ನಿಷೇಧಿತ ಹುಕ್ಕಾಬಾರ್‌ಗೆ ಅಕ್ರಮ ಅನುಮತಿ: ಆರೋಪ

KannadaprabhaNewsNetwork |  
Published : Nov 27, 2024, 01:01 AM IST
ನಿಷೇಧಿತ ಹುಕ್ಕಾಬಾರ್‌ | Kannada Prabha

ಸಾರಾಂಶ

ಮಂಡ್ಯ ತಾಲೂಕಿನ ಬೂದನೂರು ಗ್ರಾಮದ ಬೇಲೂರು ರಸ್ತೆಯ ಗದ್ದೆ ಬಯಲಿನಲ್ಲಿ ಪ್ಲೊ-ಕಫೆ ಎಂಬ ಹುಕ್ಕಾ ಬಾರ್‌ನಲ್ಲಿ ಅಪ್ರಾಪ್ತರು ಅಕ್ರಮವಾಗಿ ಒಳ ಪ್ರವೇಶಿಸಿ ಕಳವು ಮಾಡಿದ್ದಲ್ಲದೇ, ಹುಕ್ಕಾ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕಾ ಮಾರಾಟಕ್ಕೆ ಬೆಂಬಲಿಸಿದ್ದವರ ಬಂಧಿಸಿ ತನಿಖೆ ನಡೆಸಲು ಜಿಲ್ಲಾಡಳಿತ ಮುಂದಾಗಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ತಾಲೂಕಿನ ಬೂದನೂರು ಗ್ರಾಮದ ಬೇಲೂರು ರಸ್ತೆಯ ಗದ್ದೆ ಬಯಲಿನಲ್ಲಿ ಪ್ಲೊ-ಕಫೆ ಎಂಬ ಹುಕ್ಕಾ ಬಾರ್‌ನಲ್ಲಿ ಅಪ್ರಾಪ್ತರು ಅಕ್ರಮವಾಗಿ ಒಳ ಪ್ರವೇಶಿಸಿ ಕಳವು ಮಾಡಿದ್ದಲ್ಲದೇ, ಹುಕ್ಕಾ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕಾ ಮಾರಾಟಕ್ಕೆ ಬೆಂಬಲಿಸಿದ್ದವರ ಬಂಧಿಸಿ ತನಿಖೆ ನಡೆಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಪ್ರಗತಿಪರ ಸಂಘಟನೆಗಳ ಮುಖಂಡ ಬಿ.ಕೆ.ಸತೀಶ್ ಆಗ್ರಹಿಸಿದರು.

ಈ ಸ್ಥಳದಲ್ಲಿ ಹುಕ್ಕಾಬಾರ್‌ಗೆ ೨೦೨೨ರಲ್ಲಿ ಅನುಮತಿ ಪಡೆದಿದ್ದು, ೨೦೨೪ರಲ್ಲಿ ಹುಕ್ಕಾ ಬಾರ್‌ಗೆ ಸರ್ಕಾರ ನಿಷೇಧ ಹೇರಿದ್ದರೂ ಅಕ್ರಮವಾಗಿ ಹುಕ್ಕಾ ಬಾರ್ ನಡೆಸಲಾಗುತ್ತಿದೆ. ಇದನ್ನು ಗಮನಿಸಿದ ಅಪ್ರಾಪ್ತ ಬಾಲಕರು ಕಳವು ಮಾಡಿರುವುದು ಅಲ್ಲಿನ ಸಿಸಿಟಿವಿ ದೃಶ್ಯಗಳಿಂದ ಬಹಿರಂಗಗೊಂಡಿತ್ತು. ಈಗ ಅಪ್ರಾಪ್ತನೊಬ್ಬ ಹುಕ್ಕಾ ಸೇವನೆ ಮಾಡುತ್ತಿರುವ ವಿಡಿಯೋಗಳು ಹರಿದಾಡುತ್ತಿವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಪ್ರಕರಣ ನಡೆದ ಸ್ಥಳವು ಗೋಮಾಳವಾಗಿದ್ದು, ಇದನ್ನು ಯಾವುದೇ ರೀತಿಯಲ್ಲಿ ವಾಣಿಜ್ಯ ವಹಿವಾಟಿಗೆ ನೀಡಲು ಅವಕಾಶವಿಲ್ಲದಿದ್ದರೂ ಬೂದನೂರು ಗ್ರಾಪಂ ಪಿಡಿಒ ಸದಸ್ಯರ ಒತ್ತಾಯದ ಮೇರೆಗೆ ಅನುಮತಿ ನೀಡಿದ್ದಾರೆ. ಅದಲ್ಲದೇ, ಈ ಪ್ರಕರಣ ಹೊರತಂದವರ ವಿರುದ್ಧವೇ ದೂರು ದಾಖಲಿಸುವಂತಹ ಘಟನೆಗಳು ನಡೆದಿವೆ ಎಂದು ದೂಷಿಸಿದರು.

ಹುಕ್ಕಾಬಾರ್ ವಿಷಯವಾಗಿ ದಾಖಲೆಗಳನ್ನು ತಿರುಚುವ ಕೆಲಸವಾಗುತ್ತಿದೆ. ಸಂಬಂಧಿತ ಇಲಾಖೆಗಳು ತಮ್ಮ ವೈಪಲ್ಯವನ್ನು ಮುಚ್ಚಿಹಾಕಲು ಪ್ರಯತ್ನ ನಡೆಸುತ್ತಿದ್ದಾರೆ. ಜಿಲ್ಲಾಡಳಿತ ವೈಫಲ್ಯವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಕರುನಾಡ ಸೇವಕರು ಸಂಘಟನೆಯ ಮೈಸೂರು ವಿಭಾಗೀಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಮಾತನಾಡಿ, ಅಪ್ರಾಪ್ತರ ಮೊಬೈಲ್ ವಶಕ್ಕೆ ಪಡೆದು ಸಾಂತ್ವನ ಕೇಂದ್ರಕ್ಕೆ ಕಳುಹಿಸಬೇಕಾದ ಕೆಲಸವನ್ನು ಪೊಲೀಸ್ ಇಲಾಖೆ ಮಾಡುವಲ್ಲಿ ವಿಫಲವಾಗಿದೆ. ಪೊಲೀಸ್ ಇಲಾಖೆ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳದೇ ಅಕ್ರಮಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಪ್ರಕರಣ ಸಂಬಂಧ ವೈಫಲ್ಯ ತೋರಿದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಬೂದನೂರು ಗ್ರಾಪಂ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕು. ತತ್‌ಕ್ಷಣ ಅಪ್ರಾಪ್ತ ಬಾಲಕರ ಮೊಬೈಲ್ ವಶಕ್ಕೆ ಪಡೆಯಬೇಕು. ಹೆಚ್ಚಿನ ಮಟ್ಟದ ತನಿಖೆ ಮಾಡಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಅಂಬೇಡ್ಕರ್ ವಾರಿಯರ್ಸ್‌ನ ರಾಜ್ಯಾಧ್ಯಕ್ಷ ಗಂಗರಾಜು, ಕರಾವೆ(ಶಿವರಾಮೇಗೌಡ ಬಣ) ಜಿಲ್ಲಾಧ್ಯಕ್ಷ ಜಯರಾಮ್, ಸುನೀಲ್, ಕುಳ್ಳ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ