ಪರಿಸರ ಕಾಪಾಡಿದರೆ ಎಲ್ಲರ ಆರೋಗ್ಯ ಸುರಕ್ಷಿತ: ದೇವೇಂದ್ರಪ್ಪ

KannadaprabhaNewsNetwork |  
Published : Sep 15, 2024, 01:55 AM IST
14ಜೆ.ಎಲ್.ಆರ್. ಚಿತ್ರ1) ಜಗಳೂರು ಪಟ್ಟಣದಲ್ಲಿ ಸ್ವಚ್ಛತೆ ಸೇವೆಗೆ ಶಾಸಕ ಬಿ.ದೇವೇಂದ್ರಪ್ಪ,ಪ.ಪಂ.ಅಧ್ಯಕ್ಷ ನವೀನ್ ಚಾಲನೆ ನೀಡಿದರು. | Kannada Prabha

ಸಾರಾಂಶ

ಪರಿಸರವನ್ನು ನಾವು ಕಾಪಾಡಿದರೆ ಪರಿಸರವೂ ನಮ್ಮನ್ನು ಕಾಪಾಡುತ್ತದೆ. ಪಟ್ಟಣ ಪಂಚಾಯಿತಿ ಆಡಳಿತ ಸಹ ಸರ್ಕಾರದ ಆದೇಶದಂತೆ ಸ್ವಚ್ಛತೆ ಸೇವಾ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.

- ಜಗಳೂರಲ್ಲಿ ಸ್ವಚ್ಛತೆಯೇ ಸೇವೆಯಡಿ ಕಳೆ ಗಿಡಗಳ ತೆರವು ಕಾರ್ಯಕ್ರಮ

- - - ಕನ್ನಡಪ್ರಭ ವಾರ್ತೆ ಜಗಳೂರು

ಪರಿಸರವನ್ನು ನಾವು ಕಾಪಾಡಿದರೆ ಪರಿಸರವೂ ನಮ್ಮನ್ನು ಕಾಪಾಡುತ್ತದೆ. ಪಟ್ಟಣ ಪಂಚಾಯಿತಿ ಆಡಳಿತ ಸಹ ಸರ್ಕಾರದ ಆದೇಶದಂತೆ ಸ್ವಚ್ಛತೆ ಸೇವಾ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ಪಟ್ಟಣದ ಭಾರತ್ ಟಾಕೀಸ್ ಸಮೀಪ ಶನಿವಾರ ಖಾಲಿ ಜಾಗದಲ್ಲಿ ಬೆಳೆದಿದ್ದ ಕಳೆ ಗಿಡಗಳ ತೆರವು ಕಾರ್ಯಕ್ಕೆ ಚಾಲನೆ ನೀಡಿ, ಪರಿಸರ ಸಂರಕ್ಷಣೆ ಪ್ರತಿಜ್ಞಾವಿಧಿ ಬೋಧಿಸಿ, ಪರಿಸರ ಉಳಿಸಿ, ಆರೋಗ್ಯ ಕಾಪಾಡಿಕೊಳ್ಳಲು ತಿಳಿಲಸಿದರು.

ಸಾರ್ವಜನಿಕರು ಕಸ ಕೊಂಡೊಯ್ಯುವ ಗಾಡಿಗಳು ನಿಮ್ಮ ಮನೆ ಬಾಗಿಲಿಗೆ ಬರುತ್ತವೆ. ಮನೆಗಳಲ್ಲಿ ಸಂಗ್ರಹಿಸಿದ ಕಸವನ್ನು ಗಾಡಿಗಳಿಗೆ ನೀಡಬೇಕು. ಸಾರ್ವಜನಿಕರು ಎಲ್ಲಿ ಬೇಕೆಂದರಲ್ಲಿ ಕಸ ಹಾಕಿ ಪರಿಸರವನ್ನು ಹಾಳು ಮಾಡಬಾರದು. ನಗರದ ಪರಿಸರ ಸ್ವಚ್ಛವಾಗಿಟ್ಟರೆ ಎಲ್ಲರ ಆರೋಗ್ಯ ಚೆನ್ನಾಗಿರುತ್ತದೆ ಎಂದರು.

ಪ.ಪಂ. ನೂತನ ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರ ಚೆನ್ನಾಗಿದ್ದರೆ ನಾವು ಆರೋಗ್ಯವಂತರಾಗಿರುತ್ತೇವೆ. ಇಲ್ಲವಾದರೆ ಹಲವಾರು ರೋಗಗಳಿಂದ ಬಳಲಬೇಕಾಗುತ್ತದೆ. ಹಾಗಾಗಿ, ಕಸವನ್ನು ಚರಂಡಿಯಲ್ಲಿ ಹಾಗೂ ಖಾಲಿ ಜಾಗಗಳಲ್ಲಿ ಹಾಕದೇ ಕಸದ ಗಾಡಿಗಳಿಗೆ ಒಣಕಸ, ಹಸಿಕಸ, ತ್ಯಾಜ್ಯಗಳನ್ನು ವಿಂಗಡಿಸಿ ಹಾಕುವಂತೆ ಮನವಿ ಮಾಡಿದರು.

ಮುಖ್ಯಾಧಿಕಾರಿ ಲೋಕ್ಯ ನಾಯ್ಕ್ ಮಾತನಾಡಿ, ಸಾರ್ವಜನಿಕರು ಮನೆ, ರಸ್ತೆ, ಖಾಲಿ ಜಾಗ ಹೀಗೆ ಎಲ್ಲೆಂದರಲ್ಲಿ ಅವೈಜ್ಞಾನಿಕವಾಗಿ ಕಸವನ್ನು ಎಸೆಯಬಾರದು. ಸ್ವಚ್ಛತೆಯೇ ನಮ್ಮ ಸೇವೆ ಎಂದು ಎಲ್ಲರೂ ಭಾವಿಸಬೇಕು. ಸೆ.14ರಿಂದ ಅ.2 ರವರೆಗೆ ಸ್ವಚ್ಚತಾ ಸೇವೆ ಕಾರ್ಯಕ್ರಮ ಮಾಡಲಾಗುತ್ತದೆ ಎಂದರು.

ಈ ಸಂದರ್ಭ ಪ.ಪಂ. ಸದಸ್ಯರಾದ ಲಲಿತಾ ಶಿವಣ್ಣ, ಸದಸ್ಯ ರಮೇಶ್ ರೆಡ್ಡಿ, ಶಕೀಲ್, ಮಹಮ್ಮದ್ ಆಲಿ, ಲುಕ್ಮಾನ್ ಖಾನ್, ಆರೋಗ್ಯ ನಿರೀಕ್ಷಕ ಪ್ರಶಾಂತ್, ಪೌರಕಾರ್ಮಿಕರು ಹಾಗೂ ಸಾರ್ವಜನಿಕರು ಹಾಜರಿದ್ದರು.

- - - -14ಜೆ.ಎಲ್.ಆರ್.1:

ಜಗಳೂರು ಪಟ್ಟಣದಲ್ಲಿ ಸ್ವಚ್ಛತೆ ಸೇವೆ ಕಾರ್ಯಕ್ರಮಕ್ಕೆ ಶಾಸಕ ಬಿ.ದೇವೇಂದ್ರಪ್ಪ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌