ಹುಬ್ಬಳ್ಳಿ:
ಗುರುವಾರ ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಹೊಸೂರು ಕ್ರಾಸ್ನಲ್ಲಿ ಹಲವು ದಿನಗಳಿಂದ ಯುಜಿಡಿಯಲ್ಲಿ ತೊಂದರೆಯಾಗಿದ್ದರೂ ಸರಿಪಡಿಸದ ವಲಯ ಕಚೇರಿ-9ರ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡ ಆಯುಕ್ತರು, ಮುಂದೆ ಈ ರೀತಿ ಕರ್ತವ್ಯದಲ್ಲಿ ನಿರ್ಲಕ್ಷ್ಯತನ ತೋರಿದರೆ ಕ್ರಮ ಎದುರಿಸಿ ಎಂದು ಎಚ್ಚರಿಸಿದರು.
ಮುಖ್ಯ ರಸ್ತೆಗಳ ಎರಡೂ ಕಡೆ ಬಿದ್ದಿರುವ ಕಸ ವಿಲೇವಾರಿ ಮಾಡದೆ ಇರುವುದಕ್ಕೆ ಆರೋಗ್ಯ ನಿರೀಕ್ಷಕರನ್ನು ತರಾಟೆಗೆ ತೆಗೆದುಕೊಂಡ ಆಯುಕ್ತರು, ಸ್ವಚ್ಛತೆಗೆ ಆದ್ಯತೆ ನೀಡಿ. ನಿತ್ಯ ಕಸ ವಿಲೇವಾರಿ ಮಾಡಿ ಎಂದರು.ಧಾರವಾಡದ ಯಾಲಕ್ಕಿ ಶೆಟ್ಟರ್ ಕಾಲನಿ ಪ್ರದೇಶಗಳಲ್ಲಿ ಆರೋಗ್ಯ ನಿರೀಕ್ಷಕರು ಉತ್ತಮ ಕಾರ್ಯನಿರ್ವಹಿಸಿರುವ ಕುರಿತು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ರೀತಿ ಎಲ್ಲ ಆರೋಗ್ಯ ನಿರೀಕ್ಷಕರು ಕಾರ್ಯನಿರ್ವಹಿಸಬೇಕು ಎಂದರು.
ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಆಗುತ್ತಿರುವುದು ಕಂಡುಬಂದಲ್ಲಿ ಸಂಬಂಧಿಸಿದ ಅಂಗಡಿಕಾರರಿಗೆ ದಂಡ ವಿಧಿಸಿ ಟ್ರೇಡ್ ಲೈಸನ್ಸ್ ರದ್ದಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲೆಂದರಲ್ಲಿ ಅನಧಿಕೃತವಾಗಿ ಡಬ್ಬಾ ಅಂಗಡಿ ಇಟ್ಟುಕೊಂಡು ವ್ಯವಹಾರ ನಡೆಸುತ್ತಿರುವ ವಿರುದ್ಧ ಕ್ರಮಕೈಗೊಂಡು ಅವುಗಳನ್ನು ತೆರವುಗೊಳಿಸಿ ವರದಿ ನೀಡುವಂತೆ ವಲಯ ಸಹಾಯಕ ಆಯುಕ್ತರಿಗೆ ಡಾ. ಈಶ್ವರ ಸೂಚಿಸಿದರು.ಈ ವೇಳೆ ಪಾಲಿಕೆ ಅಧಿಕಾರಿಗಳು ಪಾಲ್ಗೊಂಡಿದ್ದರು.