ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತನಗೆ ಪಕ್ಷ ಅವಕಾಶ ನೀಡಿದೆ. ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತೇನೆ. ಪಕ್ಷ ನನಗೆ ಹಲವು ಅವಕಾಶಗಳನ್ನು ನೀಡಿದೆ. 12 ರಾಜ್ಯಗಳಲ್ಲಿ ಕೆಲಸ ಮಾಡಿದ್ದೇನೆ. ಅಜ್ಜ, ಅಪ್ಪ ಶಾಸಕರಾಗಿದ್ದರು. ನಾನು ಕೂಡ ಪಾಲಿಕೆಯ ಸದಸ್ಯನಾಗಿದ್ದೆ, ಈ ಎಲ್ಲಾ ಅನುಭವಗಳ ಸಾರದಿಂದ ಜಿಲ್ಲೆಯಲ್ಲಿ ಪಕ್ಷವನ್ನು ಮುನ್ನಡೆಸುವೆ. ಸವಾಲುಗಳು ಇರುವುದು ನಿಜ. ಸಮರ್ಥವಾಗಿ ಅವುಗಳನ್ನು ಎದುರಿಸುವೆ ಎಂದರು.
ತೀರ್ಥಹಳ್ಳಿ, ಶಿಕಾರಿಪುರ ಮುಂತಾದ ಕಡೆಗಳಲ್ಲಿ ಪಕ್ಷದಲ್ಲಿಯೇ ಬಣ ರಾಜಕಾರಣ ಇದೆ. ಶಿವಮೊಗ್ಗ ಇದಕ್ಕೆ ಹೊರತಾಗಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಯಾವ ಬಣವು ಇಲ್ಲ. ಸಹಜವಾದ ಅಭಿಪ್ರಾಯಗಳು ಇದ್ದೇ ಇರುತ್ತವೆ. ಒಂದು ಸ್ಥಾನಕ್ಕೆ ಹಲವು ಆಕಾಂಕ್ಷಿಗಳು ಇರುತ್ತಾರೆ. ಹಾಗಂತ ಇದು ಒಗ್ಗಟ್ಟನ್ನು ಮುರಿಯುವುದಿಲ್ಲ. ಎಲ್ಲರನ್ನು ಪ್ರೀತಿ, ವಿಶ್ವಾಸಗಳಿಂದಲೇ ಗೆಲ್ಲುತ್ತೇನೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯು ಸೇರಿದಂತೆ ಮುಂದಿನ ವಿಧಾನಸಭಾ ಚುನಾವಣೆಗೆ ಈಗೀನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತೇನೆ ಎಂದರು.ತೀರ್ಥಹಳ್ಳಿಗೆ ಶನಿವಾರ ಮುಖ್ಯಮಂತ್ರಿ ಬರುತ್ತಿದ್ದಾರೆ. ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಅಲ್ಲಿ ಚರ್ಚೆ ನಡೆಯುತ್ತದೆ. ಸುಮಾರು 25000 ರೈತರು ಸೇರುತ್ತಾರೆ. ಮುಖ್ಯಮಂತ್ರಿಗಳು ರೈತರೊಂದಿಗೆ ಸಂವಾದ ನಡೆಸುತ್ತಾರೆ. ವರದಿಯಿಂದ ಆಗುವ ತೊಂದರೆಗಳ ಬಗ್ಗೆ ಮಾಹಿತಿ ಪಡೆಯುತ್ತಾರೆ. ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂಬುದು ನಮ್ಮ ಆಶಯವಾಗಿದೆ ಎಂದರು.
ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ಉಪಾಧ್ಯಕ್ಷರಾದ ಎಸ್.ಟಿ.ಚಂದ್ರಶೇಖರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಬಂಡಿ, ಮುಖಂಡರಾದ ಶ್ರೀನಿವಾಸ್ ಕರಿಯಣ್ಣ, ಕಲೀಂ ಪಾಷ, ಶಿವಕುಮಾರ್, ಹಾಪ್ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್, ಜಿ.ಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಟಿ.ಹಾಲಪ್ಪ, ಪ್ರಮುಖರಾದ ದೇವೇಂದ್ರಪ್ಪ, ಮಧು, ವಿಶ್ವನಾಥ್ ಕಾಶಿ, ಬಾಬು, ಗಂಗಾಧರ, ಧೀರಾಜ್ ಹೊನ್ನವಿಲೆ, ಶಿವಣ್ಣ ಇನ್ನಿತರರು ಇದ್ದರು.
ಪೋಟೋ: 18ಎಸ್ಎಂಜಿಕೆಪಿ08