ಅಕ್ರಮ ಮರ ಹನನ ದೂರು: ಅಧಿಕಾರಿಗಳ ಭೇಟಿ

KannadaprabhaNewsNetwork |  
Published : May 15, 2026, 02:45 AM IST
ಪರಿಶೀಲನೆ  | Kannada Prabha

ಸಾರಾಂಶ

ಕೊಡ್ಲಿಪೇಟೆ ಹೋಬಳಿಗೆ ಸೇರಿದ ಖ್ಯಾತಿ ಗ್ರಾಮದಲ್ಲಿ ಅರಣ್ಯಕ್ಕೆ ಸೇರಿದ ಜಾಗದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಜೆಸಿಬಿ ಯಂತ್ರ ಬಳಸಿ ಅರಣ್ಯದೊಳಗೆ ಪ್ರವೇಶ ಮಾಡಿ ಮರಗಳನ್ನು ಕಡಿದಿರುವ ಬಗ್ಗೆ ಶನಿವಾರಸಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬಂದ ದೂರಿನಂತೆ ಆರ್‌ಎಫ್‌ಒ ಪೂಜಾಶ್ರೀ , ಅರಣ್ಯ ರಕ್ಷಕ ಆನಂದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಕೊಡ್ಲಿಪೇಟೆ ಹೋಬಳಿಗೆ ಸೇರಿದ ಖ್ಯಾತಿ ಗ್ರಾಮದಲ್ಲಿ ಅರಣ್ಯಕ್ಕೆ ಸೇರಿದ ಜಾಗದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಜೆಸಿಬಿ ಯಂತ್ರ ಬಳಸಿ ಅರಣ್ಯದೊಳಗೆ ಪ್ರವೇಶ ಮಾಡಿ ಮರಗಳನ್ನು ಕಡಿದಿರುವ ಬಗ್ಗೆ ಶನಿವಾರಸಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬಂದ ದೂರಿನಂತೆ ಆರ್‌ಎಫ್‌ಒ ಪೂಜಾಶ್ರೀ , ಅರಣ್ಯ ರಕ್ಷಕ ಆನಂದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರಣ್ಯದೊಳಗೆ ಪ್ರವೇಶ ಮಾಡಿರುವುದರಿಂದ ಮರ ಕಡಿಯಲು ಬಳಸಿರುವ ಜೆಸಿಬಿ ವಾಹನ ವಶ ಪಡಿಸಿಕೊಳ್ಳಲಾಗುವುದು. ಈ ಬಗ್ಗೆ ಅರಣ್ಯ ಇಲಾಖೆ ತನಿಖೆ ನಡೆಸಲಿದೆ ಎಂದು ಆರ್‌ಎಫ್‌ಒ ಪೂಜಾಶ್ರೀ ಹೇಳಿದ್ದಾರೆ.

ಗ್ರಾಮಸ್ಥರಾದ ಕೆ.ಜಿ. ಶಿವ ಕುಮಾರ್, ಎಚ್.ಎಂ. ರಾಜಶೇಖರ್, ಮೋಕ್ಷಿತ್‌ರಾಜ್, ಗಣೇಶ್, ಕೇಶವ, ಕಾಂತರಾಜ್, ಭರತ್, ದಿನೇಶ್, ಕೀರ್ತಿ ಮತ್ತಿತರರಿದ್ದರು.

------------------------

ಇಂದು ಮಡಿಕೇರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆಮಡಿಕೇರಿ: ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಮೇ 15 ರಂದು ನಗರದ ವಿವಿಧ ವಾರ್ಡ್ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.ವಾರ್ಡ್ ಸಂಖ್ಯೆ 22 ಬ್ಲಾಕ್ ಸಂಖ್ಯೆ 16ರಲ್ಲಿ ರೋಶ್ನಿ ಕಾವೇರಪ್ಪ ಅವರ ಮನೆಯ ಮುಂಭಾಗ ತಡಗೋಡೆ ಕಾಮಗಾರಿ, ವಾರ್ಡ್ ಸಂಖ್ಯೆ 15 ಬ್ಲಾಕ್ ಸಂಖ್ಯೆ 13 ರಲ್ಲಿ ರೆಡ್ ಫರ್ನ್ ಬಳಿ ತಡಗೋಡೆ ನಿರ್ಮಾಣ, ಕ್ರಿಸ್ಟಲ್ ಹಾಲ್ ಮುಂಭಾಗ ಹಾದು ಹೋಗುವ ರಸ್ತೆ ಅಭಿವೃದ್ಧಿ, ಕೊಡವ ರುದ್ರಭೂಮಿಗೆ ಹೋಗುವ ರಸ್ತೆ, ಗೌಡ ಸಮಾಜದಿಂದ ಚೈನ್‌ಗೇಟ್ ರಸ್ತೆ, ಜ್ಯೂನಿಯರ್ ಕಾಲೇಜ್ ನಿಂದ ಮೇಲಿನ ಗೌಡಸಮಾಜ ರಸ್ತೆ, ಸಂಪಿಗೆಕಟ್ಟೆಯಿಂದ ಮಹದೇವಪೇಟೆ ರಸ್ತೆ, ಅಬ್ಬಿಫಾಲ್ಸ್ ರಸ್ತೆ, ಸಂತ ಜೋಸೆಫರ ಶಾಲೆಗೆ ಹೋಗುವ ರಸ್ತೆ, ಗ್ರಾಮಾಂತರ ಪೋಲಿಸ್ ಠಾಣೆ ಮುಂಭಾಗ ಮೋರಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿಗಳಾದ ಕೋಚನ ಎಂ.ಚೇತನ್ ಹಾಗೂ ಸಂಪತ್ ರಾಜ್ ತಿಳಿಸಿದ್ದಾರೆ.ಬೆಳಿಗ್ಗೆ 9 ಗಂಟೆಗೆ ರಾಜಾಸೀಟು ಬಳಿಯಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪಕ್ಷದ ಎಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಬಕವಿಯಲ್ಲಿದೆ ೮೪ ಸದಸ್ಯರನ್ನೊಳಗೊಂಡ ಅವಿಭಕ್ತ ಕುಟುಂಬ!
ಶಿವಂ ಅಸೋಸಿಯೇಟ್ ಕಚೇರಿ ಮೇಲೆ ದಾಳಿ