ಪಡಿತರ ಅಕ್ರಮ‌ ಸಾಗಣೆ: ಮೂರು ಕ್ವಿಂಟಾಲ್ ಅಕ್ಕಿ, ಆರೋಪಿ ವಶ

KannadaprabhaNewsNetwork |  
Published : Jan 06, 2025, 01:00 AM IST
ಆಲ್ದೂರು ಗೇಟ್ ನಲ್ಲಿ ಅಕ್ರಮ‌ ಪಡಿತರ ಸಾಗಿಸುತ್ತಿದ್ದ ವ್ಯಕ್ತಿ ಬಂಧಿಸಿ 3 ಕ್ವಿಂಟಾಲ್ ಪಡಿತರ ವಶ | Kannada Prabha

ಸಾರಾಂಶ

ಸರ್ಕಾರದಿಂದ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಪಡಿತರ ವಶಕ್ಕೆ ಪಡೆದ ಘಟನೆ ತಾಲೂಕಿನ ಆಲ್ದೂರು ಗೇಟ್ ಬಳಿ ಭಾನುವಾರ ನಡೆದಿದೆ.

ಚಾಮರಾಜನಗರ: ಸರ್ಕಾರದಿಂದ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಪಡಿತರ ವಶಕ್ಕೆ ಪಡೆದ ಘಟನೆ ತಾಲೂಕಿನ ಆಲ್ದೂರು ಗೇಟ್ ಬಳಿ ಭಾನುವಾರ ನಡೆದಿದೆ. ಟೀ.ನರಸೀಪುರ ತಾಲೂಕಿನ ಮುದಸೀರ್ ಬಂಧಿತ ಆರೋಪಿ. ಈತ ಅಕ್ರಮವಾಗಿ ಪಡಿತರ ಸಾಗಾಟ ಮಾಡುತ್ತಿದ್ಧ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದು ಬಂಧಿತನಿಂದ 1 ಕ್ವಿಂಟಾಲ್ ಅಕ್ಕಿ, 2 ಕ್ವಿಂಟಾಲ್ ರಾಗಿ, ಪ್ಯಾಸೆಂಜರ್ ಆಟೋವನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಚಾಮರಾಜನಗರ ಆಹಾರ ನಿರೀಕ್ಷಕ ದಿನಕರ್, ಕುದೇರು ಠಾಣೆ ಪಿಎಸ್ಐ ಕುಮುದಾ ಹಾಗೂ ಪೊಲೀಸ್ ಸಿಬ್ಬಂದಿ ನಾಗನಾಯಕ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ