ಅಧಿಕಾರಿಗಳು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಸಿಎಂ ಡಿ.ಕೆ.ಶಿವಕುಮಾರ್

KannadaprabhaNewsNetwork |  
Published : Sep 29, 2024, 01:30 AM IST
ಕೆ ಕೆ ಪಿ ಸುದ್ದಿ 03:ಡಿಸಿಎಂ ಶಿವಕುಮಾರ್ ಸಾತನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.  | Kannada Prabha

ಸಾರಾಂಶ

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸಮಾಡಿ ಕೊಡುತ್ತೇವೆ ಎಂದು ಅಧಿಕಾರಿಗಳು, ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಿಕರಿಗೆ ತಿಳಿಸಿದರು. ಕನಕಪುರದಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾರ್ವಜಕನಿಕರಿಗೆ ಸೂಚನೆ । ಸಾತನೂರಲ್ಲಿ ಜನಸ್ಪಂದನ ಕಾರ್ಯಕ್ರಮಕನ್ನಡಪ್ರಭ ವಾರ್ತೆ ಕನಕಪುರ

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸಮಾಡಿ ಕೊಡುತ್ತೇವೆ ಎಂದು ಅಧಿಕಾರಿಗಳು, ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಿಕರಿಗೆ ತಿಳಿಸಿದರು.

ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕನಕಪುರ ಭಾಗದಲ್ಲಿ ₹2-3 ಲಕ್ಷಕ್ಕೆ ಜಮೀನು ಕೇಳುವವರು ಇರಲಿಲ್ಲ. ಈ ಭಾಗವನ್ನು ಅಭಿವೃದ್ಧಿ ಮಾಡಿದ ಪರಿಣಾಮ ಜಮೀನು ಬೆಲೆ ಹೆಚ್ಚಾಗಿದೆ. ಈ ಭಾಗದಲ್ಲಿ ₹10 ಕೋಟಿ ವೆಚ್ಚದಲ್ಲಿ ಎಂಟು ಎಕರೆಯಲ್ಲಿ ದೊಡ್ಡ ಶಾಲೆ ನಿರ್ಮಾಣಕ್ಕೆ ಮುಂದಾಗಿದ್ದೇನೆ ಎಂದರು.

ರೇಷ್ಮೆಗೆ ಉತ್ತಮ ಬೆಲೆ ಬಂದಿದೆ. ರಾಜ್ಯದಲ್ಲಿಯೇ ಅತ್ಯಂತ ಹೆಚ್ಚು ರೇಷ್ಮೆಯನ್ನು ಉತ್ಪಾದನೆ ಮಾಡುವ ತಾಲೂಕು ನಮ್ಮದು. ಯಾವುದೇ ಕಾರಣಕ್ಕೂ ರೇಷ್ಮೆ ಕೈಬಿಡಬೇಡಿ ಎಂದರು.ವಿದ್ಯಾರ್ಥಿಗಳಿಗೆ ಬಸ್‌ ತೊಂದರೆಯಾಗದಿರಲಿ:

ಸಮಸ್ಯೆಬಗ್ಗೆ 700 ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾದವು. ಒಂದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಡಿಸಿಎಂ ಪರಿಹಾರ ಸೂಚಿಸಿದರು. ಬಸ್‌ ಸರಿಯಾದ ಸಮಯಕ್ಕೆ ಬರದ ಕಾರಣಕ್ಕೆ ನಾವು ವಾರಕ್ಕೆ ಮೂರು ದಿನ ಕ್ಲಾಸಿಗೆ ಸರಿಯಾಗಿ ಬರಲು ಆಗುತ್ತಿಲ್ಲ. ನಮಗೆ ಹರಿಹರದಿಂದ ಸಾತಾನೂರುವರೆಗೆ ಶಾಲಾ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಬೇಕು ಎಂದು ಸಾತನೂರು ಗ್ರಾಮಾಂತರ ಪ್ರೌಢಶಾಲೆ ವಿದ್ಯಾರ್ಥಿಗಳು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿ ಡಿಸಿಎಂ, ವಿದ್ಯಾರ್ಥಿಗಳು ಓಡಾಡಲು ಬಸ್ ತೊಂದರೆ ಆಗಬಾರದು. ಸೋಮವಾರದ ಹೊತ್ತಿಗೆ ಬಸ್ ವ್ಯವಸ್ಥೆಯಾಗಬೇಕು ಎಂದರು. ಸಾತನೂರಿನ ಪಿಯು ಕಾಲೇಜಿನ ಪ್ರಥಮ ವಿದ್ಯಾರ್ಥಿನಿಯರು, ನಮ್ಮ ಊರುಗಳಲ್ಲಿ ಬಸ್ ನಿಲ್ಲಿಸುತ್ತಿಲ್ಲ ಎಂದಾಗ, ಹಲಗೂರಿನಿಂದ ಕನಕಪುರಕ್ಕೆ ಬರುವ ಬಸ್‌ ಪ್ರತಿ ಹಳ್ಳಿಯಲ್ಲಿ ನಿಲ್ಲಿಸಬೇಕು ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು. ಸುದ್ದಿಗಾರರೊಂದಿಗೆ ಡಿಸಿಎಂ ಡಿಕೆಶಿ ಮಾತನಾಡಿ, ಕೆಂಬಾಳು ಬಳಿ 45 ಎಕರೆ ವಿಸ್ತೀರ್ಣದಲ್ಲಿ ಹೊಸ ಸಾತನೂರು ನಿರ್ಮಾಣ ಮಾಡಲಾಗುತ್ತಿದೆ. ಇನ್ನೂ ಕಾಮಗಾರಿ ಪ್ರಗತಿಯಲ್ಲಿದೆ. ಇಲ್ಲಿ ಸಿಎಸ್‌ಆರ್ ಅಡಿ ಶಾಲೆ ನಿರ್ಮಾಣಕ್ಕಾಗಿ 8 ಎಕರೆ ಭೂಮಿ ಹಾಗೂ ಮೀಸಟ್ಟಿದ್ದು ₹10 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಈ ಕಾರಣಕ್ಕೆ ಎಲ್ಲರೂ ಅಲ್ಲಿ ನಿವೇಶನ ನೀಡಲಿ ಎಂದು ಅರ್ಜಿ ಸಲ್ಲಿಸುತ್ತಿದ್ದಾರೆ ಎಂದರು.ಕನಕಪುರ ಅಭಿವೃದ್ಧಿಯ ಬಗ್ಗೆ ಛಾಯಾಚಿತ್ರ ಪ್ರದರ್ಶನ:

ಯುವ ಜನಾಂಗಕ್ಕೆ ಹಳೆ ಕ್ಷೇತ್ರ ಹೇಗಿತ್ತು ಎಂದು ತಿಳಿದಿಲ್ಲ. ನಾನು ಶಾಸಕ, ಮಂತ್ರಿಯಾಗುವ ಮುಂಚಿತವಾಗಿ ಕನಕಪುರ ಸುತ್ತಲಿನ, ಕಬ್ಬಾಳಮ್ಮ ಕ್ಷೇತ್ರ, ದೊಡ್ಡಆಲಹಳ್ಳಿ ರಸ್ತೆ, ತಾಲೂಕು ಕಚೇರಿ, ಇತರೆ ಅಭಿವೃದ್ಧಿ ವಿಚಾರಗಳ ಬಗ್ಗೆ ಛಾಯಾಚಿತ್ರಗಳ ಡಾಕ್ಯುಮೆಂಟ್ ತಯಾರಿಸಿ ಪ್ರದರ್ಶಿಸಲಾಗುವುದು. ಅಭಿವೃದ್ಧಿಯ ಬಗ್ಗೆ ಹೊಸ ಪೀಳಿಗೆಗೆ ತಿಳಿಸಬೇಕು ಎಂದು ಹೇಳಿದರು. ಸುರೇಶ್ ಸೋಲಿಗೆ ಡಿಸಿಎಂ ಬೇಸರ ಈ ಹಿಂದೆ 8 ಸಾವಿರಕ್ಕೂ ಹೆಚ್ಚು ಜನರಿಗೆ ಬಗರ್ ಹುಕುಂ ಜಮೀನು ನೀಡಿದ್ದೇವೆ. ನಿವೇಶನ, ಮನೆ ಹಂಚಿದ್ದೇವೆ ಆದರೂ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್‌ಗೆ ಜನರು ಆಶೀರ್ವಾದ ಮಾಡಲಿಲ್ಲ. ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ ಎಂದು ತಮ್ಮನ ಸೋಲಿಗೆ ಡಿಕೆ ಶಿವಕುಮಾರ್‌ ಬೇಸರ ವ್ಯಕ್ತಪಡಿಸಿದರು.

PREV

Recommended Stories

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ