ರಾಮನಗರ: ವಿಜಯೇಂದ್ರ ಗಂಡಸಾಗಿದ್ದರೆ ಭ್ರಷ್ಟಾಚಾರದ ಪಿತಾಮಹ ಅಂತ ಅಂದ್ರೆ ಏನೆಂದು ಹೇಳಲಿ, ಅವನಿಗೆ ಗೌರವ ಕೊಡುತ್ತೇನೆ. ಆದರೆ, ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ ಎಂದು ಹೇಳಬೇಕು. ಆಗ ಆತನನ್ನು ಪಾರ್ಟಿ ಅಧ್ಯಕ್ಷ ಎಂದು ಒಪ್ಪಿಕೊಳ್ಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.
ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ, ಯಾವಾಗ ಆಗಿದೆ ಅಂತ ಹೇಳಬೇಕು. ನಾನು ಇಡಿ ಕೇಸ್ನಲ್ಲಿ ಜೈಲಿಗೆ ಹೋಗಿದ್ದೆ. ಆಗ ನಿಮ್ಮಪ್ಪ ಇನ್ಕಮ್ ಟ್ಯಾಕ್ಸ್ ಗೆ ಅನುಮತಿ ನೀಡಿದ್ದರು. ಸುಪ್ರೀಂ ಕೋರ್ಟ್ ನಲ್ಲಿ ಇಡಿ ಕೇಸ್ ವಜಾ ಆಗಿದ್ದು ಗೊತ್ತಾ. ಇದಕ್ಕೆಲ್ಲ ಉತ್ತರ ಕೊಡುತ್ತೇನೆ ಸಮಯ ಬರಲಿ ಎಂದು ಹೇಳಿದರು.
ಬಿಜೆಪಿ ಸರ್ಕಾರದಲ್ಲಿ ಮಾಡಿದ ಹಗರಣಕ್ಕೆ ಜವಾಬ್ದಾರಿ ಯಾರು? ಯಾವ ಬ್ಯಾಂಕ್ಗೆ ಹಣ ಹೋಗಿದೆ ಎಂಬ ಬಗ್ಗೆ ಮಾಹಿತಿ ಕೊಡಬೇಕು. ಪಾದಯಾತ್ರೆಯಲ್ಲಿ ನಾವು ಕೇಳಿರುವ ಪ್ರಶ್ನೆಗಳಿಗೆ ಉತ್ತರ ಕೊಡಬೇಕು. ನನ್ನನ್ನು ಜೈಲಿಗೆ ಹಾಕಿಸುವ ಸಂಚು ನಡೆಯುತ್ತಿದೆ. ನಾನು ಜೈಲಿಗೆ ಹೋಗಲು ರೆಡಿ ಇದ್ದೇನೆ. ನನ್ನಂತಹ ಬೇಕಾದಷ್ಟು ಜನ ಕಾಂಗ್ರೆಸ್ನಲ್ಲಿ ಹುಟ್ಟಿಕೊಳ್ಳುತ್ತಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.