ವಿದ್ಯಾರ್ಥಿಗಳಲ್ಲಿ ಕಲಿಯುವ ಹಸಿವಿದ್ದರೆ ಸಕಲವೂ ಸಾಧ್ಯ: ಪ್ರೊ. ಸುರೇಶ ತುವಾರ

KannadaprabhaNewsNetwork |  
Published : Feb 01, 2024, 02:05 AM IST
ಸಮಾರಂಭದಲ್ಲಿ ಪ್ರೊ.ಸುರೇಶ.ಎಂ.ತುವಾರ ಮಾತನಾಡಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಗದಗ ಜಿಲ್ಲೆಯ ಅನೇಕ ದೊಡ್ಡ ದೊಡ್ಡ ಸಾಧಕರ ತತ್ವ-ಸಿದ್ಧಾಂತಗಳನ್ನು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಕೊಂಡು ನಿರಂತರ ಪ್ರಯತ್ನದೊಂದಿಗೆ ಪ್ರಯತ್ನಿಸಿದಾಗ ಮಾತ್ರ ತಮ್ಮ ಜಿಲ್ಲೆಯ ಕೀರ್ತಿ ಹೆಚ್ಚಿಸುವುದು ಸಾಧ್ಯ

ಗದಗ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಅವಧಿಯಲ್ಲಿ ಕಲಿಯುವ ಹಸಿವು ಮತ್ತು ಆಸಕ್ತಿ ಇದ್ದರೆ ಸಕಲ ಯಶಸ್ಸು ನಿಮ್ಮದಾಗುತ್ತದೆ. ಆದುದರಿಂದ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಮಯವನ್ನು ವ್ಯರ್ಥ ಮಾಡದೆ ಕಲಿಯುವ ಹಸಿವಿನೊಂದಿಗೆ ಮುನ್ನೆಡದಾಗ ಸಕಲ ಯಶಸ್ಸು ನಿಮ್ಮದಾಗುತ್ತದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಅಭಿವೃದ್ಧಿ ಮಂಡಳಿ ನಿರ್ದೇಶಕ ಪ್ರೊ. ಸುರೇಶ ಎಂ. ತುವಾರ ಹೇಳಿದರು.

ನಗರದ ಕೆಎಲ್‌ಇ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಾರಿತೋಷಕ ಹಾಗೂ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳು ಗದಗ ಜಿಲ್ಲೆಯ ಅನೇಕ ದೊಡ್ಡ ದೊಡ್ಡ ಸಾಧಕರ ತತ್ವ-ಸಿದ್ಧಾಂತಗಳನ್ನು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅಳವಡಿಕೊಂಡು ನಿರಂತರ ಪ್ರಯತ್ನದೊಂದಿಗೆ ಪ್ರಯತ್ನಿಸಿದಾಗ ಮಾತ್ರ ತಮ್ಮ ಜಿಲ್ಲೆಯ ಕೀರ್ತಿ ಹೆಚ್ಚಿಸುವುದು ಸಾಧ್ಯ ಎಂದರು.

ಪ್ರಾಚಾರ್ಯ ಪ್ರೊ. ಪಿ.ಜಿ. ಪಾಟೀಲ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ದೊಡ್ಡ ದೊಡ್ಡ ಕನಸುಗಳೊಂದಿಗೆ ನಿರಂತರ ಪ್ರಯತ್ನ ಮತ್ತು ಛಲದೊಂದಿಗೆ ಮುನ್ನುಗ್ಗಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದರು.

ಪಪೂ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್.ಬಿ. ಹಾವೇರಿ ವಾರ್ಷಿಕ ವರದಿ ವಾಚನ ಮಾಡಿದರು.

ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಎಸ್.ಪಿ. ಸಂಶಿಮಠ, ಆಡಳಿತ ಮಂಡಳಿಯ ಸದಸ್ಯ ವೀರೇಶ ಕೂಗು, ಈಶಣ್ಣ ಮುನವಳ್ಳಿ ಹಾಗೂ ಇತರರು ಇದ್ದರು. ವಿಜಯಲಕ್ಷೀ ಮೆಣಸಿನಕಾಯಿ ಪ್ರಶಸ್ತಿ ವಿತರಣೆ ನೆರವೇರಿಸಿದರು. ಪ್ರೊ. ನೇತ್ರಾ ನಾಗಲೋಟಿಮಠ ಸ್ವಾಗತಿಸಿದರು. ಪ್ರೊ. ಎಸ್.ಆರ್. ಹಿರೇಗೌಡರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ