ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಭಾನುವಾರ ನಡೆದ ಪರಿಶಿಷ್ಟ ಜಾತಿ, ಪಂಗಡದವರ ಕುಂದುಕೊರತೆ ಸಭೆಯಲ್ಲಿ ಅವರು ಈ ಮಾತು ಹೇಳಿದರು.
ಕೆಲವು ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗುತ್ತಿಲ್ಲ ಎಂದು ದಲಿತ ಮುಖಂಡರ ದೂರಿನ ಹಿನ್ನೆಲೆಯಲ್ಲಿ ಡಿಸಿಪಿಯವರು ಎಲ್ಲ ಠಾಣೆಗಳ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಒಂದು ವೇಳೆ ಸಿವಿಲ್ ಪ್ರಕರಣದಲ್ಲಿ ಕ್ರಿಮಿನಲ್ಗೆ ಸಂಬಂಧಿಸಿದ ಅಂಶಗಳಿದ್ದರೂ ಅದರ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಬೇಕು. ಪೊಲೀಸರಿಂದ ತಪ್ಪಾದರೆ ಅವರ ಮೇಲೆಯೇ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಎಫ್ಐಆರ್ ದಾಖಲಿಸುವ ಬದಲು ಅವರಾಗಿಯೇ ರಾಜಿ ಸಂಧಾನ ನಡೆಸುವುದು ಸರಿಯಲ್ಲ ಎಂದರು.ಆಟಿ ಕಳಂಜಕ್ಕೆ ಆಕ್ಷೇಪ:
ಕಾರ್ನಾಡು ಅಮೃತನಗರದಲ್ಲಿರುವ ಮನೆಗೆ ನುಗ್ಗಿ ಸಹೋದರನ ಕೊಲೆಗೆ ಯತ್ನಿಸಿರುವ ಬಗ್ಗೆ ಎಫ್ಐಆರ್ ದಾಖಲಾಗಿ 3 ತಿಂಗಳಾದರೂ ಆರೋಪಿಗಳನ್ನು ಬಂಧಿಸಿಲ್ಲ. ಹಲ್ಲೆಯ ಬಗ್ಗೆ ದೂರು ನೀಡಲು ಠಾಣೆಗೆ ತೆರಳಿದ್ದ ನನ್ನನ್ನು ತುಂಬ ಹೊತ್ತು ಠಾಣೆಯಲ್ಲಿ ಕುಳ್ಳಿರಿಸಿದ್ದರು ಎಂದು ತುಳಸಿ ಎಂಬವರು ದೂರಿದರು. ಈ ಸಂದರ್ಭದಲ್ಲಿ ಹಲವು ಮಂದಿ ದಲಿತ ಮುಂದಾಳುಗಳು ಮೂಲ್ಕಿ ಠಾಣಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರಕರಣವೂ ಸೇರಿದಂತೆ ಮೂಲ್ಕಿ ಠಾಣಾಧಿಕಾರಿಯ ನಿರ್ಲಕ್ಷ್ಯ, ದುರ್ವರ್ತನೆ ಬಗ್ಗೆ ತನಿಖೆ ನಡೆಸುವಂತೆ ದಲಿತ ಮುಖಂಡರು ಒತ್ತಾಯಿಸಿದರು. ಈ ಬಗ್ಗೆ ವಿಚಾರಣೆ ನಡೆಸುವುದಾಗಿ ಉತ್ತರ ವಲಯ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಭರವಸೆ ನೀಡಿದರು.
ಮೂಡುಬಿದಿರೆ ಠಾಣಾ ವ್ಯಾಪ್ತಿಯ ಧರೆಗುಡ್ಡೆಯಲ್ಲಿ ತಲವಾರು ಹಿಡಿದು ಬಂದು ವಿಕಲಚೇತನರ ಮೇಲೆ ದೌರ್ಜನ್ಯ ಎಸಗಿದ ಘಟನೆ ಕಳೆದ ಎಪ್ರಿಲ್ನಲ್ಲಿ ಸಂಭವಿಸಿತ್ತು. ಆದರೆ ಇದುವರೆಗೂ ಎಫ್ಐಆರ್ ಮಾಡಿ ಆರೋಪಿಗಳನ್ನು ಬಂಧಿಸಿಲ್ಲ ಎಂದು ದಲಿತ ಮುಖಂಡ ಎಸ್.ಪಿ ಆನಂದ ದೂರಿದರು. ಈ ಬಗ್ಗೆ ಕೂಡಲೇ ಎಫ್ಐಆರ್ ದಾಖಲಿಸುವಂತೆ ಡಿಸಿಪಿ ಸೂಚನೆ ನೀಡಿದರು.