ವಿವಿಧ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಭೇಟಿ
ಸರ್ಕಾರಿ ಶಾಲೆಗಳು ಉಳಿಯದಿದ್ದರೆ, ಗ್ರಾಮೀಣ ಪ್ರದೇಶಗಳಿಗೆ ಅಭಿವೃದ್ಧಿ ತಲುಪದಿದ್ದರೆ ಸಂವಿಧಾನದ ಆಶಯಗಳಿಗೆ ವಿರುದ್ಧ ಹೋದಂತೆ. ಜೊತೆಗೆ ಮತಹಾಕಿದ ಮತದಾರರು ಹಾಗೂ ಜನರಿಗೆ ಜನಪ್ರತಿನಿಧಿಗಳು ದ್ರೋಹ ಮಾಡಿದಂತೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನದ ಆಶಯಗಳಿಗೆ ವಿರುದ್ಧ ಹೋದಂತೆ. ಜೊತೆಗೆ ಮತಹಾಕಿದ ಮತದಾರರು ಹಾಗೂ ಜನರಿಗೆ ಜನಪ್ರತಿನಿಧಿಗಳು ದ್ರೋಹ ಮಾಡಿದಂತೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಹೊನ್ನಾಳಿಯಲ್ಲಿ ಹತ್ತು ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಅದಾಲತ್ - ನಮ್ಮ ನಡೆ ಸರ್ಕಾರಿ ಶಾಲೆಗಳ ಕಡೆಗೆ ಅಭಿಯಾನದಡಿ ಭೇಟಿ ನೀಡಿ ಮಾತನಾಡಿದರು.ಹೊನ್ನಾಳಿ - ನ್ಯಾಮತಿ ತಾಲೂಕುಗಳ ಹತ್ತು ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಅದಾಲತ್ - ನಮ್ಮ ನಡೆ ಸರ್ಕಾರಿ ಶಾಲೆಗಳ ಕಡೆಗೆ ಅಭಿಯಾನದಡಿ ಸವಳಂಗ, ಸೋಗಿಲು, ಫಲವನಹಳ್ಳಿ, ಕಂಚಿಗಾರನಹಳ್ಳಿ, ಗಂಜೀನಹಳ್ಳಿ, ಚಟ್ನಹಳ್ಳಿ-2, ನ್ಯಾಮತಿ, ದೊಡ್ಡೆತ್ತಿನಹಳ್ಳಿ, ಕಂಕನಹಳ್ಳಿ ಹಾಗೂ ಕೊಡಚಗೊಂಡನಹಳ್ಳಿ ಗ್ರಾಮಗಳಲ್ಲಿನ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿದರು. ಇಲ್ಲಿನ ಶಾಲೆಗಳಲ್ಲಿರುವಷ್ಟು ತೊಂದರೆ, ಸಮಸ್ಯೆಗಳು ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿವೆ. ಜನಪ್ರತಿನಿಧಿಗಳು ಆದಷ್ಟು ಬೇಗ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಸ್ವಾಭಿಮಾನಿ ಬಳಗದ ಪ್ರಧಾನ ಕಾರ್ಯದರ್ಶಿ ರಾಜು ಮೌರ್ಯ, ಸಂಘಟನಾ ಕಾರ್ಯದರ್ಶಿ ವಿರೂಪಾಕ್ಷಪ್ಪ ಪಂಡಿತ್, ಉಪಾಧ್ಯಕ್ಷ ಶಿವಕುಮಾರ್ ಶೆಟ್ಟಿ, ರಾಜ್ಯ ಸಂಚಾಲಕ ಅಯ್ಯಣ್ಣ ಮುಲ್ಕಲ್, ಶಿವಕುಮಾರ್ ಸಂಬಳಿ, ಹೊನ್ನಾಳಿ ಯುವ ಮುಖಂಡ ಸುದೀಪ್, ರಾಜು ಕಣಗಣ್ಣನವರ್ ಹಾಜರಿದ್ದರು. ಜಿ.ಬಿ.ವಿನಯ್ ಕುಮಾರ್ ಮಕ್ಕಳ ಜೊತೆ ಸಾಲಿನಲ್ಲಿ ಕುಳಿತು ಬಿಸಿಯೂಟ ಸವಿದರು.