ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಶ್ರೀಆದಿಚುಂಚನಗಿರಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಬಿಜಿಎಸ್ ಸಭಾಂಗಣದಲ್ಲಿ ಪ್ರಥಮ ವರ್ಷದ ಬಿ.ಎ.ವಿದ್ಯಾರ್ಥಿಗಳಿಗೆ ದ್ವಿತೀಯ ಮತ್ತು ಅಂತಿಮ ಬಿಎ ಪದವಿ ವಿದ್ಯಾರ್ಥಿಗಳು ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಸನ್ನಿವೇಶವನ್ನು ಅವಲೋಕಿಸಿದಾಗ ಬಾಲಕಿಯರಲ್ಲಿ ಆತ್ನಸ್ಥೈರ್ಯ ಮತ್ತು ಬಾಲಕರಲ್ಲಿ ಕೀಳರಿಮೆ ಹೆಚ್ಚಾಗುತ್ತಿದೆ. ಪೋಷಕರು ಅಪಾರ ನಂಬಿಕೆ ಭರವಸೆಯೊಂದಿಗೆ ನಿಮ್ಮನ್ನು ಓದಿಸಿ ಬೆಳೆಸುತ್ತಾರೆ. ಅದಕ್ಕೆ ತಕ್ಕಂತೆ ನಿಮ್ಮ ಜವಾಬ್ದಾರಿ ಮತ್ತು ಕರ್ತವ್ಯವನ್ನು ಅರಿತು ಅತ್ಯಂತ ಪ್ರಾಮಾಣಿಕತೆಯಿಂದ ಸಾಧನೆಯ ಗುರಿಯೊಂದಿಗೆ ವಿದ್ಯೆ ಕಲಿಯಬೇಕು ಎಂದರು.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಅವಕಾಶ ಹೇರಳವಾಗಿವೆ. ಪದವಿ ವ್ಯಾಸಂಗದಲ್ಲಿಯೇ ನಿಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಬೇಕು. ಓದುವ ಜೊತೆಗೆ ಬುದ್ಧಿಯು ಬೇಕು. ಶ್ರದ್ಧೆ ಮತ್ತು ಭಕ್ತಿಯಿಂದ ಕಲಿತ ವಿದ್ಯೆ ನಾವು ಸಮಾಜದಲ್ಲಿ ಹೇಗೆ ಬದುಕಬೇಕೆಂಬ ಮಾರ್ಗದರ್ಶನ ನೀಡುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಇಷ್ಟಪಟ್ಟು ಓದಬೇಕು ಎಂದರು.
ಕಲಾ ವಿಭಾಗದ ವಿದ್ಯಾರ್ಥಿಗಳು ಸಮಾಜದಲ್ಲಿ ಸಂವಹನ ಸಾಧಿಸುವುದು ಸುಲಭ. ಸಾಮಾಜಿಕ ಜಾಲತಾಣ ಇಂದು ಯುವಪೀಳಿಗೆಯನ್ನು ತಮ್ಮ ಗುರಿಯಿಂದ ವಿಮುಖರನ್ನಾಗಿಸುತ್ತಿದೆ. ಹಾಗಾಗಿ ಸಮಯಪಾಲನೆ ಸಮಯದ ಸದ್ವಿನಿಯೋಗ ವಿದ್ಯಾರ್ಥಿಗಳಲ್ಲಿ ಬಹು ಮುಖ್ಯ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಸ್.ರವೀಂದ್ರ ಮಾತನಾಡಿ, ವಾದದಿಂದ ಅಹಂಕಾರ ಸಂವಾದದಿಂದ ಸೃಜನಶೀಲ ವಿಚಾರ ಸೃಷ್ಟಿ ಆಗುತ್ತದೆ. ನಮ್ಮ ನಡವಳಿಕೆ ಪ್ರಾಮಾಣಿಕವಾಗಿರಬೇಕು. ಬದಲಾವಣೆ ಬಯಸುವ ನಾವು ಮೊದಲು ಪ್ರಾಮಾಣಿಕವಾಗಿ ಬದಲಾಗಬೇಕು. ವಿದ್ಯಾರ್ಥಿಗಳ ನೈಜ ನಡೆ ಮಾತುಗಳಿಂದ ಅವರ ಬದುಕು ಸುಂದರವಾಗಿ ಅನಾವರಣವಾಗುತ್ತದೆ ಎಂದರು.