ಒಗ್ಗಟ್ಟಿನಿಂದ ಕೆಲಸ ಮಾಡಿದ್ರೆ ಗೆಲವು ನಮ್ಮದೆ

KannadaprabhaNewsNetwork |  
Published : Apr 23, 2026, 03:00 AM IST
ಪೊಟೋ ಏ.21ಎಂಡಿಎಲ್ 2. ಮಾಚಕನೂರ ಪಿಕೆಪಿಎಸ್ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರಿಗೆ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುಧೋಳ ನಮ್ಮ ತಂದೆ ಗೋವಿಂದ ಕಾರಜೋಳ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಜನರ ಪ್ರತಿ ಕೆಲಸ ಕಾರ್ಯಗಳು ಏನೇ ಇದ್ದರೂ ಸದಾಕಾಲ ನನ್ನನ್ನು ನೇರವಾಗಿ ಭೇಟಿ ಮಾಡಿ ಸಮಸ್ಯೆಗೆ ಸ್ಪಂದಿಸುವ ಮೂಲಕ ನಿಮ್ಮ ಜೊತೆಗಿರುತ್ತೇನೆ ಎಂದು ಬಿಜೆಪಿ ಯುವ ಧುರೀಣ ಅರುಣ ಗೋವಿಂದ ಕಾರಜೋಳ ಕಾರ್ಯಕರ್ತರಿಗೆ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಮುಧೋಳ

ನಮ್ಮ ತಂದೆ ಗೋವಿಂದ ಕಾರಜೋಳ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಜನರ ಪ್ರತಿ ಕೆಲಸ ಕಾರ್ಯಗಳು ಏನೇ ಇದ್ದರೂ ಸದಾಕಾಲ ನನ್ನನ್ನು ನೇರವಾಗಿ ಭೇಟಿ ಮಾಡಿ ಸಮಸ್ಯೆಗೆ ಸ್ಪಂದಿಸುವ ಮೂಲಕ ನಿಮ್ಮ ಜೊತೆಗಿರುತ್ತೇನೆ ಎಂದು ಬಿಜೆಪಿ ಯುವ ಧುರೀಣ ಅರುಣ ಗೋವಿಂದ ಕಾರಜೋಳ ಕಾರ್ಯಕರ್ತರಿಗೆ ಭರವಸೆ ನೀಡಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ತಾಲೂಕಿನ ಮಾಚಕನೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ಸನ್ಮಾನಿಸಿ ಮಾತನಾಡಿ, ಪ್ರತಿಯೊಂದು ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಗೆಲುವು ಪಡೆಯಲು ಸಾಧ್ಯ. ಈ ಚುನಾವಣೆಯಲ್ಲಿ ಗ್ರಾಮದ ಹಿರಿಯರು, ಯುವಕರು ಒಟ್ಟಾಗಿ ಕೆಲಸ ಮಾಡಿದ್ದರಿಂದ ಸಹಕಾರಿಯ 11ರಲ್ಲಿ 10 ಸ್ಥಾನ ಗೆಲ್ಲಲು ಸಾಧ್ಯವಾಯಿತು ಎಂದರು.

ಬಿಜೆಪಿ ಗ್ರಾಮೀಣ ಅಧ್ಯಕ್ಷ ಸಂಗನಗೌಡ ಕಾತರಕಿ ಮಾತನಾಡಿ, ಮತಕ್ಷೇತ್ರದ ಪ್ರತಿ ಗ್ರಾಮದಲ್ಲಿ ಬಿಜೆಪಿ ನಿಷ್ಠಾವಂತ ಮುಖಂಡರು ಹಾಗೂ ಕಾರ್ಯಕರ್ತರು ಗಟ್ಟಿಯಾಗಿ ಪಕ್ಷದ ಕೆಲಸ ಮಾಡಲು ಹುಮ್ಮಸ್ಸಿನಿಂದ ಪ್ರತಿ ಚುನಾವಣೆಯಲ್ಲೂ ಮತದಾರರ ಮನೆಬಾಗಿಲಿಗೆ ಹೋಗಿ ಸಂಸದ ಗೋವಿಂದ ಕಾರಜೋಳ ಅವರು ಕ್ಷೇತ್ರದಲ್ಲಿ ಮಾಡಿದ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಜನರಿಗೆ ತಲುಪಿಸಿದ್ದಾರೆ. ಎಲ್ಲರೂ ಮುಂದೆ ಬರುವ ಪ್ರತಿ ಚುನಾವಣೆಗಳನ್ನು ಹೀಗೆಯೇ ಒಗ್ಗಟ್ಟಿನಿಂದ ಶ್ರಮಸಿ ನಮ್ಮ ನಾಯಕರ ಕೈ ಬಲಪಡಿಸೋಣ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಭೀಮನಗೌಡ ಪಾಟೀಲ, ದುಂಡಪ್ಪ ದಾಸರಡ್ಡಿ, ರಮೇಶಗೌಡ ಪಾಟೀಲ, ಗೋಪಾಲ ದಾಸರಡ್ಡಿ ಇತರರು ಮಾತನಾಡಿದರು.

ಪಿಕೆಪಿಎಸ್ ನೂತನ ಅಧ್ಯಕ್ಷ ಪ್ರಕಾಶ ಬಿರೋಜಿ, ಉಪಾಧ್ಯಕ್ಷ ಗಿರಿಯಪ್ಪ ಜಮತಾರ, ಬಸು ಸುಳ್ಳದ, ಶ್ರೀಶೈಲ ಚಿನ್ನಣ್ಣವರ, ಬಂಡು ಘಾಟಗೆ, ಹೊಳಬಸು ಬಿದರಿ, ಕೃಷ್ಣ ಪೈಲ್ವಾನ್, ಹನುಮಂತ ದಾಸರಡ್ಡಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಚನಗಳು ಬದುಕಿಗೆ ದಿವ್ಯ ಔಷಧ
ನಾಳೆ ಬಾಗಲಕೋಟೆ ವಿವಿಯ ಘಟಿಕೋತ್ಸವ