ಸಿಎಂ ಚರ್ಚೆ ಬೇಕಾದರೆ ಬೈರಮಂಗಲ ವೃತ್ತಕ್ಕೆ ಬರಲಿ: ನಿಖಿಲ್

KannadaprabhaNewsNetwork |  
Published : Jun 24, 2026, 01:15 AM IST
23ಕೆಆರ್ ಎಂಎನ್ 2.ಜೆಪಿಜಿಹಾರೋಹಳ್ಳಿ ಹೋಬಳಿಯ ದೊಡ್ಡಬಿದರಕಲ್ ಗ್ರಾಮದ ಊರ ಹಬ್ಬಕ್ಕೆ ಭೇಟಿ ನೀಡಿ ನಿಖಿಲ್ ಕುಮಾರಸ್ವಾಮಿ ಪೂಜೆ ಸಲ್ಲಿಸಿದರು. | Kannada Prabha

ಸಾರಾಂಶ

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ವಿಧಾನಸೌಧದ ನಾಲ್ಕು ಗೋಡೆಗಳ ಮಧ್ಯೆ ಕೂತು ಚರ್ಚಿಸುವ ವಿಷಯವಲ್ಲ. ಇದು ರೈತರ ಬದುಕಿನ ಪ್ರಶ್ನೆ. ಚರ್ಚೆ ಬೇಕಾದರೆ ಬೈರಮಂಗಲ ವೃತ್ತಕ್ಕೆ ಬರಲಿ ಎಂದು ಮುಖ್ಯಮಂತ್ರಿಗಳಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಹ್ವಾನ ನೀಡಿದರು

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ವಿಧಾನಸೌಧದ ನಾಲ್ಕು ಗೋಡೆಗಳ ಮಧ್ಯೆ ಕೂತು ಚರ್ಚಿಸುವ ವಿಷಯವಲ್ಲ. ಇದು ರೈತರ ಬದುಕಿನ ಪ್ರಶ್ನೆ. ಚರ್ಚೆ ಬೇಕಾದರೆ ಬೈರಮಂಗಲ ವೃತ್ತಕ್ಕೆ ಬರಲಿ ಎಂದು ಮುಖ್ಯಮಂತ್ರಿಗಳಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಹ್ವಾನ ನೀಡಿದರು.

ಹಾರೋಹಳ್ಳಿ ಹೋಬಳಿಯ ದೊಡ್ಡಬಿದರಕಲ್ ಗ್ರಾಮದ ಊರ ಹಬ್ಬಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಣ್ಣ ಅವರು ಸ್ಪಷ್ಟವಾಗಿ ಹೇಳಿದ್ದಾರೆ - ಚರ್ಚೆ ಬೇಕಾದರೆ ಬೈರಮಂಗಲ ಸರ್ಕಲ್‌ಗೆ ಬನ್ನಿ. ಬಾಧಿತ ರೈತರ ಸಮ್ಮುಖದಲ್ಲೇ ಬಹಿರಂಗವಾಗಿ ಚರ್ಚೆ ಮಾಡೋಣ ಎಂದು ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ. ವಿಧಾನಸೌಧದ ಎಸಿ ಕೊಠಡಿಯಲ್ಲಿ ಕಾಫಿ ಕುಡಿಯುತ್ತಾ ರೈತರ ಭೂಮಿ ಬಗ್ಗೆ ತೀರ್ಮಾನ ಬೇಡ ಎಂದರು.

ರೈತರೇ ಅಂತಿಮ ತೀರ್ಪುಗಾರರು:

ಈ ವಿವಾದಕ್ಕೆ ಇತ್ಯಾರ್ಥವಾಗಬೇಕಾದರೆ ಒಂದೇ ಮಾರ್ಗ. ಮುಖ್ಯಮಂತ್ರಿಗಳೇ ಸ್ಥಳಕ್ಕೆ ಬಂದು ರೈತರೊಂದಿಗೆ ನೇರವಾಗಿ ಚರ್ಚೆ ಮಾಡಬೇಕು. ಈ ಟೌನ್‌ಶಿಪ್ ಯೋಜನೆಗೆ ಸ್ಥಳೀಯ ರೈತರು ಸಹಮತ ವ್ಯಕ್ತಪಡಿಸಿದರೆ ಸರ್ಕಾರ ಮುಂದುವರಿಯಲಿ. ವಿರೋಧ ವ್ಯಕ್ತಪಡಿಸಿದರೆ, ಮಾನ್ಯ ಮುಖ್ಯಮಂತ್ರಿಗಳೇ ಜನರಿಗೆ ಉತ್ತರ ನೀಡಬೇಕು ಎಂದು ನಿಖಿಲ್ ಆಗ್ರಹಿಸಿದರು.

ಇಲ್ಲಿಯವರೆಗೆ ಯಾವೊಬ್ಬ ಜನಪ್ರತಿನಿಧಿಯೂ, ಜಿಲ್ಲಾಧಿಕಾರಿಯೂ ಸ್ಥಳಕ್ಕೆ ಬಂದು ಸರ್ವೇ ಮಾಡಿಲ್ಲ. ಸ್ಥಳೀಯ ರೈತರ ಜೊತೆ ಒಂದೇ ಒಂದು ಬಾರಿಯೂ ಚರ್ಚೆ ಮಾಡಿಲ್ಲ. ರೈತರನ್ನು ಸಂಪೂರ್ಣ ಕತ್ತಲಲ್ಲಿಟ್ಟು ಯೋಜನೆ ರೂಪಿಸಲಾಗುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

ರೈತರ ಒಗ್ಗಟ್ಟನ್ನು ಒಡೆಯಲು ಸರ್ಕಾರದ ಸಂಚು:

ರಾಜ್ಯ ಸರ್ಕಾರ ರೈತರ ಒಗ್ಗಟ್ಟನ್ನು ಒಡೆಯಲು ವ್ಯವಸ್ಥಿತವಾಗಿ ಸಂಚು ರೂಪಿಸಿದೆ. 25 ಕೋಟಿ ರು. ಇಟ್ಟುಕೊಂಡು, ಒಟ್ಟು 755 ಬಾಧಿತ ರೈತರ ಪೈಕಿ ಕೇವಲ 7 ಜನ ರೈತರ ಬೆಂಬಲ ಪಡೆದುಕೊಂಡು ಇಡೀ ಟೌನ್‌ಶಿಪ್ ಯೋಜನೆಗೆ ಅನುಮೋದನೆ ಪಡೆಯಲಾಗಿದೆ. ದೇಶದ ಇತಿಹಾಸದಲ್ಲೇ ಇಂತಹ ಘಟನೆ ಇದೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಜೆಡಿಎಸ್ ಮುಖಂಡರು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.

23ಕೆಆರ್ ಎಂಎನ್ 2.ಜೆಪಿಜಿ

ಹಾರೋಹಳ್ಳಿ ಹೋಬಳಿಯ ದೊಡ್ಡಬಿದರಕಲ್ ಗ್ರಾಮದ ಊರ ಹಬ್ಬಕ್ಕೆ ಭೇಟಿ ನೀಡಿ ನಿಖಿಲ್ ಕುಮಾರಸ್ವಾಮಿ ಪೂಜೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯುತ್ ಖಾಸಗೀಕರಣ ನೇಕಾರರಿಗೆ ಕಂಟಕ
ಕೋಮುವಾದಕ್ಕೆ ಬಳಕೆಯಾಗುವ ಭಕ್ತಿ ಅಪ್ರಸ್ತುತ: ಕಾ.ತ.ಚಿಕ್ಕಣ್ಣ