ಅಂಗನವಾಡಿ ಕಾರ್ಯಕರ್ತೆರ ಹೋರಾಟಕ್ಕೆ ನನ್ನ ಬೆಂಬಲವಿದೆ

KannadaprabhaNewsNetwork |  
Published : Dec 22, 2024, 01:33 AM IST
೨೧ ಹೆಚ್.ಆರ್.ಆರ್ ೪ ಹರಿಹರದ ಗುರುಭವನದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರ ಸಮಾವೇಶವನ್ನು ಶಾಸಕ ಬಿ.ಪಿ ಹರೀಶ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಹರಿಹರ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಖಾಯಂಗೊಳಿಸಲು ಸರ್ಕಾರ ಮುಂದಾಗಬೇಕು ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಶಾಸಕ ಬಿ.ಪಿ ಹರೀಶ್ ಹೇಳಿದರು.

ಹರಿಹರ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಖಾಯಂಗೊಳಿಸಲು ಸರ್ಕಾರ ಮುಂದಾಗಬೇಕು ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಶಾಸಕ ಬಿ.ಪಿ ಹರೀಶ್ ಹೇಳಿದರು. ನಗರದ ಗುರುಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯರ್ತೆಯರ ಮತ್ತು ಸಹಾಯಕಿಯರ ಮಹಾ ಮಂಡಳ ಹಾಗೂ ಶಿಶು ಅಭಿವೃದ್ಧಿ ಇಲಾಖೆಯಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಸಮಾವೇಶ, ವಯೋ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಕಳೆದ ಹಲವಾರು ವರ್ಷಗಳಿಂದ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಎಲ್ಲಾ ವರ್ಗದ ಮಕ್ಕಳ, ಮಹಿಳೆಯರ, ತಾಯಂದಿರ, ಗರ್ಭಿಣಿಯರ, ಬಾಣಂತಿಯರ ಯೋಗ ಕ್ಷೇಮ ವಿಚಾರಿಸುತ್ತ ಉತ್ತಮ ಕೆಲಸ ನಿರ್ವಹಿಸುತ್ತಿರುವುದು ಶ್ಲಾಘನಿಯ ಕಾರ್ಯವಾಗಿದೆ. ಆದರೆ, ಸರ್ಕಾರ ಅವರು ಮಾಡುತ್ತಿರುವ ಕೆಲಸಕ್ಕೆ ತಕ್ಕ ಸಂಬಳ ನೀಡುತ್ತಿಲ್ಲ. ಕೇವಲ ಗೌರವ ಧನದಿಂದಲೆ ಅವರನ್ನು ದುಡಿಸಿಕೊಳ್ಳುತ್ತಿರುವುದು ನೋವಿನ ಸಂಗತಿಯಾಗಿದೆ ಎಂದರು.ದೇಶದ ಭದ್ರ ಬುನಾದಿಯಾಗಿರುವ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿಮ್ಮನ್ನು ಸರ್ಕಾರ ಖಾಯಂ ನೌಕರರೆಂದು ಘೋಷಿಸಬೇಕು ಎಂದ ಅವರು, ನಿಮ್ಮ ಹೋರಾಟಕ್ಕೆ ಸದಾ ಬೆಂಬಲಿಸುತ್ತೆನೆಂದು ಹೇಳಿದರು.

ಮಾಜಿ ಶಾಸಕ ಹೆಚ್.ಎಸ್ ಶಿವಶಂಕರ್, ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ರಾಜ್ಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ರಾಜ್ಯಾಧ್ಯಕ್ಷ ಜಿ.ಆರ್.ಶಿವಶಂಕರ, ಕಾರ್ಯದರ್ಶಿ ನಾಗರತ್ನಾ, ತಾಲೂಕು ಅಧ್ಯಕ್ಷೆ ಸುಮಿತ್ರಮ್ಮ ಗೀತಾ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಸಿಆರ್‌ಇ ಎಸ್ಪಿ, ಡಿವೈಎಸ್ಪಿ ವಿರುದ್ಧ ದಲಿತ ಇನ್ಸ್‌ಪೆಕ್ಟರ್ ಕಿರುಕುಳ ಆರೋಪ
ಈ ಬಾರಿ ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿ ಶೇ. 30-35ರಷ್ಟು ಇಳಿಮುಖ