ಕನ್ನಡಪ್ರಭ ವಾರ್ತೆ ಮಂಗಳೂರು
ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಕೇರಳ ಮತ್ತು ಗೋವಾ ರಾಜ್ಯದ 149 ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಭಿನ್ನ ಭಾಷಿಕರ ನಡುವೆ ವೈಮನಸ್ಸು ಮೂಡಿಸುವ ಕೆಲಸವನ್ನು ತಮ್ಮ ಉಳಿವಿಗಾಗಿ ರಾಜಕಾರಣಿಗಳು ಮುಂದುವರಿಸುತ್ತಲೇ ಇದ್ದಾರೆ. ಇದು ಭಾಷೆಗಳ ಕಟ್ಟುವಿಕೆಗೆ ಮಾರಕ. ದಕ್ಷಿಣ ಭಾರತೀಯ ರಾಜ್ಯಗಳ ಭಾಷೆಗಳು ಹಾಗೂ ಹಿಂದಿ ಭಾಷೆಯ ಬೆಳವಣಿಗೆಯ ಇಂದಿನ ಗತಿಯನ್ನು ತುಲನೆ ಮಾಡಿದರೆ, ಇದೇ ರೀತಿ ಮುಂದುವರಿದರೆ ಮುಂಬರುವ ದಿನಗಳಲ್ಲಿ ದಕ್ಷಿಣ ಭಾರತದ ಭಾಷೆಗಳು ಅವನತಿಯ ಕಡೆ ಮುಖ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು. ಸಂವಿಧಾನವು ಭಾಷಿಕವಾಗಿ ದೇಶದ ಜನಕ್ಕೆ ಹಲವಾರು ಹಕ್ಕುಗಳನ್ನು ಕೊಟ್ಟಿದೆ. ರಾಜ್ಯ ಸರ್ಕಾರಗಳು ಗಡಿ ಭಾಗಗಳಲ್ಲಿ ವಾಸಿಸುವ ಭಾಷಾ ಅಲ್ಪಸಂಖ್ಯಾತರ ಹಿತ ಕಾಯಲು ಪ್ರತ್ಯೇಕ ಭಾಷಾ ನಿರ್ದೇಶಕರನ್ನು ನೇಮಿಸಬೇಕಿದ್ದು, ಹಲವು ರಾಜ್ಯಗಳು ಈ ಕುರಿತಂತೆ ಉತ್ಸುಕವಾಗಿಲ್ಲ. ಸರ್ಕಾರಗಳು ತಮ್ಮ ನಾಡಿನ ಅಲ್ಪಸಂಖ್ಯಾತ ಭಾಷೆಗಳ ಕುರಿತಂತೆ ಗೌರವ ಹೊಂದಬೇಕಾದ್ದು ಪ್ರಾಥಮಿಕ ಜವಾಬ್ದಾರಿ. ಕರ್ನಾಟಕದ ಎಲ್ಲ ನೆರೆ ರಾಜ್ಯಗಳ ಸರ್ಕಾರಗಳಿಗೆ ಸಂವಿಧಾನದತ್ತ ಅಧಿಕಾರದಂತೆ ಭಾಷಾ ನಿರ್ದೇಶಕರನ್ನು ನೇಮಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಆಗ್ರಹಿಸಲಿದೆ ಎಂದು ಡಾ.ಬಿಳಿಮಲೆ ತಿಳಿಸಿದರು.ಕೇರಳ ರಾಜ್ಯವು ಅಲ್ಲಿನ ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಿಸದೆ ಇರುವುದು ಅಕ್ಷಮ್ಯ ಎಂದ ಅವರು, ಇದು ನಾಚಿಕೆಗೇಡಿನ ಸಂಗತಿ. ಅಲ್ಪಸಂಖ್ಯಾತ ಕನ್ನಡಿಗರ ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ಕ್ರಮವಾಗಿದೆ ಎಂದರು.ನಾವು ಕೇರಳದ ಕನ್ನಡಿಗರು- ಮಂಜೇಶ್ವರ ಶಾಸಕ:
ಕರ್ನಾಟಕ ಸರ್ಕಾರದ ಈ ರೀತಿಯ ಸ್ಪಂದನಾಶೀಲ ಕಾರ್ಯಕ್ರಮಗಳು ಗಡಿನಾಡಿನ ಕನ್ನಡಿಗರಲ್ಲಿ ಹೊಸ ವಿಶ್ವಾಸವನ್ನು ಮೂಡಿಸುತ್ತವೆ ಎಂದ ಎ.ಕೆ.ಎಂ.ಆಶ್ರಫ್, ಪ್ರಾಧಿಕಾರದ ಈ ಪ್ರಯತ್ನ ಶ್ಲಾಘನೀಯ ಎಂದರು.