ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಎನ್.ಸಿ.ಡಿ ಘಟಕ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ನಂಜಪ್ಪ ಗ್ರೂಪ್ ಆಫ್ ಹಾಸ್ಪಿಟಲ್ ಮತ್ತು ಎಜುಕೇಷನ್ ಅಕಾಡೆಮಿ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ರೇಬಿಸ್ ದಿನ ಮತ್ತು ವಿಶ್ವ ಹೃದಯ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾವೆಲ್ಲ ನಾಯಿ ಮತ್ತು ಇತರೆ ಪ್ರಾಣಿಗಳನ್ನು ಪ್ರೀತಿಸುತ್ತೇವೆ. ಅವೂ ನಮ್ಮನ್ನು ಪ್ರೀತಿಸುತ್ತವೆ. ಆದರೆ ನಾಯಿಗಳು /ಪ್ರಾಣಿಗಳು ಕೆಲವೊಮ್ಮೆ ಅಪಾಯಕಾರಿಯೂ ಆಗಿರುತ್ತವೆ. ಆದ್ದರಿಂದ ನಾವು ಸಾಕಿದ ನಾಯಿಗಳಿಗೆ ಮತ್ತು ಬೀದಿ ನಾಯಿಗಳಿಗೆ ಆ್ಯಂಟಿ ರೇಬಿಸ್ ಲಸಿಕೆಯನ್ನು ನಿಯಮಿತವಾಗಿ ಕೊಡಿಸಬೇಕು. ರೇಬಿಸ್ ಬಂದ ನಂತರ ಅದಕ್ಕೆ ಚಿಕಿತ್ಸೆ ಇಲ್ಲ. ಸಾವು ಖಚಿತ. ಆದರಿಂದ ಮುನ್ನೆಚ್ಚರಿಕೆ ಅತಿ ಅಗತ್ಯ. ನಾಯಿ, ಬೆಕ್ಕು ಇತರೆ ಪ್ರಾಣಿಗಳು ಕಡಿದರೆ, ತರಚಿದರೂ ನಿರ್ಲಕ್ಷ್ಯ ಮಾಡದೇ ಆಂಟಿ ರೇಬಿಸ್ ಲಸಿಕೆ ಪಡೆಯಬೇಕು ಎಂದರು.ಭಾನುವಾರ ಶಿಕಾರಪುರಿದಲ್ಲಿ ಹುಚ್ಚು ನಾಯಿಯೊಂದು 41 ಜನರನ್ನು ಕಚ್ಚಿದೆ. ಆ ನಾಯಿ ಕಚ್ಚಿದ ಎಲ್ಲರಿಗೆ ಆಂಟಿ ರೇಬಿಸ್ ಇಮ್ಯುನೊಗ್ಲಾಬ್ಯುಲಿನ್ ಲಸಿಕೆ ನೀಡ ಲಾಗಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 4 ಜನರು ನಾಯಿ ಕಡಿತದಿಂದ ಸಾವನ್ನಪ್ಪಿದ್ದಾರೆ. ಇನ್ನು ಹೃದಯದ ಆರೋಗ್ಯಕ್ಕಾಗಿ ಒತ್ತಡ ನಿರ್ವಹಣೆ ಮಾಡಬೇಕು. ನಿಯಮಿತವಾಗಿ ವ್ಯಾಯಾಮ, ಧ್ಯಾನ, ಹಾಗೂ ಸಾಕಷ್ಟು ವಿಶ್ರಾಂತಿ ಅಗತ್ಯ. ಇತ್ತೀಚಿನ ದಿನ ಗಳಲ್ಲಿ ಯುವಜನತೆ ಹೃದಯಾಘಾತದಿಂದ ಹೆಚ್ಚು ಸಾವನ್ನಪ್ಪುತ್ತಿದ್ದು, ಉತ್ತಮ ಜೀವನ ಶೈಲಿ, ಆಹಾರ ಕ್ರಮ, ಹವ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಆರ್ಸಿಎಚ್ಒ ಡಾ.ಓ.ಮಲ್ಲಪ್ಪ ಮಾತನಾಡಿ, ರೇಬಿಸ್ ಬಂದ ಮೇಲೆ ಬದುಕಲು ಸಾಧ್ಯವಿಲ್ಲ. ನಾಯಿ ಕಡಿತ ಆದ ತಕ್ಷಣ ನಿರ್ಲಕ್ಷಿಸದೇ ಲಸಿಕೆ ಪಡೆಯಬೇಕು. 28 ದಿನದಲ್ಲಿ 4 ಡೋಸ್ಗಳನ್ನು ಪಡೆಯಲೇಬೇಕು. ವರ್ಷದಲ್ಲಿ 25 ರಿಂದ 30 ಸಾವಿರ ನಾಯಿ ಕಡಿತ ಪ್ರಕರಣ ಸಂಭವಿಸುತ್ತಿದೆ ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜ್ ನಾಯ್ಕ್ ಮಾತನಾಡಿ, ಈ ವರ್ಷ ಜಿಲ್ಲೆಯಲ್ಲಿ 17000 ಕ್ಕು ಹೆಚ್ಚು ನಾಯಿ ಕಡಿತ ಪ್ರಕರಣ ದಾಖಲಾಗಿದ್ದು, ಕಡ್ಡಾಯ ವಾಗಿ ಟಿಟಿ ಮತ್ತು ಆಂಟಿ ರೇಬಿಸ್ ಲಸಿಕೆ ಪಡೆಯಬೇಕು. ಹಾಗೂ ಈ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸಬೇಂದರು.
ಮೆಗ್ಗಾನ್ನಲ್ಲಿ ಉತ್ತಮ ಚಿಕಿತ್ಸೆ, ಸೌಲಭ್ಯ