ಕನ್ನಡಪ್ರಭ ವಾರ್ತೆ ಭಾರತೀನಗರ
ದೊಡ್ಡರಸಿನಕೆರೆ ಶ್ರೀಕಾಳಿಕಾಂಭ ಪ್ರೌಢಶಾಲಾ ಆವರಣದಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾಳಿಕಾಂಭ ಪ್ರೌಢಶಾಲಾ ಸಹಯೋಗದಲ್ಲಿ ಮುನ್ನೆಚ್ಚರಿಕಾ ಆರೋಗ್ಯ ತಪಾಸಣೆಗೆ ಚಾಲನೆ ನೀಡಿ ಮಾತನಾಡಿದರು.
ಹಳ್ಳಿಗಳಲ್ಲಿ ಈ ಹಿಂದೆ ಹಿರಿಯರಲ್ಲಿ ಇದ್ದಂತಹ ಆರೋಗ್ಯ ಈಗ ಇಲ್ಲ. ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಗ್ರಾಮೀಣ ಜನರ ಆರೋಗ್ಯ ಸಾಕಷ್ಟು ಕುಷಿತಗೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.ನಗರ ಪ್ರದೇಶದ ಶ್ರೀಮಂತ ಜನರು ಅತ್ಯಾಧುನಿಕ ಸೌಲಭ್ಯವುಳ್ಳ ದೊಡ್ಡದೊಡ್ಡ ಆಸ್ಪತ್ರೆಗಳಿಗೆ ತೆರಳುತ್ತಾರೆ. ಆದರೆ, ಬಡ ರೈತರು, ಕೂಲಿಕಾರ್ಮಿಕರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ ಚಿಕಿತ್ಸೆ ಪಡೆಯುವಲ್ಲಿ ಮೀನಾಮೇಷ ಎಣಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಪಯುಕ್ತವಾಗುತ್ತದೆ ಎಂದರು.
ಮುಚ್ಚಿರುವ ಸಾರ್ವಜನಿಕರ ರಸ್ತೆ ತೆರವಿಗಾಗಿ ಮನವಿ ಸಲ್ಲಿಕೆ
ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಮುಚ್ಚಿರುವ ಸಾರ್ವಜನಿಕರ ರಸ್ತೆಯನ್ನು ತೆರವುಗೊಳಿಸುವಂತೆ ತಾಲೂಕಿನ ದಲಿತ ಮುಖಂಡರು ಪಾಂಡವಪುರ ಉಪ ವಿಭಾಗಾಧಿಕಾರಿ ಡಾ. ಶ್ರೀನಿವಾಸ್ ಅವರಿಗೆ ಮನವಿ ಮಾಡಿದರು.
ಪುರಸಭಾ ಸದಸ್ಯ ಡಿ.ಪ್ರೇಂಕುಮಾರ್ ಮಾತನಾಡಿ. ಸರ್ಕಾರಿ ಪಾಲಿಟೆಕ್ನಿಕ್ ಹಿಂಭಾಗ ಪಟ್ಟಣದ ನೂರಾರು ರೈತರ ಸಾವಿರಾರು ಎಕರೆ ಕೃಷಿ ಭೂಮಿಯಿದೆ. ಪಾಲಿಟೆಕ್ನಿಕ್ ಆವರಣದಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆರಂಭವಾಗುವವರೆಗೂ ರೈತರಿಗೆ ಯಾವುದೇ ರಸ್ತೆ ಸಮಸ್ಯೆ ಇರಲಿಲ್ಲ. ಕಾಲೇಜು ಆರಂಭವಾದ ಅನಂತರ ಮೂಲ ನಕಾಶೆಯಂತೆ ರೈತರು ಸಂಚರಿಸುತ್ತಿದ್ದ ರಸ್ತೆ ಮುಚ್ಚಿ ರೈತರ ಸಂಚಾರಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮಸ್ಯೆಗಳನ್ನು ಆಲಿಸಿದ ಉಪ ವಿಭಾಗಧಿಕಾರಿ ಡಾ.ಶ್ರೀನಿವಾಸ್, ನಿಯಮಾನುಸಾರ ಕ್ರಮವಹಿಸಿ ರೈತರಿಗೆ ಅಗತ್ಯ ರಸ್ತೆ ಬಿಡಿಸಿಕೊಡುವಂತೆ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್ ಅವರಿಗೆ ಸೂಚಿಸಿದರು.