ರಾಮನಗರ: ಬಿಡದಿ ಟೌನ್ಶಿಪ್ ಯೋಜನೆ ಹಾಗೂ ನೈಸ್ ಟೋಲ್ ಸಂಗ್ರಹದ ವಿರುದ್ಧ ನಾವು ಪಾದಯಾತ್ರೆಯಂತಹ ಹೋರಾಟ ಮಾಡುತ್ತಿದ್ದೇವೆ ಅಷ್ಟೆ. ಅವರೇನಾದರು ವಿಪಕ್ಷದಲ್ಲಿ ಇದ್ದಿದ್ದರೆ ವಿಧಾನಸೌಧದವರೆಗೆ ಉರುಳು ಸೇವೆಯೇ ಮಾಡುತ್ತಿದ್ದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಮಾಜಿ ಶಾಸಕ ಎ.ಮಂಜುನಾಥ್ ತಿರುಗೇಟು ನೀಡಿದರು.
ಸತ್ಯಕ್ಕೆ ಜಯ ಸಿಗುವ ವಿಶ್ವಾಸ:
ಸರ್ಕಾರ ನಡೆಸುವವರು, ಅಧಿಕಾರದಲ್ಲಿ ಇರುವವರು ಹಣ ಬಲ, ತೋಳ್ಬಲ, ಅಧಿಕಾರದ ಬಲ ಉಪಯೋಗಿಸಿಕೊಂಡು ಹೋರಾಟ ಹತ್ತಿಕ್ಕುವ, ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡುವ, ರೈತರಿಗೆ ಮಂಕು ಬೂದಿ ಎರಚುತ್ತಿದ್ದಾರೆ.ಅಲ್ಲದೆ, ಹೋರಾಟಗಾರರ ಬದುಕಿನಲ್ಲಿ ಹೇಗೆಲ್ಲ ಚೆಲ್ಲಾಟ ಆಡಬಹುದೆಂದು ಕರಗತ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ಹೋರಾಡುವುದು ಬಹಳ ಕಷ್ಟ. ಆದರೂ ರಾಜ್ಯಸರ್ಕಾರದ ವಿರುದ್ಧ ರೈತರು ಹೋರಾಟ ಮುಂದುವರೆಸಿದ್ದರೆ, ಜೆಡಿಎಸ್ ಕೂಡ ಕಾನೂನಾತ್ಮಕ ಹೋರಾಟ ಮಾಡುತ್ತಿದ್ದೇವೆ. ಸತ್ಯಕ್ಕೆ ಜಯ ಸಿಗುವ ವಿಶ್ವಾಸವಿದೆ ಎಂದರು.
ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನೈಸ್ ಟೋಲ್ ಸಂಗ್ರಹ ಮಾಡುತ್ತಿರುವುದು ಕಾನೂನು ಬಾಹಿರ. ಇಷ್ಟು ವರ್ಷಗಳಿಂದ ಟೋಲ್ ಸಂಗ್ರಹ ಮಾಡಿರುವುದೇ ಹಗಲು ದರೋಡೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಕಾರಣ ಪಕ್ಷದ ವರಿಷ್ಠರು ಕಾನೂನು ಅರಿವು ಅರಿತು ಹೋರಾಟ ಕೈಗೆತ್ತಿಕೊಂಡಿದ್ದೇವೆ. ಸರ್ಕಾರ ನಡೆಸುತ್ತಿರುವವರು ಬುದ್ಧಿವಂತರು ಮತ್ತು ಕಿಲಾಡಿಗಳಾಗಿದ್ದಾರೆ. ಹೋರಾಟ ಹತ್ತಿಕ್ಕುವುದು, ಹೋರಾಟಗಾರರಿಗೆ ತೊಂದರೆ ಕೊಡುತ್ತಿದ್ದಾರೆ ಎಂದರು.
ರಾಜ್ಯ-ರಾಷ್ಟ್ರೀಯ ಹೆದ್ದಾರಿಗಳಿಗೆ ಟೋಲ್ ಹಾಕುವುದು ಸಹಜ. ಎಲ್ಲಾದಕ್ಕೂ ಕೋರ್ಟ್ ಆದೇಶ ನೀಡಿದ್ದರೆ ಅವೆಲ್ಲವನ್ನು ತೆರವು ಮಾಡುವಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳುತ್ತಿದ್ದರು. ನೈಸ್ ರಸ್ತೆಯಲ್ಲಿ ಕಾನೂನು ಬಾಹಿರ ಟೋಲ್ ಸಂಗ್ರಹ ಮಾಡುತ್ತಿದ್ದಾರೆಂದು ಕೋರ್ಟ್ ಹೇಳಿರುವುದಕ್ಕೆ ಕುಮಾರಸ್ವಾಮಿ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಅದು ಜನರನ್ನು ಎತ್ತಿಕಟ್ಟುವ ವಿಚಾರವಲ್ಲ, ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿರುವ ವಿಚಾರ ಎಂದು ತಿರುಗೇಟು ನೀಡಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆ ವಿಪಕ್ಷ ನಾಯಕ ಮಂಜುನಾಥ್, ಸದಸ್ಯರಾದ ಗ್ಯಾಬ್ರಿಯಲ್, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಮುತ್ತು, ರಾಮನಗರ ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ, ಹಾರೋಹಳ್ಳಿ ತಾಲೂಕು ಅಧ್ಯಕ್ಷ ರಾಮ,
ಬಾಕ್ಸ್...........
ರಾಮನಗರ:
ಈ ವೇಳೆ ಮಾತನಾಡಿದ ಮಂಜುನಾಥ್, ಜಿಲ್ಲೆಯಲ್ಲಿ ಜೆಡಿಎಸ್ ತಾಲೂಕು ಮತ್ತು ಜಿಲ್ಲಾ ಕಚೇರಿ ಕೊರತೆ ಇತ್ತು. ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುಸಜ್ಜಿತ ಕಚೇರಿ ಪ್ರಾರಂಭಿಸಬೇಕೆಂದು ಹೇಳಿದ್ದರು. ಅದರಂತೆ ಬೇರೆ ತಾಲೂಕುಗಳಿಂದ ಆಗಮಿಸುವ ಪಕ್ಷದ ಮುಖಂಡರು, ಕಾರ್ಯಕರ್ತರು ಮಾತ್ರವಲ್ಲದೆ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಬಸ್ ನಿಲ್ದಾಣಕ್ಕೆ ಸಮೀಪದಲ್ಲಿ ಜಿಲ್ಲಾ, ತಾಲೂಕು ಕಚೇರಿಯನ್ನು ಒಂದೇ ಕಟ್ಟಡದಲ್ಲಿ ಪ್ರಾರಂಭಿಸಲಾಗಿದೆ ಎಂದರು.
ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯಾವಕಾಶ ನೀಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ಶೀಘ್ರದಲ್ಲಿ ಅವರು ಕಚೇರಿಗೆ ಭೇಟಿ ನೀಡಲಿದ್ದಾರೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ಕಾರ್ಯಕ್ರಮ, ಆಚಾರ ವಿಚಾರಗಳು, ಸಭೆ ಸಮಾರಂಭಗಳು, ಹೋರಾಟಗಳ ಕುರಿತು ಚರ್ಚಿಸಲು ಜೆಡಿಎಸ್ ಕಚೇರಿ ಕೇಂದ್ರವಾಗಿರಲಿದೆ ಎಂದು ಮಂಜುನಾಥ್ ತಿಳಿಸಿದರು.27ಕೆಆರ್ ಎಂಎನ್ 1.ಜೆಪಿಜಿ
ರಾಮನಗರದಲ್ಲಿ ಮಾಜಿ ಶಾಸಕ ಎ.ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.