ಹೊಸಕೋಟೆ: ತಾಲೂಕಿನ ತಿರುಮಲಶೆಟ್ಟಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಡವತ್ತಿ ಸರ್ಕಾರಿ ಶಾಲಾ ಆವರಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ತಾಲೂಕಿನ ಪ್ರತಿ ಗ್ರಾಮದ ಕಿರಾಣಿ ಅಂಗಡಿಗಳಲ್ಲಿಯೂ ಅಕ್ರಮ ಮದ್ಯ ಮಾರಾಟವಾಗುತ್ತಿದೆ ಎಂದು ವ್ಯಾಪಕವಾಗಿ ಕೇಳಿ ಬಂದಿತು.
ತಹಸೀಲ್ದಾರ್ ಸೋಮಶೇಖರ್ ಮಾತನಾಡಿ, ಮುಗ್ಧ ದಲಿತರನ್ನು ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುತ್ತಿರುವ ವ್ಯಕ್ತಿಗಳಿಂದ ದೂರವಿರುವಂತೆ ಅರಿವು ಮೂಡಿಸುವ ಕೆಲಸ ಪ್ರಜ್ಞಾವಂತ ದಲಿತ ಮುಖಂಡರು ಮತ್ತು ದಲಿತ ಸಂಘಟನೆಗಳು ಮಾಡಬೇಕಿದೆ. ಸಭೆಯಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ವಿಶೇಷ ಗಮನ ಹರಿಸಲಾಗುವುದು. ಹಿಂದಿನ ಸಭೆಯಲ್ಲಿ ಹಲವು ಮುಖಂಡರು ತಿಳಿಸಿದ್ದ ಸಮಸ್ಯೆಗಳಿಗೆ ಕಾರ್ಯರೂಪದಲ್ಲಿ ಉತ್ತರ ನೀಡಿದ್ದೇವೆ. ಕೆಲ ಗ್ರಾಮಗಳಲ್ಲಿ ಅನಧಿಕೃತವಾಗಿ ಸರ್ಕಾರಿ ಜಮೀನು ಒತ್ತುವರಿಯನ್ನು ಯಾರ ಒತ್ತಡಕ್ಕೂ ಮಣಿಯದೆ ತೆರವುಗೊಳಿಸಿದ್ದೇವೆ. ವಸತಿ ರಹಿತರಿಗೆ ಸೂರು ಒದಗಿಸುವುದೇ ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಆ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದವರ ಯಾವುದೇ ಸಮಸ್ಯೆ ಇದ್ದರೂ ಕಾನೂನಿನ ಚೌಕಟ್ಟಿನೊಳಗೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ದೇಗುಲ ಪ್ರವೇಶ ನಿರಾಕರಿಸಿದರೆ ಕ್ರಮ:ತಾಲೂಕಿನ ಹಲವು ಗ್ರಾಮಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ದೇವಸ್ಥಾನಗಳಲ್ಲಿ ಪ್ರವೇಶ ನಿರಾಕರಣೆ ಮಾಡುತ್ತಿರುವ ಬಗ್ಗೆ ಸಭೆಯಲ್ಲಿ ದೂರು ಕೇಳಿಬಂತು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಇಂತಹ ಘಟನೆಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಠಾಣೆಗೆ ದೂರು ನೀಡಿದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ತಾಲೂಕಿನ ಎಲ್ಲಾ ದೇವಾಲಯಗಳ ಮುಂದೆ ಅಸ್ಪೃಶ್ಯತೆ ಆಚರಣೆ ಕಾನೂನು ಬಾಹಿರ, ಎಲ್ಲಾ ಜಾತಿಯ ಜನರಿಗೂ ದೇಗುಲದಲ್ಲಿ ಮುಕ್ತ ಅವಕಾಶ ಇದೆ ಎಂಬ ಫಲಕವನ್ನು ಮುಜರಾಯಿ ಇಲಾಖೆಯಿಂದ ಅಳವಡಿಸಲಾಗುವುದು ಎಂದರು.
ಕೋಟ್.............
-ಮಲ್ಲೇಶ್, ಡಿವೈಎಸ್ಪಿ, ಹೊಸಕೋಟೆ
ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಡವತ್ತಿ ಗ್ರಾಮದಲ್ಲಿ ನಡೆದ ಎಸ್ಸಿ ಎಸ್ಟಿ ಸಮುದಾಯದ ಕುಂದು ಕೊರತೆ ಸಭೆಯಲ್ಲಿ ಡಿವೈಎಸ್ಪಿ ಮಲ್ಲೇಶ್ ಮಾತನಾಡಿದರು.