ಕನ್ನಡಪ್ರಭ ವಾರ್ತೆ ಉಡುಪಿ
ಅವರು ಗುರುವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಸಭೆಯಲ್ಲಿ ಮಾತನಾಡಿದರು.ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿಗರಿದ್ದು, ಕಾರ್ಯಕರ್ತರು ಪರಿಣಾಮಕಾರಿ ಕೆಲಸ ಮಾಡಿದಲ್ಲಿ ಬದಲಾವಣೆ ಸಾಧ್ಯವಿದೆ. ಈ ನಿಟ್ಟಿನಲ್ಲಿ ಪಕ್ಷದ ವಿವಿಧ ಘಟಕಗಳು ಮತದಾರರನ್ನು ಸಂಪರ್ಕಿಸಿ ಸರ್ಕಾರದ ಸೌಲಭ್ಯಗಳ ಮಾಹಿತಿ ನೀಡಬೇಕು ಎಂದರು.
ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಪಕ್ಷದ ಮುಖಂಡರು ಮತದಾರರನ್ನು ನೇರವಾಗಿ ಸಂಪರ್ಕಿಸುತ್ತಿದ್ದಾರೆ. ಪಕ್ಷದ ಅಭ್ಯರ್ಥಿಪರ ಮತದಾರರಿಗೆ ಒಲವಿದೆ. ಈ ಹಿನ್ನೆಲೆಯಲ್ಲಿ ನಮ್ಮ ಅಭ್ಯರ್ಥಿ ಜಯಗಳಿಸುವ ಹೆಚ್ಚಿನ ಸಾಧ್ಯತೆಯಿದೆ ಎಂದು ಹೇಳಿದರು.ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು, ವಿವಿಧ ಘಟಕಗಳ ಅಧ್ಯಕ್ಷ ಹರೀಶ್ ಕಿಣಿ, ಅಣ್ಣಯ್ಯ ಸೇರಿಗಾರ್, ಗೀತಾ ವಾಗ್ಳೆ, ಹರೀಶ್ ಶೆಟ್ಟಿ ಪಾಂಗಾಳ, ಸೌರಭ್ ಬಳ್ಳಾಲ್, ಸರ್ಪುದ್ದೀನ್ ಶೇಕ್, ಜಯರಾಮ್ ನಾಯ್ಕ, ಆನಂದ್ ಪೂಜಾರಿ, ಜಯಕುಮಾರ್, ನವೀನ್ ಶೆಟ್ಟಿ, ಶಶಿಧರ ಶೆಟ್ಟಿ ಎಳ್ಳೂರು, ರತ್ನಾಕರ್ ಪೂಜಾರಿ, ಕಿಶೋರ್ ಕುಮಾರ್ ಎರ್ಮಾಳ್, ರೋಶನ್ ಶೆಟ್ಟಿ ಉಪಸ್ಥಿತರಿದ್ದರು.