ಹಾವೇರಿ: ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ಮಾಡಿರುವುದು ಸ್ವಾಗತಾರ್ಹ. ಮುಖ್ಯಮಂತ್ರಿ ಸಿದ್ದರಾಮಯ್ಯ ಏ. 17ರಂದು ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಷ್ಠಾನಕ್ಕೆ ತಂದರೆ ಸಿದ್ದರಾಮಯ್ಯ ಅವರ ರಾಜಕೀಯ ಜೀವನದ ಇತಿಹಾಸದಲ್ಲಿ ಹೊಸ ಮೈಲುಗಲ್ಲು ಸೃಷ್ಟಿಯಾಗಲಿದೆ ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಹೇಳಿದರು.ಭಾನುವಾರ ಮಾಧ್ಯಮಗಳ ಜತೆ ಮಾತನಾಡಿ, ಹಿಂದುಳಿದ ಸಮುದಾಯಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಪುನರ್ಪರಿಶೀಲನೆ ಮಾಡಬೇಕು. ಹೊಸ ಜಾತಿಗಣತಿ ಆಧಾರದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಈಡಿಗ ಸಮುದಾಯ 15 ಲಕ್ಷ ಜನಸಂಖ್ಯೆ ಇದೆ ಎಂದು ಮಾಹಿತಿ ಸೋರಿಕೆಯಿಂದ ತಿಳಿದುಬಂದಿದ್ದು, ಇದು ಸತ್ಯಕ್ಕೆ ದೂರವಾಗಿರುವ ವರದಿಯಾಗಿದೆ.ಈಡಿಗ, ಬಿಲ್ಲವ ಸೇರಿ ರಾಜ್ಯದಲ್ಲಿ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಈ ನಾಲ್ಕು ಜಿಲ್ಲೆಗಳಲ್ಲಿ 26 ಲಕ್ಷ ಜನಸಂಖ್ಯೆ ಇದೆ. ಇಡೀ ರಾಜ್ಯದಲ್ಲಿ ನೋಡಿದಾಗ ಸುಮಾರು 40 ಲಕ್ಷ ಜನಸಂಖ್ಯೆ ಇದೆ. ಎಲ್ಲೋ ಸುಳ್ಳು ವರದಿ ನೀಡಿದ್ದಾರೆಂಬ ಆತಂಕ ಶುರುವಾಗುತ್ತಿದೆ. ವರದಿ ಪಾರದರ್ಶಕವಾಗಿರಬೇಕು. ಕಾಂಗ್ರೆಸ್ನ ಸರ್ವೋಚ್ಚ ನಾಯಕರ ಆಶಯದಂತೆ ಜಾತಿಗಣತಿ ಜಾರಿಗೆ ತರಬೇಕಾಗುತ್ತದೆ ಎಂದರು. ಕೆಲವು ಸ್ವಾಮೀಜಿ, ಮಠಾಧಿಪತಿಗಳು ಜಾತಿಗಣತಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪರ- ವಿರೋಧ ಅಭಿಪ್ರಾಯ ವ್ಯಕ್ತಪಡಿಸುವುದು ಇರುವಂತಹದ್ದೆ. ಹಾಗಾಗಿ ಸರ್ಕಾರ ಅವರ ಮಾತಿಗೆ ಮಣಿಯಬಾರದು. ಈ ನಡುವೆ ಕೆಲವು ಕಾಂಗ್ರೆಸ್ನ ಹಿರಿಯ ನಾಯಕರು ಚುನಾವಣಾ ಪೂರ್ವದಲ್ಲಿ ಜಾತಿಗಣತಿ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿ, ಈಗ ವರದಿ ಬರುತ್ತಿದ್ದಂತೆ ವಿರೋಧಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಏ. 17ರಂದು ಜಾತಿಗಣತಿ ವರದಿಯನ್ನು ಚರ್ಚಿಸಿ ಜಾರಿಗೆ ತಂದರೆ ಸಮಾಜದ ಸ್ವಾಮೀಜಿ, ಮಠಾಧೀಶರು ಸಿಎಂ ಭೇಟಿ ಮಾಡಿ ಅಭಿನಂದಿಸುತ್ತೇವೆ ಎಂದರು.ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಿ
ಸಂಘಟನೆ ಜಿಲ್ಲಾಧ್ಯಕ್ಷ ಕಾಂತೇಶ ಮುಗಳಿಹಳ್ಳಿ ಮಾತನಾಡಿದರು. ಹಿರೇಕೆರೂರು ತಾಲೂಕಾಧ್ಯಕ್ಷೆ ಅನಿತಾ ಮಾಳಗಿ, ಶೋಭಾ ಜಾಡರ, ನಾಗರಾಜ ಶಿರಗಂಬಿ ಇದ್ದರು.