ಮಹಾವೀರ್ ಶಾಲೆಯಲ್ಲಿ ಪರಿಕರ ಅಕ್ರಮ ಮಾರಾಟ

KannadaprabhaNewsNetwork |  
Published : May 27, 2024, 01:07 AM IST
೨೫ಕೆಜಿಎಫ್4ಪೋಷಕರು ಪುಸ್ತಕ ಖರೀದಿ ಮಾಡಿಕೊಂಡು ಹೋಗುತ್ತಿರುವುದು. | Kannada Prabha

ಸಾರಾಂಶ

ಶಾಲೆಯಲ್ಲಿ ಪುಸ್ತಕ, ಬ್ಯಾಗ್, ಸಮವಸ್ತ್ರ ಇತರೆ ಸಾಮಗ್ರಿಗಳನ್ನು ಮಾರಾಟ ಮಾಡುವುದು ನಿಯಮ ಬಾಹಿರ. ಆದರೂ ಮಹಾವೀರ್‌ ಶಾಲೆಯಲ್ಲಿ ಮಕ್ಕಳಿಗೆ ನೋಟ್‌ ಪುಸ್ತಕ, ಶೂ, ಸಮವಸ್ತ್ರವನ್ನು ದುಪ್ಪಟ್ಟು ಬೆಲೆಗೆ ವಿತರಣೆ ಮಾಡಿದ ಆರೋಪ.

ಕನ್ನಡಪ್ರಭ ವಾರ್ತೆ ಕೆಜಿಎಫ್ಶ್ರೀ ಮಹಾವೀರ್ ಜೈನ್ ಶಾಲೆಯ ಆಡಳಿತ ಮಂಡಳಿಯವರು ಅಕ್ರಮವಾಗಿ ಶಾಲೆಯಲ್ಲಿ ಮಕ್ಕಳ ಶಾಲಾ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಬಿಇಒ ಮುನಿವೆಂಕಟರಮಣಚಾರಿ ನೋಟಿಸ್ ಜಾರಿ ಮಾಡಿದ್ದು, ನಿಯಮ ಉಲ್ಲಂಘಿಸಿದಲ್ಲಿ ಶಾಲೆಯ ಮಾನ್ಯತೆ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.ಶ್ರೀ ಮಹಾ ವೀರ್ ಜೈನ್ ಶಾಲೆಯ ಆಡಳಿತ ಮಂಡಳಿಯವರು ಮಕ್ಕಳಿಗೆ ಶಾಲೆಯಲ್ಲೇ ನೋಟ್‌ ಪುಸ್ತಕ, ಬ್ಯಾಗ್, ಶೂ ನಮ್ಮ ಶಾಲೆಯಲ್ಲೇ ಖರೀದಿ ಮಾಡಬೇಕೆಂದು ಮುಖ್ಯಶಿಕ್ಷಕಿ ಲತಾ ಪೋಷಕರಿಗೆ ಮೆಸೇಜ್ ಮಾಡಿದ ಹಿನ್ನೆಲೆಯಲ್ಲಿ ಶಾಲೆಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಿಯಮ ಉಲ್ಲಂಘನೆ: ಸರ್ಕಾರದ ಆದೇಶದಂತೆ ಶಾಲೆಯಲ್ಲಿ ಪುಸ್ತಕ, ಬ್ಯಾಗ್, ಸಮವಸ್ತ್ರ ಇತರೆ ಸಾಮಗ್ರಿಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಸರ್ಕಾರದ ಆದೇಶವಿದ್ದರೂ ಆದೇಶಕ್ಕೆ ಕ್ಯಾರೇ ಅನ್ನದೆ ಶುಕ್ರವಾರ ಪೋಷಕರನ್ನು ಶಾಲೆಗೆ ಕರೆಸಿಕೊಂಡು ಮಕ್ಕಳ ನೋಟ್‌ ಪುಸ್ತಕ, ಬ್ಯಾಕ್, ಸಮವಸ್ತ್ರಗಳನ್ನು ದುಪ್ಪಟ್ಟು ಹಣವನ್ನು ಪಡೆದುಕೊಂಡು ವಿತರಣೆ ಮಾಡಿದ್ದಾರೆ.ನಗರಸಭೆ ಸದಸ್ಯೆ ದೂರುಶಾಲೆಯ ಮುಖ್ಯಶಿಕ್ಷಕಿ ಲತಾರೊಂದಿಗೆ ಶಾಲಿನಿ ನಂದಕುಮಾರ್ ಪ್ರಶ್ನೆ ಮಾಡಿ ನೀವು ಹೇಗೆ ಶಾಲೆಯಲ್ಲಿ ದುಪ್ಪಟ್ಟು ಹಣ ಪಡೆದುಕೊಂಡು ಪುಸ್ತಕ ಮತ್ತು ಇತರೆ ವಸ್ತುಗಳನ್ನು ಮಾರಾಟ ಮಾಡುತ್ತೀರಾ ಎಂದು ಪ್ರಶ್ನಿಸಿದಾಗ ಇಬ್ಬರ ಮಧ್ಯೆ ವಾಕ್ಸಮರ ನಡೆಯಿತು, ನಂತರ ಬಿಇಓ ಕಚೇರಿಗೆ ಹೋಗಿ ಶಾಲೆಯ ವಿರುದ್ಧ ದೂರು ನೀಡಿದ್ದಾರೆ.ನಾಮ್‌ ಕೆವಾಸ್ತೆ ನೋಟಿಸ್‌

ಮೂಲ ಸ್ಥಾನ ಬಿಟ್ಟು ಇಲಾಖೆಯ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಬಿಇಒ ಅನಧಿಕೃತ ಶಾಲೆ ಎಂದು ನೋಟಿಸ್ ಬೋರ್ಡ್‌ನಲ್ಲಿ ಶ್ರೀ ಮಹಾವೀರ್ ಜೈನ್ ಶಾಲೆಯ ಹೆಸರು ಪ್ರಕಟಿಸಿದ್ದರು, ಈ ಶಾಲೆ ಬಿಇಒ ಕಚೇರಿಗೆ ಹೊಂದಿಕೊಂಡಿದ್ದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಬರೀ ನೋಟಿಸ್ ಕೊಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ, ಇನ್ನಾದರೂ ಖಾಸಗಿ ಶಾಲೆಗಳ ಮೂಲತ ಸೌಕರ್ಯಗಳ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕಿದೆ ಎಂದು ಪೋಷಕರು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ