ಗೆಜ್ಜಲಗೆರೆ ಅಸ್ತಿತ್ವಕ್ಕೆ ಧಕ್ಕೆಯಾದರೆ ಚಳವಳಿ ತೀವ್ರ: ರೈತರ ಎಚ್ಚರಿಕೆ

KannadaprabhaNewsNetwork |  
Published : Feb 10, 2026, 01:45 AM IST
9ಕೆಎಂಎನ್‌ಡಿ-15ಮದ್ದೂರು ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಗ್ರಾಪಂ ಸೇರ್ಪಡೆ ವಿರೋಧಿಸಿ ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳನ್ನು ಸೇರ್ಪಡೆ ಮಾಡುವ ವಿಚಾರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರಿಂದ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸದೆ ಏಕಪಕ್ಷಿಯ ನಿರ್ಧಾರ ಕೈಗೊಂಡಿರುವ ಈ ಜನಪ್ರತಿನಿಧಿಗಳಿಗೆ ಗ್ರಾಮದ ಜನರು ಕೊರಳಪಟ್ಟಿ ಹಿಡಿದು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ಗೆಜ್ಜಲಗೆರೆ ಗ್ರಾಮದ ಅಸ್ತಿತ್ವಕ್ಕೆ ಯಾವುದೇ ರೀತಿಯ ಧಕ್ಕೆಯಾದರೂ ಸಹ ಚಳವಳಿ ತೀವ್ರಗೊಳಿಸುವುದಾಗಿ ರೈತ ಮುಖಂಡರು ಸೋಮವಾರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮದ್ದೂರು ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮಗಳನ್ನು ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗ್ರಾಪಂ ಎದುರು ಕಳೆದ 50 ದಿನಗಳಿಂದ ನಿರಂತರವಾಗಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಜನಪ್ರತಿನಿಧಿಗಳು, ರೈತರು ಹಾಗೂ ಗ್ರಾಮಸ್ಥರಿಗೆ ರೈತ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ರೈತ ಹಿತ ರಕ್ಷಣಾ ಸಮಿತಿ ಉಪಾಧ್ಯಕ್ಷ ಕೆ.ಬೋರಯ್ಯ, ಖಜಾಂಚಿ ಮುದ್ದೇಗೌಡ ಸೇರಿದಂತೆ ಹಲವು ಮುಖಂಡರು ಬೆಂಬಲ ಸೂಚಿಸಿ ಮಾತನಾಡಿದರು.

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳನ್ನು ಸೇರ್ಪಡೆ ಮಾಡುವ ವಿಚಾರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರಿಂದ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸದೆ ಏಕಪಕ್ಷಿಯ ನಿರ್ಧಾರ ಕೈಗೊಂಡಿರುವ ಈ ಜನಪ್ರತಿನಿಧಿಗಳಿಗೆ ಗ್ರಾಮದ ಜನರು ಕೊರಳಪಟ್ಟಿ ಹಿಡಿದು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ನಂತರ ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಧರಣಿ ನಿರತರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಮದ್ದೂರು ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಗ್ರಾಮ ಸೇರ್ಪಡೆಗೊಂಡ ನಂತರ ಯಾವುದೇ ಮೂಲಭೂತ ಸೌಲಭ್ಯ ದೊರಕುತ್ತಿಲ್ಲ. ಇ-ಸ್ವತ್ತು ಪಡೆಯಲು ತೊಂದರೆಯಾಗಿದೆ. ಹೀಗಾಗಿ ಗ್ರಾಪಂನಲ್ಲಿ ಎಲ್ಲಾ ಸೌಲಭ್ಯ ದೊರಕುವಂತೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಹವಾಲು ಸಲ್ಲಿಸಿದರು.

ಮದ್ದೂರು ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಗ್ರಾಮ ಸೇರಿದಂತೆ ನಾಲ್ಕು ಗ್ರಾಪಂಗಳ ವಿವಾದ ನ್ಯಾಯಾಲಯದಲ್ಲಿ ಇರುವುದರಿಂದ ಏಕಾಏಕಿ ತೀರ್ಮಾನ ಕೈಗೊಳ್ಳಲು ಬರುವುದಿಲ್ಲ ಹೀಗಾಗಿ ಮೂಲಭೂತ ಸೌಲಭ್ಯಗಳ ಬಗ್ಗೆ ತಾತ್ಕಾಲಿಕ ವ್ಯವಸ್ಥೆಗೆ ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ಸತ್ತಿಗೇರಿ ಭರವಸೆ ನೀಡಿದರು.

ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಟಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ ಕುಮಾರ್, ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತೋಟದ ಕಾರ್ಮಿಕರ ಮೇಲೆ ಚಿರತೆ ದಾಳಿ
ಕನ್ನಡ ಭಾಷಾ ನೀತಿಯ ಅನುಷ್ಠಾನಕ್ಕೆ ವಿಶೇಷ ಕ್ರಮ: ಡಿಸಿ ಪ್ರಭುಲಿಂಗ ಕವಳಿಕಟ್ಟಿ