ಕನ್ನಡಪ್ರಭ ವಾರ್ತೆ ಬಳ್ಳಾರಿ
ನಗರದ ಜಿಪಂ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ಪಂಚಾಯತ್ ರಾಜ್ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಯಾವುದೇ ಯೋಜನೆಯ ಪ್ರಕ್ರಿಯೆಯು ತಳಹಂತದಿಂದಲೇ ಶುರುಗೊಳ್ಳಬೇಕು. ಹೀಗಾಗಿ ಗ್ರಾಮಸಭೆ ಸದೃಢಗೊಳಿಸಬೇಕು. ಯೋಜನೆ ರೂಪಿಸುವ ಮೊದಲು ಹಣಕಾಸಿನ ಲಭ್ಯತೆ ತಿಳಿದಿರಬೇಕು. ರಾಜ್ಯದ ಆಯವ್ಯಯದಂತೆಯೇ ಗ್ರಾಪಂವಾರು ಹಣಕಾಸಿನ ಲಭ್ಯತೆಯ ಮಾಹಿತಿಯನ್ನು ಸಂಬಂಧಿಸಿದ ಇಲಾಖೆಗಳು ಪ್ರಕಟಿಸಬೇಕು ಎಂದರು. ಇದೇ ವೇಳೆ ರಾಜ್ಯದ ಪ್ರಗತಿ ನೆಲೆಯಲ್ಲಿ ಗ್ರಾಪಂಗಳ ಪಾತ್ರ ಕುರಿತು ಘೋರ್ಪಡೆ ಅವರು ಪಂಚಾಯತಿ ಸದಸ್ಯರು ಗ್ರಾಮೀಣ ಅಭಿವೃದ್ಧಿ ನೆಲೆಯಲ್ಲಿ ಮುತುವರ್ಜಿ ಕಾರ್ಯನಿರ್ವಹಿಸಿ, ಪ್ರಗತಿಯತ್ತ ಮುನ್ನಡೆ ಸಾಧಿಸಬೇಕು ಎಂದು ಕರೆ ನೀಡಿದರು.ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ಮತ್ತು ಎಂ.ವೈ. ಘೋರ್ಪಡೆ ವಿಷಯ ಕುರಿತು ಉಪನ್ಯಾಸ ನೀಡಿದ ಮಾಜಿ ಶಾಸಕ ಹಾಗೂ ಕರ್ನಾಟಕ ಪಂಚಾಯತ್ ರಾಜ್ ಪರಿಷತ್ನ ಉಪಾಧ್ಯಕ್ಷ ಡಿ.ಆರ್. ಪಾಟೀಲ್, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸಿದ ಕೀರ್ತಿ ಎಂ.ವೈ. ಘೋರ್ಪಡೆ ಅವರಿಗೆ ಸಲ್ಲುತ್ತದೆ. ರಾಜವಂಶಸ್ಥರಾಗಿ ಅಧಿಕಾರ ವಿಕೇಂದ್ರೀಕರಣದ ಪರವಾಗಿ ನಿಂತ ಅಪರೂಪದ ವ್ಯಕ್ತಿತ್ವ ಘೋರ್ಪಡೆಯವರದಾಗಿತ್ತು ಎಂದು ತಿಳಿಸಿದರು. ಗ್ರಾಮಸಭೆಗಳ ಸಬಲೀಕರಣಕ್ಕಾಗಿ ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಡೆಸುತ್ತಿರುವ ಅಭಿಯಾನದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಜನಾಧಿಕಾರ ಕನಸನ್ನು ನನಸಾಗಿಸಬೇಕು ಎಂದರು ತಿಳಿಸಿದರು.
ಜಿಪಂ ಮಾಜಿ ಅಧ್ಯಕ್ಷ ಬಾವಿ ಬೆಟ್ಟಪ್ಪ, ಮಾಜಿ ಶಾಸಕ ಶಿವಾರೆಡ್ಡಿ, ಬಳ್ಳಾರಿ ಜಿಲ್ಲಾ ಗ್ರಾಪಂ ಸದಸ್ಯರ ಒಕ್ಕೂಟದ ಅಧ್ಯಕ್ಷ ಬಾಣಾಪುರ ನಾಗರಾಜ್, ಪ್ರಧಾನ ಕಾರ್ಯದರ್ಶಿ ಶ್ರೀಧರ್, ಬಳ್ಳಾರಿ ತಾಲೂಕು ಅಧ್ಯಕ್ಷ ಅರಕೇರಿ ಸದಾಶಿವಪ್ಪ, ರಾಜ್ಯ ಮಹಾ ಒಕ್ಕೂಟದ ಖಜಾಂಚಿ ಹೇಮಾ ಮಂಜುನಾಥ್, ಪರಿಷತ್ನ ಜಂಟಿ ಕಾರ್ಯದರ್ಶಿ ಮಮತಾ ತಳವಾರ, ಜಿಲ್ಲಾ ಕಾನೂನು ಸಲಹೆಗಾರ ಸಿ.ಎಚ್. ಸುಬ್ರಮಣ್ಯೇಶ್ವರ ರಾವ್, ಸಾಹಿತಿ ಜಮಾದಾರ್ ಹಾಗೂ ಗ್ರಾಪಂ ಪ್ರತಿನಿಧಿಗಳು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವೃಂದ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ತಿಮ್ಮಪ್ಪ ಕಾರ್ಯಕ್ರಮ ನಿರ್ವಹಿಸಿದರು.