ಕನ್ನಡಪ್ರಭ ವಾರ್ತೆ ಹಲಗೂರು
ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಮುಖಂಡರ ಕುಂದು-ಕೊರತೆ ಸಭೆಯಲ್ಲಿ ಮಾತನಾಡಿ, ಕಳೆದ ಸಭೆಯಲ್ಲಿ ಸೂಚಿಸಿದ ಯಾವುದೇ ಸಮಸ್ಯೆಗಳನ್ನು ಇಲಾಖೆ ಸಿಬ್ಬಂದಿ ಬಗೆಹರಿಸುವ ಕೆಲಸ ಮಾಡಿಲ್ಲ. ಇಲಾಖೆ ನಿರಂತರವಾಗಿ ಕುಂದು ಕೊರತೆ ಸಭೆ ಕರೆಯುತ್ತಿಲ್ಲ. ಎಲ್ಲಾ ಗ್ರಾಮಗಳ ಮುಖಂಡರಿಗೂ ತಿಳಿಸದೇ ಕಾಟಚಾರಕ್ಕೆ ಸಭೆ ನಡೆಸಿದರೇ ಯಾವುದೇ ಪ್ರಯೋಜನ ಆಗಿಲ್ಲ ಎಂದು ಮುಖಂಡರು ಬೇಸರ ವ್ಯಕ್ತಪಡಿಸಿದರು.
ಹಲಗೂರಿನ ಹೃದಯ ಭಾಗದಲ್ಲಿ ನಿರ್ಮಿಸಲಾಗುತ್ತಿರುವ ಡಾ.ಅಂಬೇಡ್ಕರ್ ಭವನ ಕಾಮಗಾರಿ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದೆ. ಇದರಿಂದ ಭವನದ ಮುಂಭಾಗದಲ್ಲಿ ಹಲವು ಬೀದಿ ಬದಿ ವ್ಯಾಪಾರಿಗಳು ಟೆಂಟ್ ಹಾಕಿಕೊಂಡು ಅಂಗಡಿ ಮಾಡಿಕೊಂಡಿದ್ದು, ತೆರವುಗೊಳಿಸಬೇಕೆಂದು ಒತ್ತಾಯಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ ಇಲಾಖೆ, ಮುಜರಾಯಿ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸ್ಥಳೀಯ ಮಟ್ಟದ ಅಧಿಕಾರಿಗಳನ್ನು ಕುಂದುಕೊರತೆ ಸಭೆಗೆ ಆಹ್ವಾನಿಸಿ ಸಭೆಯಲ್ಲಿನ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಇಂದಿನಿಂದ ಶ್ರೀಉರಿಗಣ್ಣೇಶ್ವರಿ ದೇವಾಲಯ ಜೀರ್ಣೋದ್ಧಾರ
ಸಮೀಪದ ಅಂತರವಳ್ಳಿಯ ಶ್ರೀಉರಿಗಣ್ಣಮ್ಮ ದೇವಿಯ ದೇವಾಲಯಗಳ ಪುನರ್ ಜೀರ್ಣೋದ್ಧಾರ ಕಾರ್ಯಕ್ರಮ ಫೆ.24 ಮತ್ತು ಫೆ.25 ರಂದು ಎರಡು ದಿನಗಳ ಕಾಲ ನಡೆಯಲಿದೆ.
ಫೆ.25ರ 8 ಗಂಟೆಗೆ ಗಂಗೆ ತಡಿಯಿಂದ ದೇವರುಗಳನ್ನು ತರಲಾಗುವುದು. ದೇವಾಲಯ ಪ್ರವೇಶ, ಮಹಾ ಮಂಗಳಾರತಿ ನಡೆಯಲಿದೆ. ಪೂಜಾ ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೂ ಅನ್ನ ಸಂತರ್ಪಣೆ ನಡೆಯಲಿದೆ. ಎಲ್ಲಾ ವರ್ಗದ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಮಾಡಬೇಕೆಂದು ಮನವಿ ಮಾಡಿದರು.