ಮಿತಿಮೀರಿದ ಮದ್ಯ ಅಕ್ರಮ ಮಾರಾಟ: ಗ್ರಾಮಸ್ಥರ ಪ್ರತಿಭಟನೆ

KannadaprabhaNewsNetwork |  
Published : Nov 07, 2024, 12:43 AM IST
ದೊಡ್ಡಬಳ್ಳಾಪುರ ತಾಲೂಕಿನ ಸುತ್ತಹಳ್ಳಿ ತಾಂಡದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಬೇಸತ್ತ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. | Kannada Prabha

ಸಾರಾಂಶ

ಗ್ರಾಮದಲ್ಲಿನ ಚಿಲ್ಲರೆ ಅಂಗಡಿಗಳಲ್ಲಿ ಬೇಕಾಬಿಟ್ಟಿಯಾಗಿ ಮದ್ಯ ಅಕ್ರಮ ಮಾರಾಟ ನಡೆಯುತ್ತಿದ್ದು, ರಾತ್ರಿ ವೇಳೆ ಯಾವ ಸಮಯದಲ್ಲಿಯಾದರೂ ಮದ್ಯ ದೊರೆಯುತ್ತದೆ. ಇದರಿಂದಾಗಿ ಗ್ರಾಮದಲ್ಲಿ ಗಲಾಟೆ, ಆತ್ಮಹತ್ಯೆ ಪ್ರಕರಣಗಳು ಮಿತಿಮೀರಿವೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಅಕ್ರಮ ಮದ್ಯ ಮಾರಾಟದಿಂದ ಬೇಸತ್ತಿರುವ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಘಟನೆ ತಾಲೂಕಿನ ಸುತ್ತಹಳ್ಳಿ ತಾಂಡದಲ್ಲಿ ನಡೆದಿದೆ. ದೊಡ್ಡಬೆಳವಂಗಲ ಹೊಬಳಿ, ತಿಪ್ಪೂರು ಗ್ರಾಪಂ ವ್ಯಾಪ್ತಿಯ ಸುತ್ತಹಳ್ಳಿ ತಾಂಡ ಗ್ರಾಮದಲ್ಲಿನ ಚಿಲ್ಲರೆ ಅಂಗಡಿಗಳಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದು, ಪುರುಷರಾಧಿಯಾಗಿ ಯುವಕರು, ಮಹಿಳೆಯರು ಮದ್ಯದ ದಾಸರಾಗಿದ್ದಾರೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಈ ಕುರಿತು ಮಾತನಾಡಿರುವ ಗ್ರಾಪಂ ಸದಸ್ಯ ಸಿದ್ದೆನಾಯಕ, ಯುವ ಮುಖಂಡ ಶಾಂತಕುಮಾರ್, ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ತೀವ್ರವಾಗಿದ್ದು, ಯಾರಿಗೆ ದೂರು ನೀಡಿದರೂ ಕ್ರಮಕೈಗೊಳ್ಳುತ್ತಿಲ್ಲ. ಗ್ರಾಮದಲ್ಲಿನ ಚಿಲ್ಲರೆ ಅಂಗಡಿಗಳಲ್ಲಿ ಬೇಕಾಬಿಟ್ಟಿಯಾಗಿ ಮದ್ಯ ಅಕ್ರಮ ಮಾರಾಟ ನಡೆಯುತ್ತಿದ್ದು, ರಾತ್ರಿ ವೇಳೆ ಯಾವ ಸಮಯದಲ್ಲಿಯಾದರೂ ಮದ್ಯ ದೊರೆಯುತ್ತದೆ. ಇದರಿಂದಾಗಿ ಗ್ರಾಮದಲ್ಲಿ ಗಲಾಟೆ, ಆತ್ಮಹತ್ಯೆ ಪ್ರಕರಣಗಳು ಮಿತಿಮೀರಿವೆ. ಅಬಕಾರಿ ಇಲಾಖೆಗೆ ದೂರು ನೀಡಿದರೆ, ದಾಳಿ ನಡೆಸುವ ಮುನ್ನವೇ ಮಾಹಿತಿ ನೀಡಿ, ಸ್ಥಳಾಂತರ ಮಾಡಲು ಅವಕಾಶ ನೀಡಿ ನಂತರ ದಾಳಿ ನಡೆಸುತ್ತಾರೆ ಎಂದು ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದ ಹೊರತು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ತಿಳಿಸಿದರು.

ಮದ್ಯ ಅಕ್ರಮ ಮಾರಾಟದ ಕುರಿತು ಕೆರಳಿರುವ ಗ್ರಾಮಸ್ಥರು, ಚುನಾಯಿತ ಜನಪ್ರತಿನಿಧಿಗಳು, ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕಿನಲ್ಲಿ ಮದ್ಯ ಅಕ್ರಮ ಮಾರಾಟ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಚಿಲ್ಲರೆ ಅಂಗಡಿಗಳು, ಗೂಡಂಗಂಡಿಗಳಲ್ಲಿ ಅಕ್ರಮ ಮಾರಾಟ ವ್ಯಾಪಕವಾಗಿದೆ ಎಂದು ದೂರಿದರು

.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ
‘ಆತ್ಮನಿರ್ಭರ ಭಾರತ’ಕ್ಕೆ ಅಮೆಜಾನ್ ಪುಷ್ಟಿ