ಬಳ್ಳಾರಿ: ಅಂಗವಿಕಲರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಮರ್ಪಕ ಅನುಷ್ಠಾನಕ್ಕಾಗಿ ಶ್ರಮಿಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ತಿಳಿಸಿದರು.
ಆಯುಕ್ತ ದಾಸ್ ಸೂರ್ಯವಂಶಿ ಮಾತನಾಡಿ, ಅಂಗವಿಕಲರ ಕುರಿತು ವಿಧಾನಪರಿಷತ್ತಿನಲ್ಲಿ ವಿಷಯ ಪ್ರಸ್ತಾಪ ಮಾಡಿ, ವಿಕಲಚೇತನರ ಸೌಲಭ್ಯಗಳು ಮತ್ತು ಅನುದಾನದ ಬಳಕೆ ಕುರಿತು ಧ್ವನಿಯಾಗಿದ್ದೀರಿ. ಇದರಿಂದ ಅಂಗವಿಕರಿಗೆ ಸರ್ಕಾರ ಸೌಲಭ್ಯಗಳ ದಕ್ಕುವ ವಿಶ್ವಾಸ ಮೂಡಿದೆ ಎಂದರಲ್ಲದೆ, ಕರ್ನಾಟಕ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ''''''''ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ-೨೦೧೬'''''''' ಅನ್ನು ರಾಜ್ಯಾದ್ಯಂತ ಕಡ್ಡಾಯವಾಗಿ ಅನುಷ್ಠಾನ ಮಾಡಿ, ಅಂಗವಿಕಲರಿಗೆ ನೆರವಾಗುವಂತೆ ಕೋರಿದರು. ಅಂಗವಿಕರ ಕಲ್ಯಾಣ ಅಧಿಕಾರಿ ಗೋವಿಂದಪ್ಪ ಮತ್ತಿತರರಿದ್ದರು.14ಬಿಆರ್ವೈ2
ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ ಅನುಷ್ಠಾನದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ವಿಪ ಸದಸ್ಯ ವೈ.ಎಂ. ಸತೀಶ್ ಅವರನ್ನು ಭೇಟಿ ಮಾಡಿ, ಅಂಗವಿಕಲರ ಪರ ಪರಿಷತ್ತಿನಲ್ಲಿ ಧ್ವನಿ ಎತ್ತಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.