ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುವೆ

KannadaprabhaNewsNetwork |  
Published : Oct 05, 2025, 01:02 AM IST
ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತೇನೆ: ಶಾಸಕ ರಾಜೂಗೌಡ ಪಾಟೀಲ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಪಿಪಿಪಿ ಮಾದರಿ ನಮಗೆ ಗೊತ್ತಿರಲಿಲ್ಲ. ವೈದ್ಯಕೀಯ ಸಚಿವ ಶರಣಪ್ರಕಾಶ ಪಾಟೀಲ ಪಿಪಿಪಿ ಕುರಿತು ಸದನದಲ್ಲಿ ಚರ್ಚೆ ಮಾಡಿದಾಗಲೇ ನಮಗೆ ಗೊತ್ತಾಯಿತು. ಮುಂದಿನ ಕ್ಯಾಬಿನೆಟ್ ಸಭೆ ವಿಜಯಪುರದಲ್ಲಿ ನಡೆಯಲಿದೆ. ಇದರ ಬಗ್ಗೆ ನಾನು ಸಭೆಯಲ್ಲಿ ಮಾತನಾಡುತ್ತೇನೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತೇನೆ ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಪಿಪಿಪಿ ಮಾದರಿ ನಮಗೆ ಗೊತ್ತಿರಲಿಲ್ಲ. ವೈದ್ಯಕೀಯ ಸಚಿವ ಶರಣಪ್ರಕಾಶ ಪಾಟೀಲ ಪಿಪಿಪಿ ಕುರಿತು ಸದನದಲ್ಲಿ ಚರ್ಚೆ ಮಾಡಿದಾಗಲೇ ನಮಗೆ ಗೊತ್ತಾಯಿತು. ಮುಂದಿನ ಕ್ಯಾಬಿನೆಟ್ ಸಭೆ ವಿಜಯಪುರದಲ್ಲಿ ನಡೆಯಲಿದೆ. ಇದರ ಬಗ್ಗೆ ನಾನು ಸಭೆಯಲ್ಲಿ ಮಾತನಾಡುತ್ತೇನೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತೇನೆ ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಹೇಳಿದರು.

17ನೇ ದಿನಕ್ಕೆ ಕಾಲಿಟ್ಟ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿ, ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, 150 ಎಕರೆ ಜಮೀನು ಹೊಂದಿರುವ ಏಕೈಕ ಜಿಲ್ಲೆ ನಮ್ಮದು. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಎಲ್ಲಾ ಅವಕಾಶಗಳಿವೆ. ಕಳೆದ 17 ದಿನಗಳಿಂದ ನ್ಯಾಯಯುತವಾದ ಹೋರಾಟ ಮಾಡುತ್ತಿದ್ದೀರಿ. ಜಿಲ್ಲೆಯ ಶಾಸಕನಾಗಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ ನಿಮ್ಮ ಹೋರಾಟದಲ್ಲಿ ನಾನು ನಿಮ್ಮೊಂದಿಗೆ ಇರುತ್ತೇನೆ ಎಂದು ಭರವಸೆ ನೀಡಿದರು.

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಅಧ್ಯಕ್ಷ ವಿಜಯ ಜಾಧವ, ಬಂಜರಾ ಸಮುದಾಯದ ಮುಖಂಡರಾದ ರಾಜಪಾಲ ಚವ್ಹಾಣ, ಮಹೀಂದ್ರಕುಮಾರ ನಾಯಕ, ರಾಜಕುಮಾರ ಜಾಧವ, ಶೈಲಜಾ ಚವ್ಹಾಣ, ಡಾ.ರವಿದಾಸ ಜಾಧವ, ಅನಿಲ ರಾಠೋಡ ಸೇರಿದಂತೆ ಹಲವರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು. ಹೋರಾಟ ಸಮಿತಿಯ ಅರವಿಂದ ಕುಲಕರ್ಣಿ, ಭಗವಾನರೆಡ್ಡಿ, ಅನಿಲ ಹೊಸಮನಿ, ಸುರೇಶ ಬಿಜಾಪುರ, ಭರತಕುಮಾರ.ಹೆಚ್.ಟಿ, ಮಲ್ಲಿಕಾರ್ಜುನ ಬಟಗಿ, ಮಲ್ಲಿಕಾರ್ಜುನ ಕೆಂಗನಾಳ, ಲಕ್ಷ್ಮಣ ಕಂಬಾಗಿ, ಸಿದ್ದಲಿಂಗ ಬಾಗೇವಾಡಿ, ಗೀತಾ.ಎಚ್, ಶಿವಬಾಳಮ್ಮು ಕೊಂಡಗೂಳಿ, ಕಾವೇರಿ ರಜಪೂತ, ದಸ್ತಗೀರ ಉಕ್ಕಲಿ, ಅಕ್ಷಯ ಅಜಮನಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ