- ಹೊನ್ನಾಳಿ ತಾಲೂಕು ಬಿಜೆಪಿ ಅಧ್ಯಕ್ಷ ನಾಗರಾಜ್ ಅರಕೆರೆ ಪದಗ್ರಹಣ ಕಾರ್ಯಕ್ರಮ- - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ಪಟ್ಟಣದ ಗುರುಭವನದಲ್ಲಿ ತಾಲೂಕು ಬಿಜೆಪಿ ಹಮ್ಮಿಕೊಂಡಿದ್ದ ನೂತನ ಅಧ್ಯಕ್ಷ ಎ.ಎಂ. ನಾಗರಾಜ್ ಅರಕೆರೆ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಕ್ಷದಲ್ಲಿ ಬೂತ್ ಮಟ್ಟದ ಅಧ್ಯಕ್ಷರಿಂದ ಹಿಡಿದು ತಾಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದ ಅಧ್ಯಕ್ಷರ ಆಯ್ಕೆ ಪಕ್ಷದ ತತ್ವ ಸಿದ್ಧಾಂತಗಳಡಿ ನಡೆಯುತ್ತದೆ. ಇಲ್ಲಿ ಯಾರ ಶಿಫಾರಸು ಕೂಡ ನಡೆಯುವುದಿಲ್ಲ. ಆದಾಗ್ಯೂ ಕೆಲವರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದರು.
ಸಿಎಂ ನೆತ್ತಿ ಮೇಲೆ ತೂಗುಗತ್ತಿ:ಪ್ರಸ್ತುತ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ. ಅನೇಕ ಹಗರಣಗಳ ಸುಳಿಯಲ್ಲಿ ಸಿಲುಕಿದೆ. ಇನ್ನೊಂದೆಡೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಕುರ್ಚಿಗಾಗಿ ದಿನದಿಂದ ದಿನಕ್ಕೆ ಪೈಪೋಟಿ ತೀವ್ರವಾಗಿ ಸಿದ್ದರಾಮಯ್ಯರ ನೆತ್ತಿನ ಮೇಲೆ ತೂಗುಗತ್ತಿ ನೇತಾಡುತ್ತಿದೆ. ಯಾವ ಕ್ಷಣದಲ್ಲಿಯೂ ಸಿದ್ದರಾಮಯ್ಯ ಸರ್ಕಾರ ಬೀಳಬಹುದು. ವಾಸ್ತವವಾಗಿ ಸಂವಿಧಾನದ ವಿರೋಧಿಗಳು ಎಂದರೆ ಅದು ಕಾಂಗ್ರೆಸ್ ಮುಖಂಡರಾಗಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ದೇಶದ ಸಂವಿಧಾನದ ಮೇಲೆ ಯಾವ ಗೌರವವಿಲ್ಲ ಎಂದು ಟೀಕಿಸಿದರು.
ಅಧ್ಯಕ್ಷರ ಚುನಾವಣೆ ಉಸ್ತುವಾರಿ ದತ್ತಾತ್ರೇಯ, ಚುನಾವಣಾ ವೀಕ್ಷಕ ಬೈರಪ್ಪ, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಜಶೇಖರ ನಾಗಪ್ಪ, ಮುಖಂಡ ಕೆ.ಪಿ.ಕುಬೇಂದ್ರಪ್ಪ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಡ್ಲೆಬಾಳು ಧನಂಜಯ, ಶ್ರೀನಿವಾಸ್, ಮುಖಂಡರಾದ ಸಿ.ಆರ್.ಶಿವಾನಂದ, ನೆಲಹೊನ್ನೆ ಮಂಜುನಾಥ್,ಕೆ.ರಂಗಪ್ಪ,ದಿಡಗೂರು ಫಾಲಾಕ್ಷಪ್ಪ,ಮಾಜಿ ಅಧ್ಯಕ್ಷ ಡಿ.ಜಿ.ರಾಜಪ್ಪ, ಟಿ.ಜಿ.ರಮೇಶ್ ಗೌಡ, ರವಿಕುಮಾರ್, ಶಿವುಹುಡೇದ್ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕೋಟ್ ನ್ಯಾಮತಿ, ಹೊನ್ನಾಳಿ ಅವಳಿ ತಾಲೂಕುಗಳ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಹಕಾರದಿಂದ ಅಧ್ಯಕ್ಷನಾಗಿ ಮುಂದುವರೆಯುತ್ತೇನೆ. ಎಲ್ಲರ ಸಲಹೆ- ಸಹಕಾರ ಅಗತ್ಯವಾಗಿದೆ
-20ಎಚ್ಎಲ್.ಐ1ಜೆಪಿಜಿ: