ಸಿದ್ದರಾಮಯ್ಯರಿಗೆ ಜವಾಬ್ದಾರಿ, ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಲಿ: ಶ್ರೀನಿಧಿ ಹೆಗ್ಡೆ

KannadaprabhaNewsNetwork |  
Published : Sep 25, 2024, 01:01 AM IST
ನಿಧಿ24 | Kannada Prabha

ಸಾರಾಂಶ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕಿತ್ತೆಸೆಯುವ ಮೂಲಕ ಹೈಕೋರ್ಟ್ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಹಸಿರು ನಿಶಾನೆ ನೀಡಿದೆ.

ಕನ್ನಡಪ್ರಭ ವಾರ್ತೆ ಉಡುಪಿಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕಿತ್ತೆಸೆಯುವ ಮೂಲಕ ಹೈಕೋರ್ಟ್ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಹಸಿರು ನಿಶಾನೆ ನೀಡಿದೆ.ಸಂವಿಧಾನ, ಕಾನೂನು, ನೈತಿಕತೆ, ಭ್ರಷ್ಟಚಾರದ ವಿರೋಧದ ಕುರಿತು ಮಾತನಾಡುವ ಸಿದ್ದರಾಮಯ್ಯ ಅವರು ಈ ಕ್ಷಣವೇ ರಾಜೀನಾಮೆ ನೀಡಬೇಕು. ಅವರು ಇನ್ನೂ ಅಧಿಕಾರದ ಆಸೆಯಿಂದ ರಾಜೀನಾಮೆ ನೀಡದೇ ತಮ್ಮ ಅತೀ ಭಂಡತನ ಪ್ರದರ್ಶನ ಮಾಡದೇ, ರಾಜೀನಾಮೆ ನೀಡಿ ತಮ್ಮ ಸ್ಥಾನದ ಗೌರವ ಉಳಿಸಿಕೊಳ್ಳಲಿ ಎಂದು ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಆಗ್ರಹಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ನೀಡಿದ್ದ ಪ್ರಾಸಿಕ್ಯೂಷನ್ ನೋಟಿಸ್‌ಗೆ ಪ್ರತಿಕಾರವಾಗಿ ವಿವಿಗಳ ಕುಲಪತಿ ನೇಮಕ ವಿಚಾರವಾಗಿ ಸಹಿತ ಹಲವು ವಿಷಯಗಳಲ್ಲಿ ರಾಜ್ಯಪಾಲರ ಸಾಂವಿಧಾನಿಕ ಹುದ್ದೆಯ ಘನತೆಯನ್ನು ಕುಗ್ಗಿಸುವ ಪ್ರಯತ್ನ ಮಾಡಿದ್ದನ್ನು ನಾವು ಇಲ್ಲಿ ನೆನಪಿಸಿಕೊಳ್ಳಬೇಕು.ಭ್ರಷ್ಟಚಾರ ವಿರುದ್ಧ, ಸ್ವಜನ ಪಕ್ಷಪಾತ ಕುರಿತು ಮಾತನಾಡುವ ಸಿದ್ದರಾಮಯ್ಯ ಅವರ ಮುಖವಾಡ ಇಂದು ಕಳಚಿ ಬಿದ್ದಿದೆ. ಅವರಿಗೆ ಜವಾಬ್ದಾರಿ, ನೈತಿಕತೆ ಇದ್ದರೇ ಕೂಡಲೇ ರಾಜೀನಾಮೆ ನೀಡಲಿ ಎಂದು ಶ್ರೀನಿಧಿ ಹೆಗ್ಡೆ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಕಿ ಲಕ್ಷ್ಮಿ ಶನಿವಾರದೊಳಗೆ ಮಹಿಳೆಯರ ಬ್ಯಾಂಕ್‌ ಖಾತೆಗೆ
ರಾಜಣ್ಣ ಸಿಎಂಗಷ್ಟೇ ಅಲ್ಲ, ನನಗೂ ಪರಮಾಪ್ತ: ಡಿಕೆಶಿ