ನಡವತ್ತಿ ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ

KannadaprabhaNewsNetwork |  
Published : Feb 15, 2025, 12:31 AM IST
ಫೋಟೋ: 14 ಹೆಚ್‌ಎಸ್‌ಕೆ 1ಹೊಸಕೋಟೆ ನಗರದ ತಾಲೂಕು ಕಚೇರಿಯಲ್ಲಿ ಪ್ರಜಾವಿಮೋಚನಾ ಚಳುವಳಿ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ನೇತೃತ್ವದಲ್ಲಿ ತಹಸೀಲ್ದಾರ್ ಸೋಮಶೇಖರ್ ಅವರಿಗ ಮನವಿ ಸಲ್ಲಿಸಿ ನಡವತ್ತಿಯಲ್ಲಿ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ತಾಲೂಕಿನ ನಡವತ್ತಿಯ ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ ನಿರ್ಮಿಸಿ ಕೆಲ ಗ್ರಾಪಂ ಸದಸ್ಯರು ಮಾರಾಟಕ್ಕೆಮುಂದಾಗಿದ್ದು ಸರ್ಕಾರಿ ಜಾಗದಲ್ಲಿ ಬಡವರಿಗೆ ತಲಾ 4 ಎಕರೆ ಜಮೀನು ಅಂಬೇಡ್ಕರ್ ಭವನಕ್ಕೆ 1 ಎಕರೆ ಭೂಮಿ ಮಂಜೂರು ಮಾಡಬೇಕು ಎಂದು ಪ್ರಜಾ ವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ಮನವಿ ಮಾಡಿದರು.

ಹೊಸಕೋಟೆ: ತಾಲೂಕಿನ ನಡವತ್ತಿಯ ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ ನಿರ್ಮಿಸಿ ಕೆಲ ಗ್ರಾಪಂ ಸದಸ್ಯರು ಮಾರಾಟಕ್ಕೆಮುಂದಾಗಿದ್ದು ಸರ್ಕಾರಿ ಜಾಗದಲ್ಲಿ ಬಡವರಿಗೆ ತಲಾ 4 ಎಕರೆ ಜಮೀನು ಅಂಬೇಡ್ಕರ್ ಭವನಕ್ಕೆ 1 ಎಕರೆ ಭೂಮಿ ಮಂಜೂರು ಮಾಡಬೇಕು ಎಂದು ಪ್ರಜಾ ವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ಮನವಿ ಮಾಡಿದರು.

ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಸೋಮಶೇಖರ್‌ಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸಬಾ ಹೋಬಳಿ ನಡುವತ್ತಿ ಗ್ರಾಮದ ಸರ್ವೆ ನಂ. 88ರಲ್ಲಿ 46 ಎಕರೆ 35 ಗುಂಟೆ ಸರ್ಕಾರಿ ಭೂಮಿ ಇದ್ದು ಸದರಿ ಭೂಮಿಯಲ್ಲಿ 2 ಎಕರೆಯಲ್ಲಿ ಅಕ್ರಮ ಬಡಾವಣೆ ನಿರ್ಮಿಸಿ ನಿವೇಶನಗಳನ್ನು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರುಗಿಸಿ ಒತ್ತುವರಿ ಭೂಮಿ ಸರ್ಕಾರದ ವಶಕ್ಕೆ ಪಡೆಯಬೇಕು ಎಂದರು.

ನಡುವತ್ತಿ ಗ್ರಾಮದಲ್ಲಿ ಪರಿಶಿಷ್ಠ ಜಾತಿ, ಹಿಂದುಳಿದ ಜಾತಿಗಳ ಆನೇಕ ಕುಟುಂಬಗಳಿಗೆ 70 ವರ್ಷಗಳಿಂದಲೂ ನಿವೇಶನ ಇಲ್ಲದೆ ಕಡುಬಡತನದಲ್ಲಿ ಜೀವನ ಸಾಗಿಸುತ್ತಿರುವ 100 ಕುಟುಂಬಗಳಿಗೆ ನಿವೇಶನ ವಿತರಿಸಲು ಸರ್ವೆ ನಂ. ೮೮ರಲ್ಲಿ 46 ಎಕರೆ 35 ಗುಂಟೆ ಸರ್ಕಾರಿ ಭೂಮಿಯಲ್ಲಿ 4 ಎಕರೆ ಭೂಮಿಯನ್ನು ನಿವೇಶನಗಳಿಗಾಗಿ ಆದೇಶ ಮಾಡಿ ಕಾಯ್ದಿರಿಸಬೇಕು. ಡಾ| ಅಂಬೇಡ್ಕರ್ ಭವನ, ಗ್ರಂಥಾಲಯಕ್ಕೆ 1 ಎಕರೆ ಜಮೀನು ಮಂಜೂರು ಮಾಡಬೇಕು. ಉಳಿಕೆ ಸರ್ಕಾರಿ ಭೂಮಿಯನ್ನು ಸಾರ್ವಜನಿಕರ ಉಪಯೋಗಕ್ಕೆ, ಆಸ್ಪತ್ರೆ ಸರ್ಕಾರಿ ಶಾಲೆ, ಆಟದ ಮೈದಾನ ಸೇರಿದಂತೆ ಇತರೆ ಉದ್ದೇಶಗಳಿಗೆ ಆದೇಶ ಮಾಡಿ ಪಹಣಿಯಲ್ಲಿ ನಮೂದಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಪಧಾಧಿಕಾರಿಗಳಾದ ದೇವರಾಜ್, ಎಸ್‌ಕೆ ಮಾದೇಶ್, ವಿಜಯ್ ಕುಮಾರ್, , ಸಬ್ ಮಂಗಲ ರವಿ, ರಜಿಯಾ ಬೇಗಂ, ನಡವತ್ತಿ ಮುನಿರಾಜು ಹಾಜರಿದ್ದರು.

ಫೋಟೋ: 14 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕಿನ ನಡವತ್ತಿಯಲ್ಲಿ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಪ್ರಜಾವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ನೇತೃತ್ವದಲ್ಲಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ