ಕನ್ನಡಪ್ರಭ ವಾರ್ತೆ ಮಂಡ್ಯ
ದೇವೇಗೌಡರು ಮತ್ತು ಕುಮಾರಸ್ವಾಮಿ ಬಗ್ಗೆ ಹಗುರವಾಗಿ ಮಾತನಾಡಿದರೆ ನಾಲಿಗೆ ಕತ್ತರಿಸುವುದಾಗಿ ಹೇಳಿದ್ದಾರೆ. ನಮ್ಮ ನಾಯಕರ ತನಕ ಹೋಗುವುದು ಬೇಡ. ಮೊದಲಿಗೆ ನಮ್ಮನ್ನು ಮುಟ್ಟಲಿ ನೋಡೋಣ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸುರೇಶ್ಗೌಡರಿಗೆ ಮುಂಬರುವ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಿಂದ ಟಿಕೆಟ್ ಸಿಗುವ ಸಾಧ್ಯತೆಗಳಿಲ್ಲ. ಅವರ ಪಕ್ಷದವರೇ ಟಿಕೆಟ್ ತಪ್ಪಿಸುವುದಕ್ಕೆ ಹೊರಟಿದ್ದಾರೆ. ಆ ಭಯದಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರನ್ನು ಓಲೈಕೆ ಮಾಡಿಕೊಳ್ಳುವುದಕ್ಕೆ ಚಲುವರಾಯಸ್ವಾಮಿ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದಾರೆ ಎಂದು ಕುಟುಕಿದರು.ಜಿಲ್ಲೆ ಹಾಗೂ ರಾಜ್ಯ ರಾಜಕಾರಣದಲ್ಲಿ ಕಳೆದ ಮೂವತ್ತು ವರ್ಷಗಳಿಂದ ನಿಷ್ಕಳಂಕ ಸೇವೆ ಸಲ್ಲಿಸಿರುವ ಹಿರಿಯ ರಾಜಕಾರಣಿ ಎನ್.ಚಲುವರಾಯಸ್ವಾಮಿ ಬಗ್ಗೆ ಮಾತನಾಡುವ ಅರ್ಹತೆ, ಯೋಗ್ಯತೆ ಮಾಜಿ ಶಾಸಕ ಸುರೇಶ್ಗೌಡ ಅವರಿಗಿಲ್ಲ. ದೇವೇಗೌಡರು ಮತ್ತು ಅವರ ಕುಟುಂಬ ಸದಸ್ಯರನ್ನು ಹೊಗಳುವುದನ್ನು ಬಿಟ್ಟು ಇನ್ನಾವುದೇ ಅಭಿವೃದ್ಧಿ ಅಥವಾ ಪಕ್ಷದ ಸಂಘಟನೆ ಇವರಿಂದ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.
ಎರಡು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿರುವ ಸುರೇಶ್ಗೌಡ ಅವರು ನಾಲಿಗೆ ಕತ್ತರಿಸುವ ಮಾತನಾಡುವುದು ಅವರಿಗೆ ಮತ್ತು ಅವರ ಪಕ್ಷಕ್ಕೆ ಶೋಭೆ ತರುವುದಿಲ್ಲ. ಸುರೇಶ್ಗೌಡರ ಆಕ್ರೋಶದ ಮಾತನ್ನು ಕೇಂದ್ರ ಸಚಿವರಾದ ಕುಮಾರಸ್ವಾಮಿಯವರೂ ಸಹ ಸಮರ್ಥಿಸಿಕೊಳ್ಳುವುದಿಲ್ಲ. ನಾಲಿಗೆ ಕತ್ತರಿಸುವ ಹೇಳಿಕೆ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಹಾಲಹಳ್ಳಿ ಅಶೋಕ್, ದಿನೇಶ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ರಾಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ್ ಉಪಸ್ಥಿತರಿದ್ದರು. ಬಿ-ಫಾರಂ ತಪ್ಪುವ ಆತಂಕದಿಂದ ನಾಲಿಗೆ ಕತ್ತರಿಸುವ ಮಾತು: ರಾಜೇಶ್ ಕಿಡಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿ ಫಾರಂ ದೊರೆಯದೆಂಬ ಆತಂಕದಿಂದ ಸಚಿವ ಚಲುವರಾಯಸ್ವಾಮಿ ನಾಲಿಗೆ ಕತ್ತರಿಸುವ ಬಗ್ಗೆ ಮಾಜಿ ಶಾಸಕ ಸುರೇಶ್ಗೌಡ ಮಾತನಾಡಿದ್ದಾರೆ ಎಂದು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ. ರಾಜೇಶ್ ಕಿಡಿಕಾರಿದರು.
ಜಿಲ್ಲೆಯ ಹಿರಿಯ ರಾಜಕಾರಣಿಯ ಬಗ್ಗೆ ಆಕ್ರೋಶ ಹೊರ ಹಾಕುವ ವೇಳೆ ನಾಲಿಗೆ ಕತ್ತರಿಸುವ ಮಾತನಾಡಿರುವುದು ಸರಿಯಲ್ಲ. ಇವರಿಗೆ ಧೈರ್ಯ ಹಾಗೂ ತಾಕತ್ತು ಇದ್ದರೆ ಅವರು ಹೇಳುವ ಜಾಗಕ್ಕೇ ನಾವೇ ಹೋಗುತ್ತೇವೆ. ಮೊದಲು ನಮ್ಮ ನಾಲಿಗೆಯನ್ನು ಕತ್ತರಿಸಲಿ ಎಂದು ಸವಾಲು ಹಾಕಿದರು.
ಚಲುವರಾಯಸ್ವಾಮಿ ಅವರು ಜಿಲ್ಲೆಯ ಕೃಷಿಕರಿಗೆ ಆಸರೆಯಾಗುವ ಸದುದ್ದೇಶದಿಂದ ಕೃಷಿ ವಿವಿ ಅನುಷ್ಠಾನಗೊಳಿಸಿದ್ದಾರೆ. ಆದರೆ, ದೇವೇಗೌಡರು ಮತ್ತು ಕುಮಾರಸ್ವಾಮಿ ಜಿಲ್ಲೆಗೆ ಯಾವ ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಿದರು.