ದೇವನಹಳ್ಳಿ: ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಎಚ್.ಎನ್.ನಾಗೇಶ್ ತಿಳಿಸಿದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯತೀಶ್ಕುಮಾರ್ ಮಾತನಾಡಿ, ಅನೇಕ ಅಡೆತಡೆಗಳ ಮಧ್ಯೆ ಚುನಾವಣೆ ನಡೆದು ಎಚ್.ಎನ್.ನಾಗೇಶ್ ತಂಡಕ್ಕೆ ಜಯಸಿಕ್ಕಿದೆ. ಶಿಕ್ಷಕರ ಸಮಸ್ಯೆಗಳು ಸಾಕಷ್ಟಿವೆ. ಎನ್ಪಿಎಸ್ ಹೋರಾಟ, ಶಿಕ್ಷಕರ ಒತ್ತಡ ಕಡಿಮೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಶಾಲೆಯ ಬಿಸಿಯೂಟ ಮೊಟ್ಟೆ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯಸಂಘದ ಮೂಲಕ ಸರ್ಕಾರದ ಮೇಲೆ ಒತ್ತಡ ತರಲಾಗುವುದು. ಶಿಕ್ಷಕರ ಹಿತರಕ್ಷಣೆ ಹಾಗೂ ಅವರ ಒಳಿತಿಗಾಗಿ ನಮ್ಮ ತಂಡ ಹಗಲಿರುಳು ಶ್ರಮಿಸುತ್ತದೆ ಎಂದರು.
ನೂತನ ಪದಾಧಿಕಾರಿಗಳು: ತಾಲೂಕು ಅಧ್ಯಕ್ಷ ಎಲ್.ಎಸ್.ಯತೀಶ್ಕುಮಾರ್, ಉಪಾಧ್ಯಕ್ಷರಾಗಿ ಜಿ.ಗೀತಾ, ಕೆ.ಹರೀಶ, ಪ್ರಧಾನ ಕಾರ್ಯದರ್ಶಿ ಎ.ಮಂಜುನಾಥ್, ಖಜಾಂಚಿ ಆರ್.ಪದ್ಮಾವತಿ, ಸಂಘಟನಾ ಕಾರ್ಯದರ್ಶಿ ಪುಷ್ಪಲತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇದೆ ವೇಳೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಹನುಮಂತರಾಯಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಬಿ.ಆದರ್ಶ, ನಾಮಿನಿ ಸದಸ್ಯರಾದ ಕೆ.ಆರ್.ವೆಂಕಟೇಶ್, ಚಂದ್ರಪ್ಪ, ಆಂಜಿನಪ್ಪ, ಸುಜಾತ ಮತ್ತಿತರರಿದ್ದರು.
ದೇವನಹಳ್ಳಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಜಿಲ್ಲಾ ಸಂಘದ ಸದಸ್ಯರು ಅಭಿನಂದಿಸಿದರು.