ಮರಳು ಅಕ್ರಮ ಸಾಗಾಟ: ವಾಹನ ಸಹಿತ ಸೊತ್ತು ವಶ, ದಂಡ

KannadaprabhaNewsNetwork |  
Published : Jan 12, 2026, 02:45 AM IST
ಕಾವೇರಿ ನದಿ ದಡದಲ್ಲಿ ಪೊಲೀಸರು ಅಕ್ರಮ ಮರಳುಗಾರಿಕೆ ಬಗ್ಗೆಪರಿಶೀಲಿಸಿ ಸಾಕ್ಷಾಧಾರಗಳನ್ನು ಕಲೆ ಹಾಕಿದರು. | Kannada Prabha

ಸಾರಾಂಶ

ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ಪೊಲೀಸರು ಮರಳು ಸಹಿತ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ ದಂಡ ವಿಧಿಸಿದ್ದಾರೆ.

ನಾಪೋಕ್ಲು: ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ಪೊಲೀಸರು ಮರಳು ಸಹಿತ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ ದಂಡ ವಿಧಿಸಿದ್ದಾರೆ.ಇಲ್ಲಿಗೆ ಸಮೀಪದ ಬೇತು ಗ್ರಾಮದ ಕಾರೆಕಾಡು ಬಳಿಯ ಕಾವೇರಿ ನದಿ ದಡದಿಂದ ಟಿಪ್ಪರ್ ವಾಹನದಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸ್ ಐ ರಾಘವೇಂದ್ರ ಹಾಗೂ ಸಿಬ್ಬಂದಿ ಮಾಲು ಸಹಿತ ಟಿಪ್ಪರ್

ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಬಳಿಕ ಪ್ರಕರಣವನ್ನು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ ವಾಹನದ ಮಾಲೀಕರಿಗೆ 32 320 ರು. ದಂಡ ವಿಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಬಳಿಕ ಕಾವೇರಿ ನದಿ ದಡಕ್ಕೆ ಮರಳು ಸಾಗಾಟಕ್ಕೆ ತೆರಳುವ ರಸ್ತೆಗೆ ಅಡ್ಡವಾಗಿ ಜೆಸಿಬಿ ಯಂತ್ರವನ್ನು ಬಳಸಿ ಚರಂಡಿ ತೆಗೆಸಿದ ಪೊಲೀಸರು ಮರಳುಗಾರಿಕೆಗೆ ವಾಹನಗಳನ್ನು ತೆರಳದಂತೆ ಕ್ರಮ ಕೈಗೊಂಡಿದ್ದಾರೆ. ಇಲ್ಲಿನ ಠಾಣೆ ವ್ಯಾಪ್ತಿಯ ಕೆಲವು ಭಾಗಗಳಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಬಗ್ಗೆ ತಿಳಿದು ಬಂದರೆ ಸಾರ್ವಜನಿಕರು ಇಲ್ಲಿನ ಪೊಲೀಸ್ ಠಾಣೆಗೆ ಅಥವಾ ಸಂಬಂಧಪಟ್ಟ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮಾಹಿತಿ ನೀಡುವಂತೆ ಇಲಾಖೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ