ದೃಷ್ಟಿ ಪರಿಶುದ್ಧವಾಗಿದ್ದರೆ ಕಲ್ಲಲ್ಲೂ ದೇವರ ಕಾಣಲು ಸಾಧ್ಯ: ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯರು

KannadaprabhaNewsNetwork |  
Published : Feb 12, 2025, 12:31 AM IST
ಕೂಡ್ಲಿಗಿ ತಾಲೂಕಿನ ಎಂ.ಬಿ.ಅಯ್ಯನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಧರ್ಮಸಭೆಯಲ್ಲಿ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿದರು. | Kannada Prabha

ಸಾರಾಂಶ

ಕೂಡ್ಲಿಗಿ ತಾಲೂಕಿನ ಎಂ.ಬಿ. ಅಯ್ಯನಹಳ್ಳಿಯಲ್ಲಿ ಗುರು ಕರಿಬಸವೇಶ್ವರ ಶಿಲಾಮೂರ್ತಿ ಪ್ರತಿಷ್ಠಾಪನೆ, ದೇವಸ್ಥಾನ ಗೋಪುರ ಕಳಸಾರೋಹಣ ಮತ್ತು ಆಂಜನೇಯ ಸ್ವಾಮಿ ದೇವಾಲಯದ ಗೋಪುರ ಕಳಸಾರೋಹಣ ಕಾರ್ಯಕ್ರಮ ನಡೆಯಿತು.

ಕೂಡ್ಲಿಗಿ: ಜಗತ್ತಿಗೆ ಆಧ್ಯಾತ್ಮಿಕ ಸಿಂಚನ, ಜ್ಞಾನ ನೀಡಿದ ನಮ್ಮ ದೇಶದಲ್ಲಿ ದೇವರೆಂಬ ಕಲ್ಪನೆ ಇದ್ದು, ನೋಡುವ ದೃಷ್ಟಿ ಪರಿಶುದ್ಧವಾಗಿದ್ದರೆ ದೇವರ ಮೂರ್ತಿ ಕಲ್ಲಾಗಿ ಕಾಣದೇ ದೇವರಾಗಿ ಕಾಣಬಹುದಾಗಿದೆ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯರು ತಿಳಿಸಿದರು.

ಅವರು ತಾಲೂಕಿನ ಎಂ.ಬಿ. ಅಯ್ಯನಹಳ್ಳಿಯಲ್ಲಿ ಗುರು ಕರಿಬಸವೇಶ್ವರ ಶಿಲಾಮೂರ್ತಿ ಪ್ರತಿಷ್ಠಾಪನೆ, ದೇವಸ್ಥಾನ ಗೋಪುರ ಕಳಸಾರೋಹಣ ಮತ್ತು ಆಂಜನೇಯ ಸ್ವಾಮಿ ದೇವಾಲಯದ ಗೋಪುರ ಕಳಸಾರೋಹಣ ಕಾರ್ಯಕ್ರಮದ ನಿಮಿತ್ತ ಮಂಗಳವಾರ ಆಯೋಜಿಸಿದ್ದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದರು. ಭಗವಂತನ ದರ್ಶನಕ್ಕೆ ದೇವಸ್ಥಾನಗಳನ್ನು ಸ್ಥಾಪಿಸಿದ್ದು, ಅದರಲ್ಲಿರುವ ದೇವರ ಮೂರ್ತಿಯ ಪ್ರಾರ್ಥನೆಯಿಂದ ಒಳ್ಳೆಯದೇ ಪ್ರಾಪ್ತಿಯಾಗಲಿದೆ ಎಂಬುದನ್ನು ಪುರಾತನದಿಂದಲೂ ನಂಬಿಕೆಯಾಗಿದೆ. ಮೊಬೈಲ್ ಸಿಗ್ನಲ್‌ಗೆ ಟವರ್ ಇರುವಂತೆ ಪರಮಾತ್ಮನ ಸಂಪರ್ಕಕ್ಕೆ ದೇವಸ್ಥಾನಗಳ ಗೋಪುರದ ಕಳಸವೇ ಟವರ್‌ನಂತೆ ಹಿರಿಯರು ಮಾಡಿರುವುದು ಮೂಢನಂಬಿಕೆಯಲ್ಲ ಎಂದು ತಿಳಿಸಿದರು.

ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮಾತನಾಡಿ, ಜನರು ಧಾರ್ಮಿಕ ನಂಬಿಕೆಯಿಂದ ಇರುವುದರಿಂದ ಸಮಾಜದಲ್ಲಿ ಶಾಂತಿ, ಸಹನೆ, ಸಹಬಾಳ್ವೆ ನೆಲೆಸಿದೆ. ಎಲ್ಲ ಸಮುದಾಯದವರು ಸಹೋದರಂತೆ ಜೀವನ ಮಾಡುವಂತಾಗಬೇಕು ಎಂದರಲ್ಲದೆ, ಉಜ್ಜಯಿನಿ ಸದ್ಧರ್ಮ ಪೀಠಕ್ಕೆ ಸಂಪರ್ಕಕ್ಕೆ ನಿಂಬಳಗೆರೆ ಮತ್ತು ಮಂಗಾಪುರದಿಂದ ಉಜ್ಜಯಿನಿ ವರೆಗೆ ₹15 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಧ್ಯೇಯವಾಗಿದೆ ಎಂದರು.

ಕೂಡ್ಲಿಗಿ ಹಿರೇಮಠ ಸಂಸ್ಥಾನದ ಪೀಠಾಧ್ಯಕ್ಷ ಪ್ರಶಾಂತಸಾಗರ ಶಿವಾಚಾರ್ಯ, ಮಾಜಿ ಸಚಿವ ಬಿ. ಶ್ರೀರಾಮುಲು, ಸಂಡೂರು ಶಾಸಕಿ ಅನ್ನಪೂರ್ಣಾ ಇ. ತುಕಾರಾಮ್ ಮಾತನಾಡಿದರು. ಕೊಟ್ಟೂರಿನ ಡೋಣೂರು ಚಾನುಕೋಟಿ ಮಠದ ಪೀಠಾಧ್ಯಕ್ಷ ಡಾ. ಸಿದ್ಧಲಿಂಗ ಶಿವಾಚಾರ್ಯ, ಕಾನಾಮಡುಗು ದಾಸೋಹ ಮಠದ ಧರ್ಮಾಧಿಕಾರಿ ಶ್ರೀ ಐಮಡಿ ಶರಣಾರ್ಯರು, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಗುಂಡುಮುಣುಗು ಕೆ. ತಿಪ್ಪೇಸ್ವಾಮಿ, ಮಂಡಲ ಪಂಚಾಯಿತಿ ಮಾಜಿ ಅಧ್ಯಕ್ಷ ಹೊಸಮನೆ ಚಿದಾನಂದಪ್ಪ, ಮುಖಂಡರಾದ ಎಂ. ಗುರುಸಿದ್ಧನಗೌಡ, ಜಿಂಕಲ್ ನಾಗಮಣಿ, ಮಾಲತಿ ನಾಯಕ್, ಎಂ.ಬಿ. ಅಯ್ಯನಹಳ್ಳಿ ನಾಗಭೂಷಣ, ಅಜ್ಜನಗೌಡ, ಎನ್.ಎಂ. ರವಿಕುಮಾರ್, ಕರೇಗೌಡ ಸೇರಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ದೈವಸ್ಥರು ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಕೂಡ್ಲಿಗಿ ಹಿರೇಮಠ ಸಂಸ್ಥಾನದ ಪೀಠಾಧ್ಯಕ್ಷ ಪ್ರಶಾಂತಸಾಗರ ಶಿವಾಚಾರ್ಯರಿಂದ ಗೋಪುರ ಕಳಸಾರೋಹಣ ನೆರವೇರಿದ್ದಲ್ಲದೆ, ಪುರೋಹಿತರ ನೇತೃತ್ವದಲ್ಲಿ ಹೋಮ, ಹವನ, ಪೂಜಾ ವಿಧಿ ವಿಧಾನಗಳು ಜರುಗಿದವು.

ಅಡ್ಡಪಲ್ಲಕ್ಕಿ ಉತ್ಸವ: ಎಂ.ಬಿ. ಅಯ್ಯನಹಳ್ಳಿಯಲ್ಲಿ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!