- ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಕೆರೆ ಹೂಳೆತ್ತುವ ಕಾಮಗಾರಿಗೆ ಭೂಮಿಪೂಜೆ
ಕೆರೆ ಹೂಳೆತ್ತಿಸಿದಲ್ಲಿ ನೀರಿನ ಸಂಗ್ರಹಣ ಸಾಮರ್ಥ್ಯ ಹೆಚ್ಚಾಗಲಿದೆ ಎಂದು ಹಾದಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ರವೀಶಯ್ಯ ಹೇಳಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ತರೀಕೆರೆ ತಾಲೂಕು ಇದರ ಆರ್ಥಿಕ ಸಹಕಾರದೊಂದಿಗೆ ಹಾದಿಕೆರೆ ಗ್ರಾಪಂ ಮತ್ತು ಅರಸೀ ಕೆರೆ ಕೆರೆ ಅಭಿವೃದ್ಧಿ ಸಮಿತಿ ಯರೇಹಳ್ಳಿ ತಾಂಡ್ಯ ಹಾಗೂ ಗ್ರಾಮಸ್ಥರ ಸಹಭಾಗಿತ್ವ ದಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಯರೇಹಳ್ಳಿ ತಾಂಡ್ಯದಲ್ಲಿ ಪುನಶ್ಚೇತನಗೊಳ್ಳುತ್ತಿರುವ ಅರಸೀ ಕೆರೆ ಕೆರೆ ಹೂಳೆತ್ತುವ ಕಾಮಗಾರಿಗೆ ನಡೆದ ಭೂಮಿ ಪೂಜೆಯಲ್ಲಿ ಮಾತನಾಡುತ್ತಿದ್ದರು.ಜಾನುವಾರುಗಳಿಗೆ ಕುಡಿಯುವ ನೀರು ದೊರಕಲಿದೆ ಮತ್ತು ಸುತ್ತ ಮುತ್ತಲಿನ ಬೋರ್ವೆಲ್ ಗಳ ಅಂತರ್ಜಲ ಮಟ್ಟದ ಪ್ರಮಾಣ ಹೆಚ್ಚುವ ಜೊತೆಗೆ ಕೃಷಿಗೆ ಯೋಗ್ಯ ಮಣ್ಣು ದೊರೆಯಲಿದೆ ಎಂದು ತಿಳಿಸಿದರು. ಗ್ರಾಮಾಭಿವೃದ್ಧಿ ಯೋಜನೆ ಇಂತಹ ಹಲವಾರು ಕಾರ್ಯಕ್ರಮಗಳು ಸರಕಾರಕ್ಕೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಅಸ್ಲಾಂ ಖಾನ್ ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆ ಅನೇಕ ಸಮಾಜ ಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಕೃಷಿ ಕಾರ್ಯಕ್ರಮಗಳು, ಸ್ವ ಸಹಾಯ ಸಂಘಗಳ ಮೂಲಕ ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಬಲವರ್ಧನೆ, ಪ್ರಗತಿ ನಿಧಿ, ಆರೋಗ್ಯ ಕಾರ್ಯಕ್ರಮಗಳು ಹೀಗೆ ಹತ್ತು ಹಲವು ಕಾರ್ಯಕ್ರಮ ಸಮಾಜಕ್ಕೆ ಮಾದರಿ ಎಂದು ತಿಳಿಸಿದರು.
ತರೀಕೆರೆಯ ಹಾದಿಕೆರೆ ಗ್ರಾಪಂ ಯರೇಹಳ್ಳಿ ತಾಂಡ್ಯದಲ್ಲಿ ಅರಸೀಕೆರೆ ಕೆರೆ ಪುನಶ್ಚೇತನಗೊಳಿಸುವ ಕಾರ್ಯಕ್ರಮದಲ್ಲಿ ಹಾದಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ರವೀಶಯ್ಯ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ಯೋಜನಾಧಿಕಾರಿ ಪ್ರಕಾಶ್ ರಾವ್, ಯೋಜನಾಧಿಕಾರಿ ಕುಸುಮಾಧರ್ ಕೆ. ಮತ್ತಿತರರು ಭಾಗವಹಿಸಿದ್ದರು.
-----------------