ಪಿಂಕ್ ಟಿಕೆಟ್‌ ಕಳೆದುಕೊಂಡರೆ ನಿರ್ವಾಹಕರಿಗೆ ದಂಡ

KannadaprabhaNewsNetwork |  
Published : May 09, 2024, 01:16 AM ISTUpdated : May 09, 2024, 07:36 AM IST
ಕೆಎಸ್ಸಾರ್ಟಿಸಿ ಬಸ್‌ | Kannada Prabha

ಸಾರಾಂಶ

ಇಟಿಎಂ ಮಷಿನ್‌ ಕೆಟ್ಟರೆ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ವಿತರಿಸಲು ನೀಡಿರುವ ಪಿಂಕ್‌ ಟಿಕೆಟ್‌ ಕಳೆದುಕೊಂಡ ಕಂಡಕ್ಟರ್‌ಗಳಿಗೆ ಪ್ರತಿ ಟಿಕಟ್‌ಗೆ ₹10 ದಂಡ ವಿಧಿಸಲು ಕೆಎಸ್ಸಾರ್ಟಿಸಿ ನಿರ್ಧರಿಸಿದೆ.

 ಬೆಂಗಳೂರು :  ಶಕ್ತಿ ಯೋಜನೆ ಜಾರಿ ನಂತರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನಿರ್ವಾಹಕರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಈಗಾಗಲೆ ಹೈರಾಣಾಗಿರುವ ನಿರ್ವಾಹಕರಿಗೆ ಇದೀಗ ಮತ್ತೊಂದು ತಲೆನೋವು ಶುರುವಾಗಿದ್ದು, ಮಹಿಳಾ ಪ್ರಯಾಣಿಕರಿಗೆ ವಿತರಿಸಲು ನೀಡಿರುವ ಪಿಂಕ್‌ ಟಿಕೆಟ್‌ ಕಳೆದುಕೊಂಡರೆ ನಿರ್ವಾಹಕರೆ ದಂಡ ಪಾವತಿಸಬೇಕು ಎಂದು ಕೆಎಸ್ಸಾರ್ಟಿಸಿ ಆದೇಶಿಸಿದೆ.

ಶಕ್ತಿ ಯೋಜನೆ ಜಾರಿ ನಂತರದಿಂದ ಮಹಿಳಾ ಪ್ರಯಾಣಿಕರಿಗೆ ಅವರ ದಾಖಲೆಗಳನ್ನು ಪರಿಶೀಲಿಸಿ ನಂತರ ಉಚಿತ ಟಿಕೆಟ್‌ ನೀಡಬೇಕಿದೆ. ಅದರ ನಡುವೆ ಟಿಕೆಟ್‌ ವಿತರಿಸಲು ನೀಡಲಾಗಿರುವ ಇಟಿಎಂ ಕಾರ್ಯನಿರ್ವಹಿಸದ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕರಿಗೆ ನೀಡಲು ಶೂನ್ಯ ಮೌಲ್ಯದ ಪಿಂಕ್‌ ಟಿಕೆಟ್‌ಗಳನ್ನು ನಿರ್ವಾಹಕರಿಗೆ ನೀಡಿದೆ. ಆದರೆ, ಈ ಪಿಂಕ್‌ ಟಿಕೆಟ್‌ಗಳನ್ನು ನಿರ್ವಾಹಕರು ಜಾಗರೂಕತೆಯಿಂದ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಒಂದು ವೇಳೆ ವಿತರಿಸಲಾಗದೆ ಉಳಿದಿರುವ ಟಿಕೆಟ್‌ಗಳನ್ನು ನಿರ್ವಾಹಕರು ಕಳೆದುಕೊಂಡರೆ ಪ್ರತಿ ಟಿಕೆಟ್‌ಗೆ 10 ರು.ನಂತೆ ದಂಡದ ರೂಪದಲ್ಲಿ ವಸೂಲಿ ಮಾಡಲು ಕೆಎಸ್ಸಾರ್ಟಿಸಿ ನಿರ್ಧರಿಸಿದೆ.

ವಿರೋಧ:  ಕೆಎಸ್ಸಾರ್ಟಿಸಿಯ ಈ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಕೆಎಸ್ಸಾರ್ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಯೂನಿಯನ್‌, ಶಕ್ತಿ ಯೋಜನೆ ಜಾರಿ ನಂತರ ನಿರ್ವಾಹಕರು ಹಲವು ರೀತಿಯ ಮಾನಸಿಕ ಮತ್ತು ಕಾರ್ಯದೊತ್ತಡ ಎದುರಿಸುತ್ತಿದ್ದಾರೆ. ಅವರ ಶ್ರಮಕ್ಕೆ ತಕ್ಕಂತೆ ನಿಗಮಕ್ಕೆ ಬೆಲೆ ಸಿಗುತ್ತಿಲ್ಲ. ಅದರ ನಡುವೆ ಇದೀಗ ಪಿಂಕ್‌ ಟಿಕೆಟ್‌ಗಳನ್ನು ಕಾಯಬೇಕಾದ ಕೆಲಸವೂ ನಿರ್ವಾಹಕರ ಮೇಲೆ ಬಂದಿದೆ. ಇದು ನಿರ್ವಾಹಕರ ಮನೋಬಲ ಕಸಿಯಲಿದೆ. ಹೀಗಾಗಿ ಪಿಂಕ್‌ ಟಿಕೆಟ್‌ ಕಳೆದು ಹೋದರೆ ದಂಡ ವಿಧಿಸುವ ಆದೇಶವನ್ನು ನಿಗಮ ಕೂಡಲೆ ಹಿಂಪಡೆಯಬೇಕು ಎಂದು ಆಗ್ರಹಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ
ಪುಸ್ತಕ ಸಂಸ್ಕೃತಿ ಸಂವೇದನೆಗೆ ಸಂಬಂಧಿಸಿದ್ದು: ಬರಗೂರು