ತಂದೆ-ತಾಯಿಯನ್ನು ನಿರ್ಲಕ್ಷ್ಯಿಸಿದರೆ ಮಕ್ಕಳ ವಿರುದ್ಧ ಕೇಸ್‌

KannadaprabhaNewsNetwork |  
Published : Jan 12, 2024, 01:46 AM ISTUpdated : Jan 12, 2024, 05:48 PM IST
ದಯಾನಂದ್‌ | Kannada Prabha

ಸಾರಾಂಶ

ತಂದೆ ತಾಯಿಯನ್ನು ನಿರ್ಲಕ್ಷಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬೆಂಗಳೂರು ನಗರ ಪೊಲೀಸರು ಸಜ್ಞಾಗಿದ್ದಾರೆ. ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮಕೈಗೊಳ್ಳಲಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಇನ್ನು ಮುಂದೆ ನಗರದಲ್ಲಿ ತಂದೆ-ತಾಯಿಯನ್ನು ನಿರ್ಲಕ್ಷ್ಯಿಸುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ನಗರ ಪೊಲೀಸರು ಸಜ್ಜಾಗಿದ್ದಾರೆ.

ಈ ಬಾರಿ ನಗರ ಪೊಲೀಸರು ಹೊಸವರ್ಷವನ್ನು ವೃದ್ಧಾಶ್ರಮಗಳು, ಅಂಗವಿಕಲರ ಆಶ್ರಮಗಳಲ್ಲಿ ಸಹಿ ಹಂಚಿ ಅರ್ಥಪೂರ್ಣವಾಗಿ ಆಚರಿಸಿದ್ದರು. ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರು ಖುದ್ದು ಅಂಗವಿಕಲರು ಹಾಗೂ ವೃದ್ಧಾಶ್ರಮ ಆಶ್ರಮಕ್ಕೆ ತೆರಳಿ ಸಿಹಿ, ಹಣ್ಣು ಹಂಪಲು ಹಂಚಿದ್ದರು. 

ಇದರ ಬೆನ್ನಲ್ಲೇ ಇದೀಗ ವಿನಾಕಾರಣ ತಂದೆ-ತಾಯಿಯನ್ನು ನಿರ್ಲಕ್ಷ್ಯಿಸುವವರು ಹಾಗೂ ತ್ಯಜಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಗರದ ಎಲ್ಲಾ ಪೊಲೀಸ್‌ ಠಾಣೆಗಳಿಗೆ ಸೂಚನೆ ನೀಡಿದ್ದಾರೆ.

ಹಲವು ಪ್ರಕರಣಗಳಲ್ಲಿ ಪೋಷಕ ಹೆಸರಿನಲ್ಲಿ ಸಾಕಷ್ಟು ಆಸ್ತಿ ಇದ್ದರೂ ಮಕ್ಕಳು ಮಾತ್ರ ಆ ಪೋಷಕರನ್ನು ವೃದ್ಧಾಶ್ರಮಗಳಿಗೆ ಸೇರಿಸುವುದು ಅಥವಾ ಅವರಿಂದ ದೂರು ಹೋಗುವುದು, ನಿರ್ಲಕ್ಷ್ಯಿಸುವುದು ಕಂಡು ಬಂದಿದೆ. 

ಈ ಹಿನ್ನೆಲೆಯಲ್ಲಿ ನಗರ ಪೊಲೀಸರು ತಂದೆ-ತಾಯಿಯನ್ನು ನಿರ್ಲಕ್ಷ್ಯಿಸುವ ಮಕ್ಕಳಿಗೆ ಕಾನೂನಿನ ಮುಖಾಂತರ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ.ಪೋಷಕರ ಕಲ್ಯಾಣ ಮತ್ತು ಹಿರಿಯ ನಾಗರಿಕರ ಕಾಯ್ದೆ 2007ರ ಪ್ರಕಾರ ಪೋಷಕರನ್ನು ನಿರ್ಲಕ್ಷ್ಯಿಸುವುದು ಅಥವಾ ಅವರನ್ನು ತ್ಯಜಿಸುವುದು ಅಪರಾಧವಾಗಿದೆ. ಅಂತವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು ಅವಕಾಶವಿದೆ.

-ಬಿ.ದಯಾನಂದ್‌, ನಗರ ಪೊಲೀಸ್‌ ಆಯುಕ್ತ 

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ