ರಾಮನಗರ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಅಸ್ಥಿಪಂಜರ ದೊರೆಯದಿದ್ದರೆ ಅನಾಮಿಕ ವ್ಯಕ್ತಿ ವಿರುದ್ಧವೇ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಧರ್ಮಸ್ಥಳ ಪ್ರಕರಣವನ್ನು ರಾಜಕೀಯಗೊಳಿಸಬಾರದು. ಬಿಜೆಪಿ ಪಕ್ಷದವರಿಗಿಂತಲೂ ಹೆಚ್ಚಾಗಿ ಕಾಂಗ್ರೆಸ್ ಪಕ್ಷದವರು ಧರ್ಮಸ್ಥಳಕ್ಕೆ ಹೋಗುತ್ತಾರೆ. 2012ರಲ್ಲಿ ಸೌಜನ್ಯ ಅತ್ಯಾಚಾರ, ಕೊಲೆ ನಡೆದ ನಂತರ ಕೆಲ ಯೂಟ್ಯೂಬ್ ವಾಹಿನಿಗಳಲ್ಲಿ ಹಾಗೂ ಸಾರ್ವಜನಿಕವಾಗಿ ಕೆಲ ಆರೋಪಗಳು ಕೇಳಿಬಂದವು. ಇತ್ತೀಚೆಗೆ ಮುಸುಕುಧಾರಿ ವ್ಯಕ್ತಿ ನೂರಾರು ಮೃತದೇಹಗಳನ್ನು ಹೂತಿರುವುದಾಗಿ ಕೋರ್ಟ್ಗೆ ಹೇಳಿಕೆ ನೀಡಿದ್ದನು. ಈ ಹಿನ್ನೆಲೆಯಲ್ಲಿ ಸತ್ಯ ತಿಳಿಯುವುದಕ್ಕೆ ಎಸ್ಐಟಿ ರಚಿಸಲಾಗಿದೆ. ಇದೀಗ ತನಿಖೆ ನಡೆಯುತ್ತಿದ್ದು ಪೂರ್ಣಗೊಂಡ ನಂತರ ಸತ್ಯ ಹೊರಬರಲಿದೆ ಎಂದು ಹೇಳಿದರು.
ಧರ್ಮಸ್ಥಳದಲ್ಲಿ ಒಟ್ಟು 17 ಕಡೆ ಗುಂಡಿ ತೆಗೆಯಲಾಗಿದೆ. ಯಾವುದೇ ಅಸ್ತಿಪಂಜರ ಇದುವರೆಗೂ ಕಂಡುಬಂದಿಲ್ಲ. ಆದಾಗ್ಯೂ ಆತ ತೋರಿಸಿದ ಕಡೆಯಲ್ಲಾ ಅಗೆಯಲಾಗುತ್ತಿದೆ. ಒಂದು ವೇಳೆ ಅಸ್ಥಿಪಂಜರ ದೊರೆಯದಿದ್ದರೆ ಅನಾಮಿಕ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸದನದಲ್ಲೂ ಈ ವಿಚಾರ ಪ್ರಸ್ತಾಪವಾಗಿದ್ದು, ಸೋಮವಾರ ಗೃಹಸಚಿವರು ಈ ವಿಚಾರವಾಗಿ ಸದನಕ್ಕೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.ದೇವಾಲಯ ಆವರಣದಲ್ಲಿ ಪ್ಲಾಸ್ಟಿಕ್ ನಿಷೇಧ:
ದೇವಾಲಯದ ಆವರಣದಲ್ಲಿ ಮಾತ್ರ ಇಲಾಖೆ ಪ್ಲಾಸ್ಟಿಕ್ ನಿಷೇಧಿಸಿದೆ. ಆದರೆ, ದೇವಾಲಯದ ಹೊರಗೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅಲ್ಲಿ ಸರ್ಕಾರ ಇಲ್ಲವೇ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಕೊಡಗು ಜಿಲ್ಲೆಯಲ್ಲಿ ಜಿಲ್ಲಾಡಳಿತ ಪ್ಲಾಸ್ಟಿಕ್ ನಿಷೇಧಿಸಿದೆ. ಅಂತೆಯೇ ಮಲೆ ಮಹದೇಶ್ವರ ಬೆಟ್ಟದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪ್ಲಾಸ್ಟಿಕ್ ನಿಷೇಧಿಸಿದೆ ಎಂದರು.
ಕ್ರಾಂತಿ ಎಂಬುದು ಭ್ರಾಂತಿ:
ಶಾಸಕ ಇಕ್ಬಾಲ್ ಹುಸೇನ್ ,ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚೇತನ್ ಕುಮಾರ್ ಇತರರಿದ್ದರು.
ಸಚಿವ ರಾಮಲಿಂಗಾರೆಡ್ಡಿ