ಶ್ರಮಪಟ್ಟರೆ ಬಂಗಾರದಂತಹ ಜೀವನ ನಿಮ್ಮದಾಗಲಿದೆ: ಡಾ.ಮಹಾಂತೇಶ

KannadaprabhaNewsNetwork |  
Published : Nov 10, 2025, 03:15 AM IST
ಲೋಕಾಪುರ ಸಿ.ಎಂ.ಪಂಚಕಟ್ಟಿಮಠ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ೨೦೨೫-೨೬ ನೇ ಸಾಲಿನ ಸಾಂಸ್ಕೃತಿಕ ಕ್ರೀಡಾ ಎನ್.ಎಸ್.ಎಸ್.ರೆಡ್ ಕ್ರಾಸ್‌ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಹಾಗೂ ಕನ್ನಡ ರಾಜ್ಯೋತ್ಸವ ಉದ್ಘಾಟನ ಸಮಾರಂಭ ಜರುಗಿತು. | Kannada Prabha

ಸಾರಾಂಶ

ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು, ವಿದ್ಯಾರ್ಥಿ ಜೀವನ ಬಂಗಾರದ ಜೀವನ ಎನ್ನುವ ನಾಣ್ಣುಡಿ ಪ್ರಕಾರ ನಿಜವಾಗಲೂ ಶ್ರಮಪಟ್ಟರೆ ಅದು ಬಂಗಾರದಂತಹ ಜೀವನ ಆಗುತ್ತದೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ಕಲಾದಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಮಹಾಂತೇಶ ಎಚ್. ಬಿ ಹೇಳಿದರು.

ಕನ್ನಡಪ್ರಭ ವಾರ್ತೆ ಲೋಕಾಪುರ

ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು, ವಿದ್ಯಾರ್ಥಿ ಜೀವನ ಬಂಗಾರದ ಜೀವನ ಎನ್ನುವ ನಾಣ್ಣುಡಿ ಪ್ರಕಾರ ನಿಜವಾಗಲೂ ಶ್ರಮಪಟ್ಟರೆ ಅದು ಬಂಗಾರದಂತಹ ಜೀವನ ಆಗುತ್ತದೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ಕಲಾದಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಮಹಾಂತೇಶ ಎಚ್. ಬಿ ಹೇಳಿದರು.

ಪಟ್ಟಣದ ಸಿ.ಎಂ.ಪಂಚಕಟ್ಟಿಮಠ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ರೆಡ್ ಕ್ರಾಸ್‌, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಹಾಗೂ ಕನ್ನಡ ರಾಜ್ಯೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಮಲ್ಲಯ್ಯ ಮಾತನಾಡಿ, ಕರುನಾಡಿನ ಚರಿತ್ರೆ ಹಾಗೂ ಕನ್ನಡ ಭಾಷೆ ಬೆಳೆದು ಬಂದ ಹಾದಿ ವಿವರಿಸಿದರು. ವಿಶೇಷ ಸಾಧನೆ ಮೆರೆದ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಮ್ಮಿಕೊಳ್ಳಲಾಯಿತು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಶಿವಾನಂದ ಬಗಲಿ, ಕಾಲೇಜು ಸಿಬ್ಬಂದಿಯಾದ ಮಳೆಪ್ಪ ಗಾಣಗೇರ, ಸಿದ್ದರಾಮಪ್ಪ ಗಾಣಗೇರ, ಗಾದಿಲಿಂಗಪ್ಪ, ಮೂರ್ತಿ ಎಸ್. ಸಂತೋಷ ಕುಮಾರ, ಮೂರ್ತಿ ಆರ್.ಎಂ., ಶಿವಕುಮಾರ ನಂದಿಕೊಲಮಠ, ಪ್ರತಿಕ್ಷಾ ರುದ್ರಾಕ್ಷಿ, ಮಲ್ಲಿಕಾರ್ಜುನ ಅಂಗಡಿ, ಹನುಮಂತ ನಿಂಗನಗೌಡರ ಇದ್ದರು. ಗಾದಿಲಿಂಗಪ್ಪ ನಿರೂಪಿಸಿದರು. ತಿಮ್ಮಾರೆಡ್ಡಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ