ಅಕ್ರಮವಾಗಿ ಗೋ ಹತ್ಯೆಗೈದು ಮಾಂಸ ತಯಾರಿ: ಪೊಲೀಸ್‌ ದಾಳಿ

KannadaprabhaNewsNetwork |  
Published : Sep 22, 2024, 01:47 AM IST
11 | Kannada Prabha

ಸಾರಾಂಶ

ಪರಾರಿಯಾಗಿರುವ ಆರೊಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿದ್ದ ೯೬ ಕೆ.ಜಿ. ಗೋ ಮಾಂಸ, ಒಂದು ಬೈಕ್ ಹಾಗೂ ಒಂದು ರಿಕ್ಷಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ೩೪ನೇ ನೆಕ್ಕಿಲಾಡಿ ಗ್ರಾಮದ ಆದರ್ಶನಗರದ ಕಜೆ ಎಂಬಲ್ಲಿ ನಿವೇಶನವೊಂದರಲ್ಲಿ ಅಕ್ರಮವಾಗಿ ಗೋ ಹತ್ಯೆಗೈದು ಮಾಂಸ ತಯಾರಿಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ೯೬ ಕೆ ಜಿ ಗೋ ಮಾಂಸ, ೧ ಬೈಕ್ ಹಾಗೂ ಒಂದು ರಿಕ್ಷಾವನ್ನು ವಶಪಡಿಸಿಕೊಂಡ ಘಟನೆ ಶನಿವಾರ ಸಂಭವಿಸಿದೆ. ಕಜೆ ನಿವಾಸಿ ಖತಿಜಮ್ಮ ಎಂಬಾಕೆಯ ಒಡೆತನಕ್ಕೆ ಸೇರಿದ ಈ ನಿವೇಶನದಲ್ಲಿ ಅಕ್ರಮವಾಗಿ ಗೋ ಹತ್ಯೆ ನಡೆಸಲಾಗುತ್ತಿದೆ ಎಂಬ ಖಚಿತ ವರ್ತಮಾನದ ಮೇರೆಗೆ ಉಪ್ಪಿನಂಗಡಿ ಎಸ್‌ಐ ಅವಿನಾಶ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿತ್ತು. ಈ ವೇಳೆ ಸ್ಥಳದಲ್ಲಿದ್ದ ಐವರು ಆರೋಪಿಗಳು ಸಮೀಪದ ಕಾಡಿನತ್ತ ಓಡಿ ಪರಾರಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಪರಾರಿಯಾಗಿರುವ ಆರೊಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿದ್ದ ೯೬ ಕೆ.ಜಿ. ಗೋ ಮಾಂಸ, ಒಂದು ಬೈಕ್ ಹಾಗೂ ಒಂದು ರಿಕ್ಷಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು