ಸಮುದಾಯ ಕೈಜೋಡಿಸಿದರೆ ಜಯಂತಿಗಳಿಗೆ ಮೆರುಗು

KannadaprabhaNewsNetwork |  
Published : Nov 07, 2024, 11:57 PM IST
7ಎಚ್‌ಪಿಟಿ4- ಹೊಸಪೇಟೆಯಲ್ಲಿ ಗುರುವಾರ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಕನಕದಾಸರ ಜಯಂತಿಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. | Kannada Prabha

ಸಾರಾಂಶ

ಸರ್ಕಾರ ಮತ್ತು ಸಮುದಾಯದ ಸಮನ್ವಯದಲ್ಲಿ ಒಟ್ಟು 46 ಮಹನೀಯರ ಜಯಂತಿಗಳನ್ನು ಆಚರಣೆ ಮಾಡಲಾಗುತ್ತದೆ.

ಹೊಸಪೇಟೆ: ಸರ್ಕಾರ ಮಹನೀಯರ ಜಯಂತಿಗಳ ಆಚರಣೆಗೆ ಅನುದಾನ ಬಿಡುಗಡೆ ಮಾಡುತ್ತದೆ. ಅದ್ಧೂರಿ ಆಚರಣೆ ಮಾಡಲು ಸಮುದಾಯಗಳು ಕೈ ಜೋಡಿಸಿದಾಗ ಆ ಜಯಂತಿಗಳಿಗೆ ಮೆರುಗು ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನಕದಾಸರ ಜಯಂತಿಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ಮತ್ತು ಸಮುದಾಯದ ಸಮನ್ವಯದಲ್ಲಿ ಒಟ್ಟು 46 ಮಹನೀಯರ ಜಯಂತಿಗಳನ್ನು ಆಚರಣೆ ಮಾಡಲಾಗುತ್ತದೆ. ಕನಕದಾಸರ ಜಯಂತಿ ನಿಮಿತ್ತ ಭಾವಚಿತ್ರದ ಮೆರವಣಿಗೆ ನ.18ರಂದು ಬೆಳಗ್ಗೆ 9 ಗಂಟೆಗೆ ಅಭಯಹಸ್ತ ಆಂಜನೇಯ ದೇವಸ್ಥಾನದಿಂದ ವೀರ ಮದಕರಿ ವೃತ್ತ, ಉದ್ಯೋಗ ಪೆಟ್ರೋಲ್ ಬಂಕ್, ಮಸೀದಿ ರಸ್ತೆ, ಗಾಂಧಿ ಚೌಕ್, ಕೆಕೆಆರ್‌ಟಿಸಿ ಬಸ್ ನಿಲ್ದಾಣ, ಕೃಷ್ಣ ಪ್ಯಾಲೇಸ್ ಮಾರ್ಗವಾಗಿ ನೇರವಾಗಿ ಕನಕದಾಸ ವೃತ್ತದ ವರೆಗೆ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ನಡೆಸಲಾಗುವುದು. ಸಮುದಾಯದವರ ನಿರ್ಧಾರದಂತೆ ಈ ಭಾರಿ ವೇದಿಕೆ ಕಾರ್ಯಕ್ರಮವನ್ನು ನಗರಸಭೆ ಆವರಣದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.

ಜಯಂತಿಯ ದಿನದಂದು ಯಾವುದೇ ಲೋಪವಾಗಬಾರದು. ಮೆರವಣಿಗೆ, ವೇದಿಕೆ ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ನೆರವೇರಿಸಬೇಕು. ಉತ್ತಮ ಕಲಾ ತಂಡದವರನ್ನು ಕರೆತಂದು ಜಯಂತಿಯ ಮೆರಗು ಹೆಚ್ಚಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ಸಮುದಾಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡರು.

ಸಮುದಾಯದವರ ಆಶಯದಂತೆ ನಗರಸಭೆ ಆವರಣದಲ್ಲಿ ಈ ಬಾರಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು ಹಾಗೂ ಕಳೆದ ಬಾರಿ 3 ಕಲಾ ತಂಡಗಳನ್ನು ಕರೆತರಲಾಗಿತ್ತು. ಈ ಬಾರಿ ಐದು ಕಲಾ ತಂಡಗಳನ್ನು ಕರೆಸಲಾಗುವುದು ಎಂದು ಸಭೆಗೆ ಜಿಲ್ಲಾಧಿಕಾರಿಗಳು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕೆ, ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಪೊಲೀಸ್ ಇಲಾಖೆ ಅಧಿಕಾರಿಗಳು ಮಾಡಬೇಕು. ಶಿಷ್ಟಾಚಾರದನ್ವಯ ಜಯಂತಿಯ ಆಮಂತ್ರಣ ಪತ್ರಿಕೆ ಮುದ್ರಿಸಿ, ಆಮಂತ್ರಣ ಪತ್ರಿಕೆಗಳನ್ನು ಗಣ್ಯ ಮಾನ್ಯರಿಗೆ ವಿತರಿಸಬೇಕು. ಜಯಂತಿಯ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ಜಯಂತ್ಯುತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ವಿವಿಧ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ, ಜಿಪಂ ಸಿಇಒ ಅಕ್ರಂ ಷಾ, ಸಹಾಯಕ ಆಯುಕ್ತ ವಿವೇಕಾನಂದ ಪಿ., ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ನಗರಸಭೆಯ ಪೌರಾಯುಕ್ತ ಚಂದ್ರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ್ ನಾಯ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಶ್ವೇತಾ ಎಸ್., ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ತಹಸೀಲ್ದಾರ ಶೃತಿ ಎಂ.ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್‌ ಕೆ. ರಂಗಣ್ಣನವರ ಮತ್ತು ಸಮುದಾಯದ ಮುಖಂಡರು ಇದ್ದರು.

ಹೊಸಪೇಟೆಯಲ್ಲಿ ಗುರುವಾರ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಕನಕದಾಸರ ಜಯಂತಿಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು