ಅಂತರ್ಜಲ ವೃದ್ಧಿಯಾದರೆ ಭವಿಷ್ಯ ಹಸನು: ನಾಗರಾಜ್ ಶೆಟ್ಟಿ

KannadaprabhaNewsNetwork |  
Published : May 27, 2025, 01:19 AM ISTUpdated : May 27, 2025, 01:20 AM IST
ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಎಣ್ಣೆಹೊಳೆ ವ್ಯಾಪ್ತಿಯ  ಅಮೃತ ಕೆರೆಯನ್ನು  ಪುನಶ್ಚೇತನಗೊಳಿಸಿ ಬಾಗಿನ ಅರ್ಪಿಸಿ ಮಾತನಾಡಿದರು.  | Kannada Prabha

ಸಾರಾಂಶ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಮರ್ಣೆ ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯರ ಸಹಕಾರದಿಂದ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಎಣ್ಣೆಹೊಳೆ ವ್ಯಾಪ್ತಿಯ ಅಮೃತ ಕೆರೆಯನ್ನು ಪುನಶ್ಚೇತನಗೊಳಿಸಿ ಬಾಗಿನ ಅರ್ಪಿಸಲಾಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳಅಂತರ್ಜಲ ವೃದ್ಧಿಯಾದರೆ ಜೀವಿಗಳ ಮುಂದಿನ ಬದುಕು ಹಸನಾದೀತು ಎಂದು ಎಸ್‌ಕೆಡಿಆರ್‌ಡಿಪಿ ಯೋಜನಾ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಹೇಳಿದರು.

ಅವರು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಮರ್ಣೆ ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯರ ಸಹಕಾರದಿಂದ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಎಣ್ಣೆಹೊಳೆ ವ್ಯಾಪ್ತಿಯ ಅಮೃತ ಕೆರೆಯನ್ನು ಪುನಶ್ಚೇತನಗೊಳಿಸಿ ಬಾಗಿನ ಅರ್ಪಿಸಿ ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ 836 ಕೆರೆ ಹೂಳೆತ್ತುವ ಕಾರ್ಯ ಮಾಡಿದೆ. ಬರಗಾಲವನ್ನು ಹೋಗಲಾಡಿಸಿ ಸಕಲ ಜೀವಿಗಳಿಗೂ ಕುಡಿಯುವ ನೀರು ನೀಡುವುದೇ ಯೋಜನೆಯ ಮೂಲೊದ್ದೇಶ. ವರ್ಷಕ್ಕೆ ರಾಜ್ಯಾದ್ಯಂತ 100 ಕೆರೆಗಳ ಹೂಳೆತ್ತುವ ಕೆಲಸ ಯೋಜನೆಯಿಂದ ನಡೆಯುತ್ತಿದೆ ಎಂದರು.ಜನಜಾಗೃತಿ ವೇದಿಕೆ ವಲಯಾಧ್ಯಕ್ಷೆ ಯಶೋದಾ ಶೆಟ್ಟಿ, ಪದಾಧಿಕಾರಿಗಳಾದ ಶಾಂತಿರಾಜ್ ಜೈನ್, ನಂದ ಕುಮಾರ್ ಹೆಗ್ಡೆ ಕೆರೆ ನಿರ್ಮಾಣ ಸಮಿತಿ ಅಧ್ಯಕ್ಷ ಅರುಣ್ ಭಟ್ ಮಾತನಾಡಿದರು.

ಮರ್ಣೆ ಗ್ರಾಮ ಪಂಚಾಯಿತಿ‌ ಅಧ್ಯಕ್ಷೆ ಪ್ರಭಾವತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಭೆಯಲ್ಲಿ ಜನಜಾಗೃತಿ ವೇದಿಕೆಯ ಪ್ರಶಾಂತ್ ಶೆಟ್ಟಿ, ಜಗದೀಶ್ ಶೆಟ್ಟಿ, ಹಾಜಿ ಸಾಹೇಬ್, ಶಿಕ್ಷಕ ರಘುರಾಮ್, ಸುಕೇಶ್‌ ಶೆಟ್ಟಿ, ಮರ್ಣೆ ಗ್ರಾ.ಪಂ. ಸದಸ್ಯ ರಾಜೇಶ್ ಶೆಟ್ಟಿ, ಧರ್ಮಸ್ಥಳ ಯೋಜನೆಯ ಮೇಲ್ವಿಚಾರಕರು ಕೃಷಿ ಮೇಲ್ವಿಚಾರಕರು, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಕೆರೆ ಸಮಿತಿ ಪದಾಧಿಕಾರಿಗಳು, ಶೌರ್ಯ ವಿಪತ್ತು ಘಟಕದ ಸದಸ್ಯರು, ಸೇವಾ ಪ್ರತಿನಿಧಿಯವರು, ಸಂಘದ ಸದಸ್ಯರು ಹಾಜರಿದ್ದರು.ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ‌ ತಾಲೂಕು ಯೋಜನಾಧಿಕಾರಿ ಲೀಲಾವತಿ ಸ್ವಾಗತಿಸಿದರು‌. ಕೃಷಿ ಅಧಿಕಾರಿ ಉಮೇಶ್ ಕಾರ್ಯಕ್ರಮ‌ ನಿರೂಪಿಸಿದರು. ನಿಶ್ಮಿತಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ