ಲಕ್ಷ್ಮೇಶ್ವರ: ನಮ್ಮ ಸುತ್ತಲಿನ ಪ್ರಕೃತಿ, ಪರಿಸರ ಸಂರಕ್ಷಣೆ ಮಾಡುವ ಜತೆಗೆ ಪರಿಸರ ಬೆಳೆಸಿ ಸಂರಕ್ಷಿಸುವ ಸ್ವಯಂ ಪ್ರೇರಿತ ಕಾರ್ಯವಾಗಬೇಕು. ಪರಿಸರ ರಕ್ಷಣೆ ಎಂಬುದು ಕೇವಲ ಒಂದು ದಿನದ ಘೋಷಣೆ-ಆಚರಣೆಯಾಗಬಾರದು ಎಂದು ಹರಿಹರದ ಮಹಾತಪಸ್ವಿ ಸೇವಾ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರವೀಣ ಅಚ್ಚಿ ಹೇಳಿದರು. ಪಟ್ಟಣದ ಭಾನುವಾರ ಜಿ.ಎಫ್. ಉಪನಾಳ ಟ್ರಸ್ಟ್ ನ ಶಾಂತಿಧಾಮ ವೃದ್ಧಾಶ್ರಮದಲ್ಲಿ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು.
ಕೇಂದ್ರ ಕಚೇರಿಯ ನಿರ್ದೇಶಕಿ ಸಂಗೀತಾ ಧರ್ಮಾಯತ ಮಾತನಾಡಿ, ಪರಿಸರದಲ್ಲಿ ಗಿಡಮರಗಳ ಅವಶ್ಯಕತೆ ಎಷ್ಟಿದೆ ಎನ್ನುವುದು ಈ ವರ್ಷದ ಬಿಸಿಲಿನ ತಾಪಮಾನ ನೋಡಿದಾಗ ಅರಿವಾಗುತ್ತದೆ. ಒಬ್ಬಬ್ಬರು ಒಂದೊಂದು ಸಸಿ ನೆಟ್ಟು ಬೆಳೆಸಿದರೆ ನಮ್ಮ ಪರಿಸರ ಪರಿಶುದ್ಧವಾಗುವದರ ಜತೆಗೆ ಎಲ್ಲೆಡೆ ಹಸಿರುಮಯ ವಾತಾವರಣ ಕಂಡು ಬರಲಿದೆ ಎಂದು ಹೇಳಿದರು.
ಈ ಸಂದರ್ಭಲ್ಲಿ ವೃದ್ದಾಶ್ರಮ ಟ್ರಸ್ಟ್ ಅಧ್ಯಕ್ಷ ಪ್ರಕಾಶ ಉಪನಾಳ, ಉಪಾಧ್ಯಕ್ಷ ಡಿ.ಎಂ. ಪೂಜಾರ, ಮಂಜುಳಾ ಮುಳಗುಂದ, ಲಾವಣ್ಯ ಬಿಂಕದಕಟ್ಟಿ, ವಿಜಯ ಹೊಳ್ಳಿಯವರಮಠ, ವೀರಭದ್ರಗೌಡ್ರ ಪಾಟೀಲ, ಚಂದ್ರು ಚಾವಡಿ, ರಮೇಶ ಉಪನಾಳ, ಚನ್ನಪ್ಪ ಧರ್ಮಾಯತ ಇದ್ದರು.