ಕನ್ನಡಪ್ರಭ ವಾರ್ತೆ ಮೂಡಲಗಿ
ಅರಭಾವಿ ವಿಧಾನಸಭಾ ಕ್ಷೇತ್ರದ ದುರದುಂಡಿ, ರಾಜಾಪೂರ, ಶಿವಾಪೂರ, ಖಾನಟ್ಟಿ ಹಾಗೂ ಮುನ್ಯಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ಪರ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಜೊತೆಗೂಡಿ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಏಳಿಗೆ ಸಾಧ್ಯ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಪಕ್ಷ ಕಾಂಗ್ರೆಸ್ ಎಂದರು.
ಪಕ್ಷದ ಹುರಿಯಾಳುಗಳಾದ ಚಿಕ್ಕೋಡಿಯಲ್ಲಿ ಪ್ರಿಯಾಂಕಾ, ಬೆಳಗಾವಿಯಲ್ಲಿ ಮೃಣಾಲ್ ಅವರನ್ನು ಗೆಲ್ಲಿಸಿ. ಯುವಕರನ್ನು ಗೆಲ್ಲಿಸುವ ಮೂಲಕ ಇತಿಹಾಸ ನಿರ್ಮಿಸುವ ಅವಕಾಶವಿದೆ. ಅರಭಾವಿ ಭಾಗದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳನ್ನು ಶೀಘ್ರವೇ ಮುಕ್ತಾಯಗೊಳಿಸುವುದಾಗಿ ಭರವಸೆ ನೀಡಿದರು.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಕಳೆದ 10 ವರ್ಷಗಳಿಂದ ಸುಳ್ಳುಗಳನ್ನೇ ಬಂಡವಾಳ ಮಾಡಿಕೊಂಡಿರುವ ಬಿಜೆಪಿಗೆ ಈ ಸೋಲು ಗ್ಯಾರಂಟಿ ಎಂದು ಭವಿಷ್ಯ ನುಡಿದರು.
ಈ ವೇಳೆ ಮುಖಂಡರಾದ ಅರವಿಂದ್ ದಳವಾಯಿ, ಸೊನವಾಲ್ಕರ್, ಭೀಮಪ್ಪ ಹಂದಿಗುಂದ, ಸುರೇಶ್ ಮಗದುಮ್ಮ, ರಮೇಶ್ ಉಟಗಿ, ಅಶೋಕ್ ದಳವಾಯಿ, ಪ್ರಕಾಶ್ ಅರಳಿ, ಭರಮಣ್ಣ ಉಪ್ಪಾರ್, ಕಲ್ಲಪ್ಪ ಗೌಡ ಲಕ್ಕಾರ, ಲಕ್ಕಣ್ಣ ಸವಸುದ್ದಿ, ಬಸವರಾಜ ಬೆಳಕೋಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.ಗೃಹಲಕ್ಷ್ಮಿ, ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಿದ್ದರಾಮಯ್ಯ ಸಹಾಯ ಹಸ್ತ ಚಾಚಿದ್ದಾರೆ. ಮತಗಳ ಮೂಲಕ ಸರ್ಕಾರವನ್ನು ಬೆಂಬಲಿಸಬೇಕು. ಸರ್ಕಾರ ಎಲ್ಲರ ಪರವಾಗಿ ಕೆಲಸ ಮಾಡುತ್ತಿದ್ದು, ಕಾರ್ಮಿಕರಿಗೆ, ರೈತರಿಗೆ, ದಲಿತರಿಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ.
-ಸತೀಶ್ ಜಾರಕಿಹೊಳಿ, ಸಚಿವ.ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿವೆ. ಲೋಕಸಭೆ ಚುನಾವಣೆ ಮುಗಿದ ಮೇಲೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಈ ಯೋಜನೆಗಳು ನಿರಂತರವಾಗಿ ಸಾಗಲಿವೆ. ಯೋಜನೆಗಳ ವಿರುದ್ಧ ಬಿಜೆಪಿಗರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ.-ಲಕ್ಷ್ಮೀ ಹೆಬ್ಬಾಳಕರ್,
ಸಚಿವೆ.