- ಚನ್ನಗಿರಿ ಎಪಿಎಂಸಿ ಸಭಾಂಗಣದಲ್ಲಿ ತಾಲೂಕು- ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ - - - ಕನ್ನಡಪ್ರಭ ವಾರ್ತೆ ಚನ್ನಗಿರಿ
ಮಂಗಳವಾರ ಪಟ್ಟಣದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ತಾಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯಲ್ಲಿಯೇ ಚನ್ನಗಿರಿ ದೊಡ್ಡ ತಾಲೂಕು ಆಗಿದೆ. ಪ್ರತಿದಿನ ಸಾವಿರಾರು ಜನ ಕಚೇರಿಗಳ ಕೆಲಸಕ್ಕೆ ಪಟ್ಟಣಕ್ಕೆ ಬರುತ್ತಾರೆ. ಇಲ್ಲಿನ ಎಲ್ಲ ಕಚೇರಿಗಳ ಮುಖ್ಯ ರಸ್ತೆಯ ಬದಿಯಲ್ಲಿ ಮತ್ತು ನೃಪತುಂಗ ರಸ್ತೆಯಲ್ಲಿ ಬಿಡಾಡಿ ದನಗಳು ಓಡಾಡುತ್ತಿವೆ. ಇದರಿಂದ ವಾಹನಗಳ ಸವಾರರು ಅನೇಕ ಅಪಘಾತಗಳಿಗೆ ಈಡಾಗುತ್ತಿದ್ದಾರೆ. ಆದ್ದರಿಂದ ಕೂಡಲೇ ಬಿಡಾಡಿ ದನಗಳ ಮಾಲೀಕರನ್ನು ಶೀಘ್ರ ಪತ್ತೆ ಹಚ್ಚಬೇಕು. ಈ ಬಗ್ಗೆ ನಿರ್ಲಕ್ಷಿಸುವ ದನಗಳ ಮಾಲೀಕರ ವಿರುದ್ಧ ಮುಲಾಜಿಲ್ಲದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಎಂದು ಆದೇಶಿಸಿದರು.
ಚನ್ನಗಿರಿ ತಾಲೂಕಿನಲ್ಲಿ ಅಡಕೆ ಬೆಳೆಗಾರ ರೈತರು ಹೆಚ್ಚಾಗಿ ಇದ್ದಾರೆ. ಪ್ರಸ್ತುತ ಅಡಕೆ ಬೆಳೆ ಕಟಾವಿನ ಸಮಯವಾಗಿದ್ದು, ರೈತರು ಅಡಕೆ ಸಿಪ್ಪೆಯನ್ನು ರಸ್ತೆಯಲ್ಲಿ ಹಾಕಬಾರದು. ಈ ಸಿಪ್ಪೆಯಿಂದ ಕಾಂಪೊಸ್ಟ್ ಗೊಬ್ಬರ ತಯಾರಿಸಬಹುದು. ಇದಕ್ಕಾಗಿ ಸರ್ಕಾರದಿಂದ ಸಹಾಯಧನವೂ ಸಿಗಲಿದೆ. ಅದನ್ನು ಬಳಸಿ, ತೋಟಗಳಿಗೆ ಬೇಕಾದ ಗೊಬ್ಬರ ತಯಾರು ಮಾಡಿಕೊಳ್ಳಿ ಎಂದು ಸಲಹೆ ಮಾಡಿದರು.ಚನ್ನಗಿರಿ ಪಟ್ಟಣದಿಂದ ಶಿವಮೊಗ್ಗದವರೆಗೆ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆ ಕಾಮಗಾರಿ ಕೆಲಸ ಪ್ರಗತಿಯಲ್ಲಿದೆ. ಮುಂದಿನ ಒಂದೂವರೆ ತಿಂಗಳೊಳಗೆ ಈ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ನೀಡಲಾಗುವುದು ಎಂದರು.
- - -
ಕೋಟ್ ರೈತರಿಗೆ ತೊಂದರೆ ಕೊಡುವುದು ನಮ್ಮ ಉದ್ದೇಶವಲ್ಲ. ನಾನು ಸಹಾ ರೈತನ ಮಗನಾಗಿದ್ದು, ನಮ್ಮಿಂದ ಇನ್ನೊಬ್ಬರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ- ಜಿ.ಎಂ.ಗಂಗಾಧರ ಸ್ವಾಮಿ, ಜಿಲ್ಲಾಧಿಕಾರಿ
- - - -10ಕೆಸಿಎನ್ಜಿ1:ಚನ್ನಗಿರಿ ಪಟ್ಟಣ ಎಪಿಎಂಸಿ ಸಭಾಂಗಣದಲ್ಲಿ ನಡೆದ ತಾಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.