವಾಸ ಕಳೆದುಕೊಂಡಿದ್ದಾರೆ. ಹಾಗಾಗಿ ರೈತರು ವಿಮೆ ಮಾಡಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತರಿಗೆ ವಿಮೆ ಮಾಡಿಸುವ ಸಂಬಂಧ ಜಾಗೃತಿ ಮೂಡಿಸಬೇಕು. ಅಲ್ಲದೆ ವಿಮಾ ಕಂಪನಿಗಳ ನಿಬಂಧನೆಗಳನ್ನು ಪರಿಷ್ಕರಿಸಬೇಕು ಹಾಗೂ ನಿಯಮಗಳ ಸಡಿಲಿಕೆಯೂ ಆಗಬೇಕು. ಈ ಬಗ್ಗೆ ರಾಜ್ಯ ಸರ್ಕಾರರ ಮಧ್ಯ ಪ್ರವೇಶಿಸಬೇಕು ಎಂದು ಸಭೆಯಲ್ಲಿದ್ದ ಶಾಸಕರು ಆಗ್ರಹಿಸಿದರು. ವಿಮಾ ಕಂಪನಿಗಳು ರೈತರ ವಿಮಾ ಹಣದಿಂದಲೇ ಬದುಕುತ್ತಿರವುದು. ಜಿಲ್ಲೆಯಲ್ಲಿ 7 ಕೋಟಿ ರೂ. ವಿಮೆ ಪಡೆದು 1.5 ಕೋಟಿ ರೂ. ಪರಿಹಾರ ನೀಡಿವೆ ಎಂದರೆ ಏರ್ಥತ ಎಂದು ಸಭೆಯಲ್ಲಿ ಶಾಸಕರು ಪ್ರಶ್ನಿಸಿದರು. ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾವು ಬೆಳೆನಷ್ಟದ ಬಗ್ಗೆ ಪರಿಶೀಲಿಸಿ ಸರ್ಕಾರರಕ್ಕೆ ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದರು.

ಪ್ರಸ್ತುತ ಜಿಲ್ಲೆಯ ಕೆಲವು ಭಾಗದಲ್ಲಿ ಸರ್ಕಾರಿ ಶಾಲೆ, ಕಟ್ಟಡಗಳು ಸೇರಿದಂತೆ ಡೀಮ್ಡ್ ಅರಣ್ಯ ವ್ಯಾಪ್ತಿಯಲ್ಲಿವೆ ಎಂದು ಹೇಳಲಾಗುತ್ತಿದೆ. ಇದು ಕಂದಾಯ ಹಾಗೂ ಅರಣ್ಯ ಇಲಾಖೆ ನಡುವೆ ತಿಕ್ಕಾಟ ಇದೆ. ಆದ್ದರಿಂದ ಅರಣ್ಯ ಇಲಾಖೆ ತಕ್ಷಣ ಜಂಟಿ ಸರ್ವೆ ಮಾಡಿಸಿ ಕಂದಾಯ ಇಲಾಖೆ ಜಾಗ ಇದ್ದರೆ ಕಂದಾಯ ಇಲಾಖೆಗೆ ಬಿಟ್ಟು ಕೊಡಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ 4584 ಜಾನುವಾರುಗಳ ಸಾವಿನ ಕಾರಣದ ಬಗ್ಗೆ ಚರ್ಚಿಸಲಾಯಿತು. ಸಂಬಂಧಿಸಿದ ಪರಿಹಾರಗಳನ್ನು ಶೀಘ್ರ ರೈತರಿಗೆ ನೀಡಬೇಕು ಎಂದರು. ಅಲ್ಲದೆ ನವಿಲುಗಳು ಸಾವೀಡಾಗುತ್ತಿರುವ ಬಗ್ಗೆ ವರದಿಯಾಗುತ್ತಿವೆ. ಇದು ಹಕ್ಕಿಜ್ಚರದ ಶಂಕೆ ವ್ಯಕ್ತವಾಗಿದ್ದು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ. ವಾರದಲ್ಲಿ ವರದಿ ಬರುವ ಸಾಧ್ಯತೆ ಇರುವುದರಿಂದ ಅಲ್ಲಿಯವರೆಗೆ ಕಾಯಬೇಕಾಗುತ್ತದೆ ಎಂದು ಸಚಿವರು ತಿಳಿಸಿದರು.

ರೇಷ್ಮೆ ಬೆಳೆಗಾರರಿಗೆ ನೀಡಬೇಕಾಗಿರುವ ಪ್ರೋತ್ಸಾಹ ಧನ ಹಾಗೂ ಬೋನಸ್ ಧನ 6 ಕೋಟಿ ರು. ವಿತರಣೆ ಬಾಕಿ ಇದ್ದು, ಈ ಬಗ್ಗೆ ಜಿಲ್ಲೆಯಿಂದ ರೇಷ್ಮೆ ಇಲಾಖೆ ಕೇಂದ್ರ ಕಚೇರಿಗೆ ಪತ್ರ ಬರೆದು ವಿತರಣೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರಸಕ್ತ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಶೇಕಡಾವಾರು ಫಲಿತಾಂಶ ಉತ್ತಮವಾಗಿದೆ. ಆದರೆ ರಾಜ್ಯದಲ್ಲಿ ಸ್ಥಾನ ಕೆಳಗಿಳಿದಿರುವುದು ಸ್ವಲ್ಪ ಮಟ್ಟಿನ ಅಸಮಾಧಾನ. ಶಾಲಾ ಶಿಕ್ಷಣ ಇಲಾಖೆಯ ತುಮಕೂರು ಹಾಗೂ ಮಧುಗಿರಿ ಎರಡೂ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಿರ್ದಿಷ್ಟ ವಿಷಯಗಳಲ್ಲಿ ಕಳಪೆ ಪ್ರಗತಿ ತೋರಿಸಿರುವ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಬೇಕು ಹಾಗೂ ಮುಂದಿನ ದಿನಗಳಲ್ಲಿ ಕಡಿಮೆ ಸಾಧನೆ ಮಾಡುವ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ ಅವಶ್ಯವಿದೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ‌ಮಾಡಲಾಯಿತು. ಸಭೆಯಲ್ಲಿ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ.ಹೆಗಡೆ, ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್ಸಿಗೆ ಸೋನಿಯಾ, ಪ್ರಿಯಾಂಕಾ ಅಷ್ಟೇ ಮಹಿಳೆಯರು: ಹರೀಶ್
ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಮಾಡಿಕೊಳ್ಳಲಿ