ಕನ್ನಡಪ್ರಭ ವಾರ್ತೆ ಕುಂದಾಪುರ
ಮಂಗಳವಾರ ಖಾಸಗಿ ಕೆಲಸದ ನಿಮಿತ್ತ ಕುಂದಾಪುರಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಸಿಕ್ಕಿಲ್ಲ ಎನ್ನುವ ಕಾರಣಕ್ಕಾಗಿ ನಾನು ಮುನಿಸಿಕೊಂಡಿಲ್ಲ. ಮೂರು ಬಾರಿ ಶಾಸಕನಾಗಿ ಆಯ್ಕೆಯಾದಾಗಲೂ ಇನ್ನೊಬ್ಬರನ್ನು ಸಚಿವರನ್ನಾಗಿ ಮಾಡಿ ಎಂದು ಹೇಳಿದವನು ನಾನು. ಹಣವೂ ಸೇರಿದಂತೆ ಸೀರೆ, ಇಸ್ತ್ರೀ ಪೆಟ್ಟಿಗೆ, ಸಕ್ಕರೆಗಳನ್ನು ಹಂಚಿ ನನ್ನ ವಿರುದ್ಧ ಚುನಾವಣೆ ಎದುರಿಸಿದ ಬಿಜೆಪಿಯ ಪ್ರಬಲ ನಾಯಕನ ವಿರುದ್ಧ ಗೆಲುವು ಕಂಡು ನಾಲ್ಕನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನಿಗಮ ಮಂಡಳಿ ಸಿಗುವ ಬಗ್ಗೆ ಮಾಹಿತಿ ಇಲ್ಲ. ಹಣೆಬರಹ ಚೆನ್ನಾಗಿದ್ದರೆ ಸಚಿವ ಸ್ಥಾನ ಸಿಗುತ್ತಿತ್ತು ಎಂದರು.
ಬಿಜೆಪಿ- ಜೆಡಿಎಸ್ ಲೋಕಸಭಾ ಚುನಾವಣೆಯ ಮೈತ್ರಿಯಿಂದ ಕಾಂಗ್ರೆಸ್ಗೆ ಯಾವುದೇ ನಷ್ಟವಿಲ್ಲ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಂಡಿದೆ. ಹಿಂದಿನಿಂದಲೂ ದೇವೆಗೌಡರು ಜಾತ್ಯತೀತ ಸಿದ್ದಾಂತವನ್ನು ಪ್ರತಿಪಾದಿಸುತ್ತಾ ಬಂದವರು. ಅವರು ಕೂಡ ಈ ಬಾರಿ ಜಾತ್ಯಾತೀತ ಸಿದ್ದಾಂತಕ್ಕೆ ಬ್ರೇಕ್ ಹಾಕಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಹುತೇಕ ಕಡೆಗಳಲ್ಲಿ ಸೋತಿರುವ ಜೆಡಿಎಸ್ಗೆ ತಮ್ಮ ಪಕ್ಷದ ಅಸ್ತಿತ್ವದ ಬಗ್ಗೆ ಚಿಂತೆಯಾಗಿದೆ. ಅದರಿಂದಲೇ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಜೆ.ಟಿ. ಪಾಟೀಲ ವ್ಯಂಗ್ಯವಾಡಿದರು.ಈ ಸಂದರ್ಭ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ, ಯುವ ಕಾಂಗ್ರೆಸ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಪೂಜಾರಿ ಹೇರಿಕುದ್ರು, ಕುಂದಾಪುರ ಬ್ಲಾಕ್ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಕೋಡಿ ಇದ್ದರು.
-ಜೆ.ಟಿ. ಪಾಟೀಲ, ಬೀಳಗಿ ಶಾಸಕ