ಒಂದು ಮರ ಕಡಿದರೆ, 20 ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡಿ: ರಾಜೇಶ್ ಎನ್. ಹೊಸಮನೆ

KannadaprabhaNewsNetwork |  
Published : Jun 07, 2025, 03:51 AM IST
ಬಳ್ಳಾರಿಯ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಮಾತನಾಡಿದರು.  | Kannada Prabha

ಸಾರಾಂಶ

ಬಳ್ಳಾರಿಯ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಪ್ರೌಢ ಮತ್ತು ಕಾಲೇಜು ಮಟ್ಟದಲ್ಲಿ ಏರ್ಪಡಿಸಿದ್ದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಮಾಣಪತ್ರ ಮತ್ತು ಗಿಡ ವಿತರಿಸಲಾಯಿತು.

ಬಳ್ಳಾರಿ: ಮಾನವನ ಅಗತ್ಯೆಗಳಿಗಾಗಿ ಒಂದು ಮರವನ್ನು ಕಟಾವು ಮಾಡಿದರೆ, ಮುಂದೆ 20 ಗಿಡಗಳನ್ನು ನೆಟ್ಟು ಪೋಷಿಸುವ ಸಂಕಲ್ಪ ಹೊಂದಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಅರಣ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿ ಸಂಯುಕ್ತಾಶ್ರಯದಲ್ಲಿ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭೂಮಿಯ ಮೇಲೆ ಇರುವ ಸಜೀವ ಮತ್ತು ನಿರ್ಜೀವ ವಸ್ತು ಸೇರಿದರೆ ಅದು ಪರಿಸರ. ಪರಿಸರ ದೇವರಿದ್ದಂತೆ. ಹಾಗಾಗಿ ಪರಿಸರವನ್ನು ಉಳಿಸುವ ಮತ್ತು ಬೆಳೆಸುವ ಕಾರ್ಯವಾಗಬೇಕು ಎಂದರು.

ಭೂಮಿಗೆ 5 ಬಿಲಿಯನ್ ವರ್ಷಗಳ ಇತಿಹಾಸವಿದೆ. ಪ್ರಕೃತಿಯಲ್ಲಿನ ಕೀಟ, ಜಂತು, ಬ್ಯಾಕ್ಟೀರಿಯಾಗಳು, ಪ್ರಾಣಿ-ಪಕ್ಷಿಗಳು, ಸಕಲ ಜಲಚರ ಜೀವಿಗಳೆಲ್ಲವೂ ಮನುಷ್ಯನ ಬದುಕಿಗೆ ಪೂರಕವಾಗಿದ್ದು, ಅದರಲ್ಲಿ ಪರಿಸರವು ಮುಖ್ಯವಾಗುತ್ತದೆ. ಪರಿಸರಕ್ಕೆ ಮಾನವನ ಅಗತ್ಯವಿಲ್ಲ. ಆದರೆ ಮಾನವನಿಗೆ ಪರಿಸರ ಅತಿ ಮುಖ್ಯವಾಗುತ್ತದೆ ಎಂಬುದನ್ನು ನಾವೆಲ್ಲರೂ ಅರ್ಥೈಸಿಕೊಳ್ಳಬೇಕು ಎಂದರು.

ಪ್ರಸ್ತುತ ವಿದ್ಯಮಾನದಲ್ಲಿ ಮಾನವನು ಅನೇಕ ಆವಿಷ್ಕಾರಗಳಿಂದ ಅತಿ ವೇಗದಲ್ಲಿ ಮುಂದುವರಿಯುತ್ತಿದ್ದಾನೆ. ಸ್ವಲ್ಪ ನಿಧಾನಗತಿಯಲ್ಲಿ ಚಲಿಸಿದರೆ ಉತ್ತಮ ಎಂದು ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಟಿ.ಎಂ. ಸಿದ್ದೇಶ್ವರ ಬಾಬು ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರೌಢ ಮತ್ತು ಕಾಲೇಜು ಮಟ್ಟದಲ್ಲಿ ಏರ್ಪಡಿಸಿದ್ದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಮಾಣಪತ್ರ ಮತ್ತು ಗಿಡ ವಿತರಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಆವರಣದಲ್ಲಿ ಗಣ್ಯರು ಗಿಡ ನೆಟ್ಟು ನೀರುಣಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಅಂತರ್ಜಲ ಇಲಾಖೆಯ ಹಿರಿಯ ಭೂ ವಿಜ್ಞಾನಿ ಅರುಣ್ ವಿ., ಬಳ್ಳಾರಿ ಬಿಸಿನೆಸ್ ಕಾಲೇಜಿನ ನಿರ್ದೇಶಕ ಅಮರ್ ರಾಜ್ ಭೂಪಾಲ್, ಕನ್ನಡ ಉಪನ್ಯಾಸಕ ಪ್ರಭಾಕರ್ ಜೋಯಿಸ್ ಮತ್ತು ಸ್ಮಯೋರ್ ಕಂಪನಿಯ ಸಿಒಒ ಮಂಜುನಾಥ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದ ತರಬೇತಿದಾರ ನಾಗರಾಜ, ಅಧಿಕಾರಿಗಳು, ಸಿಬ್ಬಂದಿ ಮತ್ತು ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...